Home / ಕವನ / ಕವಿತೆ / ನಗುವಿತ್ತು ಹೂವಂತ ಮಾತಿತ್ತು

ನಗುವಿತ್ತು ಹೂವಂತ ಮಾತಿತ್ತು

ಹಠಾತ್ತಾಗಿ ಬಂದ ಚಡಪಡಿಕೆ
ಅದ್ಹೇಕೋ ನಿನ್ನ ಪಾದಗಳು
ಒಮ್ಮೆಲೆ ನೆನಪಾದವು
ಪಾದಗಳ ಬಳಿ ಕುಳಿತು
ಸರಿರಾತ್ರಿ ಧ್ಯಾನಿಸಿದ ನೆನಪು

ಇಡೀ ದೇಹವನ್ನು ಉಂಡ ಮೇಲೆ
ಉಳಿದದ್ದೇನು??
ತೃಪ್ತಿಯಿಂದ ಅಪ್ಪಿ ಮಲಗುವುದಷ್ಟೇ
ಕನಸು ನನಸು ಬೀಜ ಮೊರೆತದ
ಜೀವ ಮಿಡಿತದ ಸದ್ದು
ಕಿವಿಗೆ ಮಾತಾಡಿ ತೆರಳಿತು

ಪಾದಗಳ ಬಳಿ ಕುಳಿತು ಧ್ಯಾನಿಸಿದೆ
ಮಗು ಪುಟ್ಟು ಕಾಲುಗಳಿಂದ
ಹಿತವಾಗಿ ಮುಖಕ್ಕೆ ಒದೆಯುತ್ತಿತ್ತು ಕಿಲಕಿಲ
ನಗುತ್ತಿತ್ತು ,ಭೂಮಿ ಮಳೆಮಿಂದು ನಕ್ಕಂತೆ

ಮಗು ತನ್ನ ಮುಖದಲ್ಲಿ
ನನಗೆ ಕನ್ನಡಿ ಹಿಡಿದಿತ್ತು
ಪಾದಗಳ‌ ಬಳಿ ಕುಳಿತು ಶರಣಾದೆ

ಬೆಳಗೊಳದ ಬಾಹುಬಲಿ
ಕಲ್ಲಾಗಿ ಆಕಾಶದೆತ್ತರಕೆ ಬೆಳೆದಿದ್ದ
ಅವನ ಪಾದಗಳ ಬಳಿ ನಿಂತೆ
ಕುಳಿತೆ ಧ್ಯಾನಿಸಿದೆ ಮಲಗಿದೆ

ಆಗಲೂ ನೆನಪಾದದ್ದು
ನೀನು, ಮಗುವಿನ ಒದೆತ ತಿವಿತ
ಪಾದಗಳ ಬಳಿ ಕುಳಿತು ಧ್ಯಾನಿಸುವುದೆಂದರೆ
ಅದು ಸಾಮಾನ್ಯವೇನಲ್ಲ??

ಭೂಮಿ ತಾಯಿಯ ಬಳಿ ಬಂದೆ
ಹೊಲದಲ್ಲಿ ಮಲಗಿದೆ, ಸ್ವಲ್ಪ ಹೊತ್ತು ನಡೆದೆ…
ಕೈಗಳಿಂದ ಮಣ್ಣ ಸ್ಪರ್ಶಿಸಿದೆ
ಮಣ್ಣಲ್ಲಿ ಆಕೆಯ ಪಾದಗಳು ಸಿಕ್ಕವು
ಅಲ್ಲೇ ಆಕೆಯ ಧ್ವನಿ ಇತ್ತು
ಬದುಕಿತ್ತು ಒಡಲಿತ್ತು
ದಶಕಗಳ ನಂತರ ಹೊಲದ ಮುಖ ನೋಡಿದೆ
ಬಾಲ್ಯ ಮರುಕಳಿಸಿತು
ಇದೇ ಹೊಲದಲ್ಲಿ ಎತ್ತುಗಳು ದುಡಿದಿದ್ದವು, ಅಪ್ಪನ ಬೆವರಿತ್ತು ನಗುವಿತ್ತು ಹೂವಂತ ಮಾತಿತ್ತು

ಇದೇ ಹೊಲದಲ್ಲಿ ಬೆಳೆದ ನವಣೆ ಜೋಳದ ತೆನೆಯ ಜೊತೆ ಆಟವಾಡಿ, ಹಣ್ಣು ತಿಂದು ನಕ್ಕಿದ್ದೆವು ಹಸಿಗಡಲೆ ಸುಟ್ಟು ಮುಕ್ಕಿದ್ದೆವು

ಹೊಲದ ಪಾದಗಳ ಬಳಿ ಕುಳಿತು ಧ್ಯಾನಿಸುವುದೆಂದರೆ
ಹುಡುಗಾಟವಲ್ಲ
ಕಳೆದು ಹೋದ ತಾಯಿ, ಯೌವ್ವನದ ಪ್ರೇಯಸಿಯ ಜೊತೆ
ನಕ್ಕಂತೆ ಬಿಕ್ಕಿದಂತೆ
ಮತ್ತೆ ನಕ್ಕು ಜಾತ್ರೆ ಮುಗಿಸಿ
ಮರಳಿ ಬದುಕಿಗೆ ನಡೆದಂತೆ…
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...