Home / ಕವನ / ಕವಿತೆ / ನಗುವಿತ್ತು ಹೂವಂತ ಮಾತಿತ್ತು

ನಗುವಿತ್ತು ಹೂವಂತ ಮಾತಿತ್ತು

ಹಠಾತ್ತಾಗಿ ಬಂದ ಚಡಪಡಿಕೆ
ಅದ್ಹೇಕೋ ನಿನ್ನ ಪಾದಗಳು
ಒಮ್ಮೆಲೆ ನೆನಪಾದವು
ಪಾದಗಳ ಬಳಿ ಕುಳಿತು
ಸರಿರಾತ್ರಿ ಧ್ಯಾನಿಸಿದ ನೆನಪು

ಇಡೀ ದೇಹವನ್ನು ಉಂಡ ಮೇಲೆ
ಉಳಿದದ್ದೇನು??
ತೃಪ್ತಿಯಿಂದ ಅಪ್ಪಿ ಮಲಗುವುದಷ್ಟೇ
ಕನಸು ನನಸು ಬೀಜ ಮೊರೆತದ
ಜೀವ ಮಿಡಿತದ ಸದ್ದು
ಕಿವಿಗೆ ಮಾತಾಡಿ ತೆರಳಿತು

ಪಾದಗಳ ಬಳಿ ಕುಳಿತು ಧ್ಯಾನಿಸಿದೆ
ಮಗು ಪುಟ್ಟು ಕಾಲುಗಳಿಂದ
ಹಿತವಾಗಿ ಮುಖಕ್ಕೆ ಒದೆಯುತ್ತಿತ್ತು ಕಿಲಕಿಲ
ನಗುತ್ತಿತ್ತು ,ಭೂಮಿ ಮಳೆಮಿಂದು ನಕ್ಕಂತೆ

ಮಗು ತನ್ನ ಮುಖದಲ್ಲಿ
ನನಗೆ ಕನ್ನಡಿ ಹಿಡಿದಿತ್ತು
ಪಾದಗಳ‌ ಬಳಿ ಕುಳಿತು ಶರಣಾದೆ

ಬೆಳಗೊಳದ ಬಾಹುಬಲಿ
ಕಲ್ಲಾಗಿ ಆಕಾಶದೆತ್ತರಕೆ ಬೆಳೆದಿದ್ದ
ಅವನ ಪಾದಗಳ ಬಳಿ ನಿಂತೆ
ಕುಳಿತೆ ಧ್ಯಾನಿಸಿದೆ ಮಲಗಿದೆ

ಆಗಲೂ ನೆನಪಾದದ್ದು
ನೀನು, ಮಗುವಿನ ಒದೆತ ತಿವಿತ
ಪಾದಗಳ ಬಳಿ ಕುಳಿತು ಧ್ಯಾನಿಸುವುದೆಂದರೆ
ಅದು ಸಾಮಾನ್ಯವೇನಲ್ಲ??

ಭೂಮಿ ತಾಯಿಯ ಬಳಿ ಬಂದೆ
ಹೊಲದಲ್ಲಿ ಮಲಗಿದೆ, ಸ್ವಲ್ಪ ಹೊತ್ತು ನಡೆದೆ…
ಕೈಗಳಿಂದ ಮಣ್ಣ ಸ್ಪರ್ಶಿಸಿದೆ
ಮಣ್ಣಲ್ಲಿ ಆಕೆಯ ಪಾದಗಳು ಸಿಕ್ಕವು
ಅಲ್ಲೇ ಆಕೆಯ ಧ್ವನಿ ಇತ್ತು
ಬದುಕಿತ್ತು ಒಡಲಿತ್ತು
ದಶಕಗಳ ನಂತರ ಹೊಲದ ಮುಖ ನೋಡಿದೆ
ಬಾಲ್ಯ ಮರುಕಳಿಸಿತು
ಇದೇ ಹೊಲದಲ್ಲಿ ಎತ್ತುಗಳು ದುಡಿದಿದ್ದವು, ಅಪ್ಪನ ಬೆವರಿತ್ತು ನಗುವಿತ್ತು ಹೂವಂತ ಮಾತಿತ್ತು

ಇದೇ ಹೊಲದಲ್ಲಿ ಬೆಳೆದ ನವಣೆ ಜೋಳದ ತೆನೆಯ ಜೊತೆ ಆಟವಾಡಿ, ಹಣ್ಣು ತಿಂದು ನಕ್ಕಿದ್ದೆವು ಹಸಿಗಡಲೆ ಸುಟ್ಟು ಮುಕ್ಕಿದ್ದೆವು

ಹೊಲದ ಪಾದಗಳ ಬಳಿ ಕುಳಿತು ಧ್ಯಾನಿಸುವುದೆಂದರೆ
ಹುಡುಗಾಟವಲ್ಲ
ಕಳೆದು ಹೋದ ತಾಯಿ, ಯೌವ್ವನದ ಪ್ರೇಯಸಿಯ ಜೊತೆ
ನಕ್ಕಂತೆ ಬಿಕ್ಕಿದಂತೆ
ಮತ್ತೆ ನಕ್ಕು ಜಾತ್ರೆ ಮುಗಿಸಿ
ಮರಳಿ ಬದುಕಿಗೆ ನಡೆದಂತೆ…
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...