Home / ಕವನ / ಕವಿತೆ / ಕಾರ್ತೀಕ

ಕಾರ್ತೀಕ

ಅಶ್ವಯುಜ ಸೂರ್ಯ ಚಿಮ್ಮಿದಾಗ
ಕಿರಣಗಳು ಬೆಳಕ ಬೀಜಗಳು
ರೆಂಬೆಕೊಂಬೆಗಳ ಪಣತಿಗಳಲಿ
ಮಿಂಚುಗೊಂಚಲುಗಳು ಪತಂಗಗಳು
ಭೂಮಿ ಬಾನಂಗಳದಲಿ ಚಿನಕುರುಳಿಗಳು.

ಸಂಭ್ರಮದ ಅಲೆಅಲೆಗಳಲಿ ತೇಲಿವೆ
ನಮ್ಮೆಲ್ಲರ ಮಿನುಗು ಕಣ್ಣೋಟಗಳು
ಮಾತು ಹಾಡಿನ ಸಿರಿಶುಭದ ಸುಗ್ಗೀ
ಪೇಟೆತುಂಬ ಹರಡಿಹಾಸಿದ ಗೌಜುಗದ್ದಲ
ಬೀದಿ ತುಂಬ ಮಿನುಗುವ ಜ್ಯೋತಿರ್ಮಯಿಗಳು.

ತೆಳುಫರದೆಯ ತಿಳಿಮಂಜು ಹನಿಗಳು
ತಬ್ಬಿ ಮುದ್ದಿಸಿಕೊಂಡ ಸೂರ್ಯಕಾಂತಿ ಚೆಲುವು
ಬೆಳದಿಂಗಳ ಚಂದಿರ ಮುನಿಸು ಮುರಿದು
ಸೇವಂತಿಗೆ ಹೂಗಳ ಹರಿದ ಗಂಧಗಾಳಿ
ತೇವತೀಡಿ ನೇವರಿಸಿಕೊಂಡ ಗರಿಕೆ ಹಸಿರುಸೂಸಿ.

ಕಾಲ ಕ್ರಿಯೆ ಸ್ಥಳ ಮೇಳೈಸಿ ಸಹಜಪ್ರೀತಿ
ಅರಳಿದ ಪ್ರೇಮ ಅತಿಮಧುರ ಶಿಲೆಸುಂದರ
ಸಾಕ್ಷೀ ಪ್ರಜ್ಞೆಯಲಿ ಹುಟ್ಟಿದ ಬೆಳಕಭಾವ
ಕಲೆ ಸುಂದರ ಅದು ಮಂದಿರ ಸಂತಮರ
ಬಂಗಾರದ ಕಿರಣಗಳ ಸೂಸುವ ದೀಪಾವಳಿ.

ಮಂಜು ಮುಸುಕಿದ ಸಂಜೆ ಇಳಿದ ರಾಗ
ಮಾಲಕಂಸ ಹಾಡಿದ ಹೃದಯ ಇಂಪು
ಹೊಸ ಹುರುಪಿನಲಿ ಕನಸುಗಳು ತೇಲಿ
ಹಗಲು ಹೊಳೆದು ರಾತ್ರಿ ಉಳಿದ ಜಗದಸ್ನಾನ
ಇನ್ನು ಹಾರಬಹುದು ರೆಕ್ಕೆ ಬಿಚ್ಚಿದ ಹಕ್ಕಿ ಬಾನತುಂಬ.

*****

Tagged:

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...