Home / ಕವನ / ಕವಿತೆ / ನೆಮ್ಮದಿಗೆ ಹಾಕಿದ ಅರ್ಜಿ

ನೆಮ್ಮದಿಗೆ ಹಾಕಿದ ಅರ್ಜಿ

ನೆಮ್ಮದಿಗೆ ಅವಳು ಹಾಕಿದ
ಅರ್ಜಿಗಳೆಲ್ಲಾ ವಜಾಗೊಂಡಿದೆಯಂತೆ.
ವಿನಂತಿ ಪತ್ರದ ಒಕ್ಕಣಿಕೆ ಒಂದು ಚೂರು ಸರಿಯಾಗಿಲ್ಲ,
ಎಲ್ಲಿಯೂ ಒಂದನ್ನು ಕಾಳಜಿಯಿಂದ ಪೂರ್ಣಗೊಳಿಸಿಲ್ಲ,
ಚಿತ್ತುಕಾಟು, ತಿದ್ದುಪಡಿಗಳಿದ್ದರೆ ಪರಿಗಣಿಸಲಾಗುವುದಿಲ್ಲ
-ಎಂಬುದು ತಲಾಟಿಯ ತಕರಾರು.

ಪತ್ರದಲ್ಲಷ್ಟೇ ಪ್ರಮಾದಗೊಂಡಿದೆ ಎಂದರೆ
ಅದು ಸುಳ್ಳೆ ಸುಳ್ಳು:
ಯಾಕೆಂದರೆ ಬದುಕಿನ ಪಾತ್ರಗಳೆಲ್ಲ
ಅದಲು ಬದಲಾಗಿವೆ. ಪಾತ್ರದ ಚಹರೆಗಳು ಕೂಡ
ಗುರುತೆ ಸಿಗದಷ್ಟು ಮಾರ್ಪಾಟಾಗಿವೆ.
ಅದರಲ್ಲಿ ಒಂದು ಅವಳದೂ..

ಅಂದೆಲ್ಲಾ ತಂಬೆಲರಿಗೆ ತೀಡಿಕೊಂಡ
ಎಳೆತಳಿರಂತೆ- ಮೋಹಕತೆಗೆ ಮರುಳಾಗಿ,
ಪರಸ್ಪರ ಮುಟ್ಟಗೊಡದೇ, ಪರಿಪರಿಯ ಭಾವದೋಕುಳಿಯಾಗುತ್ತ
ಹೊಂಬಾಳಿನ ಹಂಬಲವ ಮೈತುಂಬಾ ಹೊದ್ದು,
ಆ ತುಡಿತದಲ್ಲೇ ತವಕಿಸುತ್ತ ಕೂಗಳತೆಗೆ ಸಿಗದವನ ದಾರಿ ಕಾಯುತ್ತ-
ಇಲ್ಲ ಮುಟ್ಟಲೇ ಇಲ್ಲ ಕೂಗು,
ಹಾಗಾಗೇ ಪಾತ್ರ ಪಲ್ಲಟ.

ಆ ಪ್ರೀತಿಯ ಬೇಲಿ ಕೂಡ ಪರಭಾರೆ ವಹಿಸಿಕೊಂಡಿದೆ.
ಯಾರದೋ ಗರ್ಭಕ್ಕೆ ವೀರ್‍ಯದಾನಿಯಾಗಿ, ಆದರ್ಶ ಪತಿಯಾಗಿ,
ಅಪ್ಪಟ ತಂದೆಯಾಗಿ,
ಹಾಗಾಗೇ ಈಗ ವಾಸ್ತವದ ನೆರಳಲ್ಲಿ
ಅರ್ಜಿಯ ಮಂಜೂರಿ ಮಾಡಿಸಿಕೊಳ್ಳುವ
ತುರಾತುರಿಯಲ್ಲಿದ್ದಾಳೆ ಆಕೆ.
ನಾಲ್ಕಾರು ಬಾರು ಅಲೆದಾಡಿ ಅವರಿವರ ಬುದ್ದಿವಾದಕ್ಕೆ ಕಿವಿಕೊಟ್ಟು
ಅಸಂಬದ್ಧವನ್ನೆಲ್ಲಾ ನಿವಾರಿಸಿ,
ತಿದ್ದುಪಡಿಗಳನ್ನೆಲ್ಲಾ ಕಾಣದಂತೆ ಬಿಳಿ ಲೇಪನ ಬಳಿದು
ಮೇಲೆ ನಾಜೂಕಾಗಿ ಹೊಸ ಅಕ್ಷರ ಮೂಡಿಸುತ್ತಿದ್ಧಾಳೆ ಆಕೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...