Home / ಕವನ / ಹನಿಗವನ / ಹನಿಗಳು

ಹನಿಗಳು

ಇಲ್ಲಿ
ಸಣ್ಣಗೆ ಮಳೆ
ನಿನ್ನೆದುರು
ಕುಳಿತು
ಧ್ಯಾನಿಸಿದಂತೆ


ಮಗು
ಆಕೆಯ ತೊಡೆಯ
ಮೇಲೆ
ಹರಿದಾಡಿತು
ನದಿ
ನಡೆದು
ಹಾಡಿದಂತೆ


ನಿನ್ನೆದುರೇ
ರಮ್ಯತೆ
ಹುಟ್ಟುವುದಾದರೆ
ನಾನು
ಮರವಾಗುವೆ
ನೀ ಅಲ್ಲಿ
ಹೂವಾಗು


ಕಡಲು ಅಬ್ಬರಿಸುತ್ತಿದೆ
ಮೋಡ ಧ್ಯಾನಿಸುತ್ತಿದೆ
ಆಕಾಶದ ಬಯಲಲ್ಲಿ
ಆಕೆ
ಬರುವ ಸುಳಿವು ಸಿಕ್ಕಿದೆ
ಮುಂಗಾರಿನ ಹಂಗಾಮಿನಲ್ಲಿ


ಬಿಸಿಲ ಬಯಲ ಕಡಲ ಮೇಲೆ
ಸುಳಿದು ಬೀಸುವ ಗಾಳಿ
ಆಕೆಯ ನೆನಪಗಂಧವ ತರಲು
ದಂಡೆಯಲ್ಲಿನ ಹಕ್ಕಿ ನಾಚಿತು


ದಂಡೆಯಲ್ಲಿ ಅವರು
ನಡೆದು ಹೋದರು
ಜೋಡಿ ಹೆಜ್ಜೆಗೆ ನೆರಳು ಸಾಕ್ಷಿ
ಹೆಜ್ಜೆಗಳಲ್ಲಿ ಒಲವು ನಗುತ್ತಿತ್ತು
ಅವರ
ಪಾದಗಳಿಗೆ
ಮುತ್ತಿಕ್ಕಿದ್ದ ಅಲೆ
ಪ್ರೇಮ ಪಲ್ಲವಿ ಬರೆಯುತ್ತಿತ್ತು.


ಬಟಾ ಬಯಲು
ವಿಶಾಲ ಕಡಲ ಬಾಗಿಲೊಳಗೆ
ನುಸುಳಿದೆ ಬೆಳಗು
ಅದು ಬೇರೇನು ಅಲ್ಲ ;
ನಿನ್ನದೇ ಉಸಿರು


ಉರಿ ಉರಿ ಬಿಸಿಲು
ಬರ ಬರನೆ ಬೀಸುವ ಗಾಳಿ
ಗಾಳಿಗೆ ಮೈ ಮುರಿದೇಳುವ ಕಡಲು
ಮುಗಿಲಿಗೆ ದಿಗಿಲು ಬಡಿದಂತೆ
ನೋಡುವ ಅವಳು


ಸಾಕು ಸಾಕಾಗಿದೆ ಈ ಬಿಸಿಲು
ಎಷ್ಟು ಋತುಗಳ ಕಳೆದೆನೋ ಹೀಗೆ
ಒಂಟಿಯಾಗಿ ಒಬ್ಬಂಟಿಯಾಗಿ
ಏಕಾಂಗಿಯಾಗಿ
ಜೊತೆಗೆ ಬುದ್ಧನೂ ನಿಲ್ಲಲಿಲ್ಲ
ರೂಮಿಯೂ ನಿಲ್ಲಲಿಲ್ಲ
ಎಲ್ಲರೂ ಬೆಳಕ ಬೆನ್ನ ಹತ್ತಿದವರೇ
ನಾನು ಕಾದಿದ್ದೇನೆ
ನಿನಗಾಗಿ ; ನಿನ್ನ ಕಿರುನಗೆಗಾಗಿ


ಇರುಳು ಹಗಲು ನದಿ ಕಡಲು
ಬೆಡಗು ಬಯಲು ಹಕ್ಕಿ ಚುಕ್ಕಿ
ಇಳೆ ಮಳೆ ಆಕಾಶ ಚಂದಿರ
ಒಂದಾದವು
ಒಂದಾದ ಮೇಲೊಂದರಂತೆ
ದಶಕಗಳು ಕಳೆದವು
ನಾವು ಇಲ್ಲೇ ಇದ್ದೇವೆ
ಚಲನೆಯೊಳಗೂ ಚಲನೆ ಮರೆತು
ಮೌನದೊಳಗು ಮಾತು ಮೊರೆತು


ಬಯಲ ಬೆಳಕು ಕೂಡಿತು
ಕ್ಷಿತಿಜ ಭೂ ಆಕಾಶ ಬೆಸೆಯಿತು
ಅದರಾಚೆಯ ಹುಡುಕಾಟ
ನನಗೂ ನಿನಗೂ


Tagged:

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...