Home / ಕವನ / ಕವಿತೆ / ಮಂಗಲಂ ಜಯ ಜಯತು ಜಗನ್ಮಾತೆ

ಮಂಗಲಂ ಜಯ ಜಯತು ಜಗನ್ಮಾತೆ

ಮಂಗಲಂ ಜಯ ಜಯತು ಜಗನ್ಮಾತೆ
ಅಂಗಜಹರರೂಪ ಮಂಗಲಾಂಗಿಗೆ
ಸಂಗವಿದೂರ ದುಷ್ಕೃತಿ ಭಂಗತುಂಗ ವಿಕ್ರಮಗೆ || ಪ ||

ಹರಿ ಹರ ಬ್ರಹ್ಮರನು ತಾಯಾಗಿ ರಕ್ಷಿಪಳು
ಸರಿಗಾಣದಿರುವಂಥ ಹರಮೂರ್ತಿಗೆ
ಪರಿಪರಿಯ ವರ್ಣದಲಿ ಹೊಳೆಯುತಲಿ
ಪರಿಪೂರ್ಣ ಸುರಜಾಲಮಯಳಾದ ಸ್ಥಿರಕೀರ್ತಿಗೆ || ೧ ||

ಕೊಬ್ಬಿದಾ ಮಧುಕೈಟಭಾಸುರರ ಸಂಹರಿಸಿ
ಕೊಬ್ಬಿರಿದು ಉಬ್ಬಿದಾ ಮಹಾಕಾಳಿಗೆ
ಅಬ್ಬರಿಸಿ ಬರುವಂಥಾ ದುಷ್ಟದೈತ್ಯರನೆಲ್ಲ
ಇಬ್ಭಾಗ ಸೀಳಿ ಶಾಶ್ವಿತಳಾದ ರಣಕೇಳಿಗೆ || ೨ ||

ಸಿಟ್ಟಿಲೆ ಮಹಿಷನನು ಶಿರಮೆಟ್ಟಿ ಸಂಹರಿಸಿ
ಕಷ್ಟವನು ಕಳಿದಂಥ ಮಹಾಲಕ್ಷ್ಮಿಗೆ ವಟ್ಟರಸಿ ಬರುವಂಥ
ಕೆಟ್ಟ ದೈತ್ಯರನೆಲ್ಲ ಕುಟ್ಟಿ ಸವರಿದ ವೀರ ಜಯಲಕ್ಷ್ಮಿಗೆ || ೩ ||

ಚಂಡಮುಂಡರದೋದ೯ಂಡ ದ್ಯೆತ್ಯರ ಶಿರವ
ಚಂಡಾಡಿ ಮೆರದಂಥ ಚಾಮುಂಡಿಗೆ
ಅಂಡಲೆದು ಒದರುತಲೆ ಬರುವಂಥ ಬಂಡರನು
ತುಂಡಾಗಿ ಖಂಡಿಸಿದ ಪ್ರಚಂಡಿಗೆ || ೪ ||

ಉದ್ಧಟರು ಶುಂಭ-ನಿಶುಂಭರೆಂಬುವರನ್ನು
ಯುದ್ಧದಲ್ಲಿ ಕೊಂದಂಥ ಬ್ರಹ್ಮಾಣಿಗೆ
ಸಿದ್ದ ಶಾಶ್ವಿತನಾದ ಗುಡಿಪುರದ ಕಲ್ಮಾನ
ಪೊದ್ದು ಪೊರೆದಿಹ ಗುರು ಕಲ್ಯಾಣಿಗೆ || ೫ ||
*****

 

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...