Home / ಕವನ / ಕವಿತೆ / ನನ್ನ ಕವಿತೆ

ನನ್ನ ಕವಿತೆ

ಕವಿತೆ ಹುಟ್ಟುವುದು ಮಹಲಿನಲ್ಲಲ್ಲ,
ಮುರುಕು ಜೋಪಡಿಗಳಲ್ಲಿ.
ಕವಿತೆ ಹುಟ್ಟುವುದು ಝಗಝಗಿಸುವ
ದೀಪಗಳ ಬೆಳಕಿನಲ್ಲಲ್ಲ ಬುಡ್ಡಿ-
ಬೆಳಕಿನ ಮಿಡುಕಿನಲ್ಲಿ.

ಕವಿತೆ ಹುಟ್ಟುವುದು ಕಲ್ಪನೆಯ ಮೂಸೆಯಲ್ಲಲ್ಲ
ದೈನಂದಿನ ಘಟನಾವಳಿಗಳಲ್ಲಿ.
ಕವಿತೆ ಹುಟ್ಟುವುದು ತುಂತುರುಮಳೆಯಲ್ಲಲ್ಲ
ನೊಂದವರ ಕಣ್ಣೀರಿನಲ್ಲಿ.

ಕವಿತೆ ಹುಟ್ಟುವುದು ಬಿಗಿದ ಕೊರಳಿನಲ್ಲಿ,
ನಿರಾಶೆಯ ನೆರಳಿನಲ್ಲಿ, ಅಸಹಾಯಕರ ಆಕ್ರಂದನದಲ್ಲಿ.
ಇವೆಲ್ಲ, ಅಲ್ಲಿ ಇಲ್ಲಿ ಹೆಕ್ಕಿ ಪಟ್ಟಿಮಾಡಿದ
ನುಡಿಮುತ್ತುಗಳು. ಹೋದಲ್ಲೆಲ್ಲ ಹಿಂಬಾಲಿಸಿ
ಕಾಡುವ ಮಾತಿನ ಭೂತಗಳು.

ಆದರೆ ನನ್ನ ಕವಿತೆ, ಹುಟ್ಟಿದ್ದು ಮಹಲಿನಲ್ಲಿ,
ಪಿಳಿಪಿಳಿ ಕಣ್ಣುಬಿಟ್ಟಿದ್ದು ಝಗಝಗಿಸುವ
ದೀಪಗಳ ಬೆಳಕಿನಲ್ಲಿ, ಬೆಳೆದಿದ್ದು ಕಲ್ಪನೆಯ-
ಮೂಸೆಯಲ್ಲಿ, ಅರಳಿದ್ದು ಕನಸಿನಲ್ಲಿ.

ಆದರೂ ಈ ಕವಿತೆಗೆ-
ತುಡಿತ-ಮಿಡಿತಗಳಿಗೆ ಸ್ಪಂದಿಸುವ ಹೃದಯವಿದೆ
ಮನದಲ್ಲಿ ಹೊಸೆದ ಹೊಸ ಕನಸಿದೆ.
ಕಣ್ಣ ಬಿಂಬದಲ್ಲಿ ಕೈ ಕೈ ಬೆಸೆದು ಜೊತೆಯಾಗಿ
ಹೆಜ್ಜೆಯಿಡುವ ಹಂಬಲವಿದೆ.

ಇಷ್ಟಾದರೂ ಹಲವರ ದೃಷ್ಟಿಯಲ್ಲಿ ನನ್ನದು
ಹುಟ್ಟುವುದಕ್ಕೆ ಮುಂಚೆಯೆ ಸತ್ತ ಕವಿತೆ
ಕೆಲವರ ದೃಷ್ಟಿಯಲ್ಲಂತು ಬದುಕಿದರೂ ಸತ್ತ ಕವಿತೆ!


Tagged:

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...