Home / ಕವನ / ಕವಿತೆ / ಬಸಿಯಿಂದ ಕುಡಿಯುವದು

ಬಸಿಯಿಂದ ಕುಡಿಯುವದು

ನನಗೆಂದೂ ಅದೃಷ್ಟ ಒಲಿದಿಲ್ಲ
ಈಗಲೂ ಸಹ ನಾನದನ್ನು ಪಡೆಯಬಯಸಿಲ್ಲ
ನಿಜವಾಗಿ ಅದರಿಂದ ನನಗೇನೂ ಆಗಬೇಕಿಲ್ಲ
ಯಾಕೆನ್ನಿ ನಾನೀಗ ಸುಖಿಯಾಗಿಯೇ ಇದ್ದೇನಲ್ಲ !

ಸಾಗುತಿರುವ ನನ್ನೀ ಪಯಣದ ದಾರಿಯಲಿ
ಬಿತ್ತಿದ್ದಕ್ಕಿಂತ ಹೆಚ್ಚಿನದನ್ನೇ ಬೆಳೆದಿದ್ದೇನೆ.
ನಾ ಬಸಿಯಿಂದಲೇ ಕುಡಿಯುತಿರುವೆ,
ಯಾಕೆನ್ನಿ,ನನ್ನ ಕಪ್ಪು ತುಂಬಿ ತುಳುಕಿದೆ !

ನಾನೇನು ಮಹಾ ಸಿರಿವಂತನೇನಲ್ಲ;
ಅಗೊಮ್ಮೆ ಈಗೊಮ್ಮೆ ದುರ್ಭರ ಎನಿಸಿದೆ
ಆದರೂ,ಸಂಬಂಧಿಕರ,ಸ್ನೇಹಿತರ ಒಲವಿನಿಂದಾಗಿ,
ನಾನೂ, ಸಾಕಷ್ಟು ಸಿರಿವಂತ ಎಂದೆನಿಸುತಿದೆ !

ಆ ದೇವನ ಆಶೀರ್ವಾದಕೆ ಧನ್ಯವಾದಗಳು
ಅವನ ಕೃಪೆ ಎನ್ನ ಮೇಲೆ ಪೂರ್ಣ ಇದೆ
ನಾ ಬಸಿಯಿಂದಲೇ ಕುಡಿಯುತಿರುವೆ
ಯಾಕೆನ್ನಿ ನನ್ನ ಕಪ್ಪು ತುಂಬಿ ತುಳುಕಿದೆ !

ಧೈರ್ಯ, ಸಾಮರ್ಥ್ಯ ಗಳು ಅವನವೇ ಬಳುವಳಿ
ಸಾಗುವ ದಾರಿ,ಏರು ದುರ್ಗಮ ಎನಿಸಿದಾಗೆಲ್ಲ,
ಮತ್ತೊಮ್ಮೆ,ಹಾರೈಸು ಎಂದು ನಾ ಬೇಡುವುದೇ ಇಲ್ಲ
ಈಗಾಗಲೇ ಸಾಕಷ್ಟು ಹರಸಿರುವ ಅವನು !

ನಾವು ಎಂದೂ ನಿರತರಾಗದೇ ಇರೋಣ
ಮತ್ತೊಂದು ಸಹಾಯಕ ಭಾರ ಭರಿಸೋಣ
ಆಗ ನಾವೆಲ್ಲರೂ ಬಸಿಯಿಂದಲೇ ಕುಡಿಯೋಣ
ನಮ್ಮೆಲ್ಲರ ಕಪ್ಪುಗಳು ತುಂಬಿ ತುಳುಕಿದಾಗ !

ನಿಮ್ಮೆಲ್ಲರ ಕಪ್ಪುಗಳು ತುಂಬಿ ತುಳುಕುವಂತಾಗಲಿ

ಮೂಲ: ಜಾನ್ ಪಾಲ್ ಮೂರ್
Drinking From The Saucer by John Paul Moore


Tagged:

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...