Home / ಕವನ / ಕವಿತೆ / ಕವಿಗೋಷ್ಠಿಯಲ್ಲಿ….

ಕವಿಗೋಷ್ಠಿಯಲ್ಲಿ….

ಢಣಢಣ ಗಂಟೆ ಬಾರಿಸಿತು
ಎಲ್ಲರೂ ಸಾಲಾಗಿ ಕುಳಿತರು
ಬಣ್ಣ ಬಣ್ಣದ ಕವಿತೆಗಳು
ಒಂದೊಂದಾಗಿ ವೇದಿಕೆಗೆ ಬಂದವು.

ಕೆಲವು ಕವಿತೆಗಳು
ಹೂಗಳಂತೆ ಅರಳಿದರೆ
ಮತ್ತೆ ಕೆಲವು
ನದಿಗಳಂತೆ ಹರಿದವು.

ಕೆಲವು ಕವಿತೆಗಳು
ನಕ್ಷತ್ರಗಳಂತೆ ಮಿನುಗಿದರೆ
ಮತ್ತೆ ಕೆಲವು
ಉಲ್ಕೆಗಳಂತೆ ಉರಿದು
ಬೂದಿಯಾದವು.

ಕೆಲವು ಕವಿತೆಗಳು
ಕಲ್ಲುಸಕ್ಕರೆ ತಿನ್ನಿಸಿದರೆ
ಮತ್ತೆ ಕೆಲವು
ಕಷಾಯ ಕುಡಿಸಿದವು.

ಕೆಲವು ಕವಿತೆಗಳು
ಬೆಂಕಿ ಉಗುಳಿದರೆ
ಮತ್ತೆ ಕೆಲವು
ರಕ್ತ ಕಾರಿದವು.
ಕೆಲವು ಕವಿತೆಗಳು
ಬಿಕ್ಕಳಿಸಿ ಅತ್ತರೆ
ಮತ್ತೆ ಕೆಲವು
ಮುಕ್ಕಳಿಸಿ ನಕ್ಕವು

ಕೆಲವು ಕವಿತೆಗಳು
ತೊಂಡು ದನಗಳಂತೆ
ಕಂಡದ್ದನ್ನೆಲ್ಲ ಹೊಸಕಿಹಾಕಿದರೆ
ಮತ್ತೆ ಕೆಲವು ತಾಯಿಯಂತೆ
ಅವನ್ನೆತ್ತಿಕೊಂಡು ಸಂತೈಸಿದವು.

ಕೊನೆಗೆ ಬಂದದ್ದು
ಪ್ರೇಮಿಯಂತಹ ಕವಿತೆ
ನೆಲ ನೀರು ಆಕಾಶದಂತ ಕವಿತೆ
ಅದು ಕಡಲಿನ ಹಾಗೆ ಮೊರೆಯುತ್ತಿತ್ತು
ನೆಲದ ಹಾಗೆ ಪರಿಮಳಿಸುತ್ತಿತ್ತು.
ಅದು ಆಕಾಶದಂತೆ
ಎಲ್ಲವನ್ನೂ ತಬ್ಬಿಕೊಂಡು
ಮೈ ಮರೆಯಿತು, ಮೈ ಮರೆಸಿತು.

(ಕವಿಗೋಷ್ಠಿಯೊಂದರಲ್ಲಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಯನ್ನು ಕೇಳಿ)


Tagged:

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...