Home / ಕವನ / ಕವಿತೆ / ಈ ಗೆಳೆತನ….

ಈ ಗೆಳೆತನ….

ನನ್ನೆಲ್ಲಾ ಪದ್ಯಗಳಲ್ಲಿರುವಂತೆ
ಇಲ್ಲೂ ತಾರೆ, ಮೋಡ, ಗಾಳಿ, ಕಡಲು, ಸೂರ್ಯರಿದ್ದಾರೆ.
ನಿನಗಿಷ್ಟವಾದರೆ ಓದು ಒತ್ತಾಯವಿಲ್ಲ
ಇಷ್ಟವಾಗದಿದ್ದರೆ ಬೇಡ
ಕಿಂಚಿತ್ತೂ ಕೋಪವಿಲ್ಲ.

ಆದರೆ ನಾನು ಪ್ರೀತಿಸುವ
ಗಾಳಿ, ಮೋಡ, ತಾರೆಯರನ್ನು
ನಿಂದಿಸಬೇಡ.
ಅವರ ಬಗ್ಗೆ ಯಾಕೆ ಬರೆಯುತ್ತಿ?
ಎಂದು ಕೇಳಬೇಡ.
ಅವರ ಬಗ್ಗೆ ಎಷ್ಟು ಬರೆಯುತ್ತಿ?
ಎಂದು ಕಾಡಬೇಡ.

ನಾನೀಗ-
ನನ್ನ-ನಿನ್ನ ಗೆಳೆತನದ ಬಗ್ಗೆ
ಬರೆಯುತ್ತಿದ್ದೇನೆ.
ನಿನ್ನ ಗೈರು ಹಾಜರಿಯಲ್ಲಿ
ತಾರೆ, ಸೂರ್ಯ, ಮೋಡ, ಗಾಳಿ
ನನ್ನ ಜತೆಯಲ್ಲಿದ್ದಾರೆ.

ಈ ಗೆಳೆತನ ಮೋಡಗಳ ಹಾಗೆ.
ನಾಲ್ಕು ಹನಿ ತಂಪು ಚೆಲ್ಲುತ್ತೇನೆ
ಎಂದು ಹೇಳುವುದಿಲ್ಲ.
ಚೆಲ್ಲಬೇಡ ಎಂದರೆ
ಕೇಳುವುದೂ ಇಲ್ಲ.

ಈ ಗೆಳೆತನ ಕಡಲೊಳಗಿನ
ಅಲೆಗಳ ಹಾಗೆ.
ತಡಿಯಲ್ಲಿ ನಿಂತರೆ ಓಡಿಬಂದು
ಕಾಲನ್ನು ಚುಂಬಿಸುತ್ತದೆ.
ಚುಂಬಿಸುತ್ತೇನೆ ಎಂದು ಹೇಳುವುದಿಲ್ಲ
ಚುಂಬಿಸಬೇಡ ಎಂದರೆ
ಕೇಳುವುದೂ ಇಲ್ಲ.

ಈ ಗೆಳೆತನ ಗಾಳಿಯ ಹಾಗೆ.
ಎದೆಯೊಳಗೆ ನುಗ್ಗಿ ಹೊರಬರುತ್ತದೆ.
ಹೋಗುತ್ತೇನೆ ಎಂದು ಹೇಳುವುದಿಲ್ಲ.
ಹೋಗಬೇಡ ಎಂದರೆ
ಕೇಳುವುದೂ ಇಲ್ಲ.

ಆದರೂ ಅನಿಸುತ್ತದೆ.
ಒಮ್ಮೊಮ್ಮೆ ಈ ಗೆಳೆತನ
ಧೂಳಿನ ಹಾಗೆ ಮೆತ್ತಿಕೊಳ್ಳುತ್ತದೆ.
ಕೊಡವಿದರೆ ಚದುರಿ
ಚೆಲ್ಲಿ ಹೋಗುತ್ತದೆ.

ಹೌದು
ನನ್ನ-ನಿನ್ನ ಗೆಳೆತನದಲ್ಲಿ
ಮೆಚ್ಚುವಂಥಾದ್ದು ಇದೆ
ಚುಚ್ಚುವಂಥಾದ್ದು ಇದೆ
ಕೊಚ್ಚಿ ಹರಿದು ಹೋಗುವಂಥಾದ್ದು ಇದೆ.

ಅಂದಹಾಗೆ ಗೆಳೆಯಾ…
ಈ ಗೆಳೆತನದಲ್ಲಿ ನಾನು
ಶಾಮೀಲಾಗಿದ್ದರೂ ಇದು
ಇಡಿಯಾಗಿ ನಿನ್ನನ್ನು ಕುರಿತೆ
ಬರೆದ ಕವನ. ನಿಜ,
ಬರೆ ಎಂದೇನೂ ನೀನು ಕೇಳಿಲ್ಲ.
ಆದರೆ ಬರೆಯಬೇಡ ಎಂದರೆ ನಾನು ಕೇಳುವುದೂ ಇಲ್ಲ.


Tagged:

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...