Home / ಕವನ / ಕವಿತೆ / ನಾಭಿಯ ನುಡಿ

ನಾಭಿಯ ನುಡಿ

ಕನ್ನಡಕ್ಕೆ ಜರ್ಮನಿಯ ಕಿಟ್ಟೆಲ್ ಆದರು.
ಈ ಮಣ್ಣಿನ ಕುಡಿ ನಾನಾಗಲಿಲ್ಲ ಕಣ್ಮಣಿ-
ನೆಲ ನುಡಿಯ ಬಲ್ಮೆಗೆ
ತಿಳಿದುಕೊಳ್ಳಲಾಗಲಿಲ್ಲ ಕನ್ನಡದ ಬಣ್ಣ.
ಹೊಂಬಣ್ಣವೆಂದು

ಕನ್ನಡವ ಮೆಲ್ಲುತ್ತ ಹಾಡಿದರು
ಕುಡಿಯುತ್ತ ತೇಗಿದರು
ಕನ್ನಡದಲೇ ಮಿಂದರು ಜನಪದರು
ಕಾಯಕದ ಕಸ್ತೂರಿ
ಕನ್ನಡದ ತುತ್ತೂರಿ ಊದಿದರು.
ಈ ಮಣ್ಣಿನ ಕುಡಿ ನಾನಾಗಲಿಲ್ಲ
ತಾಯ್ನುಡಿಯ ಹಿರಿಮೆಗೆ ಕನ್ನಡಿ
ಅರಿಯಲಾಗಲಿಲ್ಲ ತಿರುಳ್ಗನ್ನಡದ
ಮೈ ವಜ್ರ ವಡ್ಯಾಣವೆಂದು.

ಹಳ್ಳಿಗಾಡಿನ ಹುಂಬ ಹೈಕಳು
ಹಬ್ಬಿಸಿದರು, ಹರಳುಗಟ್ಟಿಸಿ
ನುಡಿಯ ಬೆಳಸುತಿಹರು
ಈ ಮಣ್ಣಿನ ಕುಡಿ ಕಲಿತ ಮಣಿ
ನಾನಾಗಲಿಲ್ಲ ಮುನ್ನುಡಿ
ಕೋಶ ಓದಿ, ನಾಡ ಸುತ್ತಿ ಪರಂಪರೆ ಸಂಸೃತಿಯ
ಉದ್ದೂದ್ದ ಭಾಷಣವ ಬಿಗಿದೆ.
ಕಟ್ಟಲಿಲ್ಲ, ಕಿವಿಗೊಡಲೂ ಇಲ್ಲ
ಕನ್ನಡದ ಹಾಡಿಗೆ.
ಬಗೆಯಲಾಗಲಿಲ್ಲ ಬಗೆಗೂಡಿಗೆ
ಕನ್ನಡವು ಬೆಳ್ನುಡಿಯೆಂದು

ಪೇಟೆ ಜನರ ಬಾಯಲ್ಲಿ
ಟೂಸ್ಸುಪುಸ್ಸು ಇಂಗ್ಲೀಷ ಕೇಳಿ ಬೆರಗಾದೆ
ಮಣಿದೆ, ಮರಳುಗೊಳಿಸಿತು ಆಂಗ್ಲತೆ
ಮರೆತೆ ಹೆತ್ತೊಡಲ ನುಡಿಯ ಒರತೆ ಇಲ್ಲ.
ಮರೆತೆನೆಂಬುದು ಬರಿಯ ನಾಟಕದ ನಿದ್ರೆ.
ತಾಯ್ಮೊಲೆಯ ಚೀಪುತ್ತ ಕೇಳಿದೊಂದು
ನುಡಿಯ ನೆನಪು ನಾಭಿಯಲಿ ಮುದ್ರೆ
ಅಂಬೆಗಾಲಿಕ್ಕಿ ಮಗುವಿನಂತೆ
ತೊದಲುನುಡಿಯಲಿ ಕನ್ನಡಮ್ಮಗೆ ಹರಕೆ
ತನುಮನಧನವೂ ಕನ್ನಡಕೆ
ಕನ್ನಡದ ನುಡಿಗೋಪುರದಿ ತಾನತನನಕೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...