Home / ಕವನ / ಕವಿತೆ / ೧೬ ನೋಡಬೇಡ ತಿರುಗಿ

೧೬ ನೋಡಬೇಡ ತಿರುಗಿ

(ಪೂರ್ವಾರ್ಧ)

ಯಾರಲ್ಲಿ? ಯಾರಿದ್ದೀರಿ?
ಬಂದಿದ್ದೇನೆ. ಬಾಗಿಲು ತೆಗೆಯಿರಿ.

ಈತನಕ ಇದ್ದಳು, ಈಗಿಲ್ಲ
ಎಂದರೆ ಹೇಗೆ ನಂಬಲಿ?

ಕಿಟಕಿಗಳ ತೆರೆದುಕೊಳ್ಳಿ
ಬಾಗಿಲುಗಳ ತೆರೆದುಕೊಳ್ಳಿ
ಬಂದಿದ್ದೇನೆ, ಕರೆದುಕೊಳ್ಳಿ.

ಹೌದು, ಇಲ್ಲೆ ಈ ಕಿಟಕಿಯ ಬಳಿ ಕುಳಿತು
ತಾರೆಯರನ್ನು ಎಣಿಸುತ್ತಿದ್ದಳು.
ಈಗ ಆಕಾಶ ಬಟಾಬಯಲು
ಸುರಿಯುತ್ತಿದೆ ಕತ್ತಲು.

ಹೌದು. ಇಲ್ಲೆ ಈ ಮೇಜಿನ ಮೇಲೆ
ತಲೆಯಿಟ್ಟು ಕವಿತೆ ಬರೆಯುತ್ತಿದ್ದಳು.
ಈಗ ಮೌನದ ಕಾವಲು
ನೆನಪುಗಳ ನೆರಳು.

(ಉತ್ತರಾರ್ಧ)

ಗೆಳೆಯಾ…
ನಿನ್ನನ್ನು ಹೇಗೆ ಸಂತೈಸಲಿ?
ಅದೋ… ಈ ಮೂಲೆಯಲ್ಲಿ
‘ಬೆಂದು ಬೂದಿಯಾದ ಕವಿತೆಗಳ
ತುಣುಕುಗಳಿವೆ ಆಯ್ದುಕೊ…
ಹಠಮಾರಿ ಗಾಳಿ ಇಡಿಯಾಗಿ
ಹಂಚಿಕೊಳ್ಳುತ್ತಿದೆ
ತಡಮಾಡದೆ ಕಸಿದುಕೊ…

ದಯವಿಟ್ಟು ಹೋಗು
ಯಾವತ್ತಿಗೂ ಇಲ್ಲ ನಿನ್ನ ಹುಡುಗಿ
ಕದ ಮುಚ್ಚಿಕೊ…
ನೋಡಬೇಡ ತಿರುಗಿ.


Tagged:

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...