Home / ಕವನ / ಕವಿತೆ / ಈ ಗೆಳೆತನ….

ಈ ಗೆಳೆತನ….

ನನ್ನೆಲ್ಲಾ ಪದ್ಯಗಳಲ್ಲಿರುವಂತೆ
ಇಲ್ಲೂ ತಾರೆ, ಮೋಡ, ಗಾಳಿ, ಕಡಲು, ಸೂರ್ಯರಿದ್ದಾರೆ.
ನಿನಗಿಷ್ಟವಾದರೆ ಓದು ಒತ್ತಾಯವಿಲ್ಲ
ಇಷ್ಟವಾಗದಿದ್ದರೆ ಬೇಡ
ಕಿಂಚಿತ್ತೂ ಕೋಪವಿಲ್ಲ.

ಆದರೆ ನಾನು ಪ್ರೀತಿಸುವ
ಗಾಳಿ, ಮೋಡ, ತಾರೆಯರನ್ನು
ನಿಂದಿಸಬೇಡ.
ಅವರ ಬಗ್ಗೆ ಯಾಕೆ ಬರೆಯುತ್ತಿ?
ಎಂದು ಕೇಳಬೇಡ.
ಅವರ ಬಗ್ಗೆ ಎಷ್ಟು ಬರೆಯುತ್ತಿ?
ಎಂದು ಕಾಡಬೇಡ.

ನಾನೀಗ-
ನನ್ನ-ನಿನ್ನ ಗೆಳೆತನದ ಬಗ್ಗೆ
ಬರೆಯುತ್ತಿದ್ದೇನೆ.
ನಿನ್ನ ಗೈರು ಹಾಜರಿಯಲ್ಲಿ
ತಾರೆ, ಸೂರ್ಯ, ಮೋಡ, ಗಾಳಿ
ನನ್ನ ಜತೆಯಲ್ಲಿದ್ದಾರೆ.

ಈ ಗೆಳೆತನ ಮೋಡಗಳ ಹಾಗೆ.
ನಾಲ್ಕು ಹನಿ ತಂಪು ಚೆಲ್ಲುತ್ತೇನೆ
ಎಂದು ಹೇಳುವುದಿಲ್ಲ.
ಚೆಲ್ಲಬೇಡ ಎಂದರೆ
ಕೇಳುವುದೂ ಇಲ್ಲ.

ಈ ಗೆಳೆತನ ಕಡಲೊಳಗಿನ
ಅಲೆಗಳ ಹಾಗೆ.
ತಡಿಯಲ್ಲಿ ನಿಂತರೆ ಓಡಿಬಂದು
ಕಾಲನ್ನು ಚುಂಬಿಸುತ್ತದೆ.
ಚುಂಬಿಸುತ್ತೇನೆ ಎಂದು ಹೇಳುವುದಿಲ್ಲ
ಚುಂಬಿಸಬೇಡ ಎಂದರೆ
ಕೇಳುವುದೂ ಇಲ್ಲ.

ಈ ಗೆಳೆತನ ಗಾಳಿಯ ಹಾಗೆ.
ಎದೆಯೊಳಗೆ ನುಗ್ಗಿ ಹೊರಬರುತ್ತದೆ.
ಹೋಗುತ್ತೇನೆ ಎಂದು ಹೇಳುವುದಿಲ್ಲ.
ಹೋಗಬೇಡ ಎಂದರೆ
ಕೇಳುವುದೂ ಇಲ್ಲ.

ಆದರೂ ಅನಿಸುತ್ತದೆ.
ಒಮ್ಮೊಮ್ಮೆ ಈ ಗೆಳೆತನ
ಧೂಳಿನ ಹಾಗೆ ಮೆತ್ತಿಕೊಳ್ಳುತ್ತದೆ.
ಕೊಡವಿದರೆ ಚದುರಿ
ಚೆಲ್ಲಿ ಹೋಗುತ್ತದೆ.

ಹೌದು
ನನ್ನ-ನಿನ್ನ ಗೆಳೆತನದಲ್ಲಿ
ಮೆಚ್ಚುವಂಥಾದ್ದು ಇದೆ
ಚುಚ್ಚುವಂಥಾದ್ದು ಇದೆ
ಕೊಚ್ಚಿ ಹರಿದು ಹೋಗುವಂಥಾದ್ದು ಇದೆ.

ಅಂದಹಾಗೆ ಗೆಳೆಯಾ…
ಈ ಗೆಳೆತನದಲ್ಲಿ ನಾನು
ಶಾಮೀಲಾಗಿದ್ದರೂ ಇದು
ಇಡಿಯಾಗಿ ನಿನ್ನನ್ನು ಕುರಿತೆ
ಬರೆದ ಕವನ. ನಿಜ,
ಬರೆ ಎಂದೇನೂ ನೀನು ಕೇಳಿಲ್ಲ.
ಆದರೆ ಬರೆಯಬೇಡ ಎಂದರೆ ನಾನು ಕೇಳುವುದೂ ಇಲ್ಲ.


Tagged:

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...