Home / ಕವನ / ಕವಿತೆ / ನಗುವಿತ್ತು ಹೂವಂತ ಮಾತಿತ್ತು

ನಗುವಿತ್ತು ಹೂವಂತ ಮಾತಿತ್ತು

ಹಠಾತ್ತಾಗಿ ಬಂದ ಚಡಪಡಿಕೆ
ಅದ್ಹೇಕೋ ನಿನ್ನ ಪಾದಗಳು
ಒಮ್ಮೆಲೆ ನೆನಪಾದವು
ಪಾದಗಳ ಬಳಿ ಕುಳಿತು
ಸರಿರಾತ್ರಿ ಧ್ಯಾನಿಸಿದ ನೆನಪು

ಇಡೀ ದೇಹವನ್ನು ಉಂಡ ಮೇಲೆ
ಉಳಿದದ್ದೇನು??
ತೃಪ್ತಿಯಿಂದ ಅಪ್ಪಿ ಮಲಗುವುದಷ್ಟೇ
ಕನಸು ನನಸು ಬೀಜ ಮೊರೆತದ
ಜೀವ ಮಿಡಿತದ ಸದ್ದು
ಕಿವಿಗೆ ಮಾತಾಡಿ ತೆರಳಿತು

ಪಾದಗಳ ಬಳಿ ಕುಳಿತು ಧ್ಯಾನಿಸಿದೆ
ಮಗು ಪುಟ್ಟು ಕಾಲುಗಳಿಂದ
ಹಿತವಾಗಿ ಮುಖಕ್ಕೆ ಒದೆಯುತ್ತಿತ್ತು ಕಿಲಕಿಲ
ನಗುತ್ತಿತ್ತು ,ಭೂಮಿ ಮಳೆಮಿಂದು ನಕ್ಕಂತೆ

ಮಗು ತನ್ನ ಮುಖದಲ್ಲಿ
ನನಗೆ ಕನ್ನಡಿ ಹಿಡಿದಿತ್ತು
ಪಾದಗಳ‌ ಬಳಿ ಕುಳಿತು ಶರಣಾದೆ

ಬೆಳಗೊಳದ ಬಾಹುಬಲಿ
ಕಲ್ಲಾಗಿ ಆಕಾಶದೆತ್ತರಕೆ ಬೆಳೆದಿದ್ದ
ಅವನ ಪಾದಗಳ ಬಳಿ ನಿಂತೆ
ಕುಳಿತೆ ಧ್ಯಾನಿಸಿದೆ ಮಲಗಿದೆ

ಆಗಲೂ ನೆನಪಾದದ್ದು
ನೀನು, ಮಗುವಿನ ಒದೆತ ತಿವಿತ
ಪಾದಗಳ ಬಳಿ ಕುಳಿತು ಧ್ಯಾನಿಸುವುದೆಂದರೆ
ಅದು ಸಾಮಾನ್ಯವೇನಲ್ಲ??

ಭೂಮಿ ತಾಯಿಯ ಬಳಿ ಬಂದೆ
ಹೊಲದಲ್ಲಿ ಮಲಗಿದೆ, ಸ್ವಲ್ಪ ಹೊತ್ತು ನಡೆದೆ…
ಕೈಗಳಿಂದ ಮಣ್ಣ ಸ್ಪರ್ಶಿಸಿದೆ
ಮಣ್ಣಲ್ಲಿ ಆಕೆಯ ಪಾದಗಳು ಸಿಕ್ಕವು
ಅಲ್ಲೇ ಆಕೆಯ ಧ್ವನಿ ಇತ್ತು
ಬದುಕಿತ್ತು ಒಡಲಿತ್ತು
ದಶಕಗಳ ನಂತರ ಹೊಲದ ಮುಖ ನೋಡಿದೆ
ಬಾಲ್ಯ ಮರುಕಳಿಸಿತು
ಇದೇ ಹೊಲದಲ್ಲಿ ಎತ್ತುಗಳು ದುಡಿದಿದ್ದವು, ಅಪ್ಪನ ಬೆವರಿತ್ತು ನಗುವಿತ್ತು ಹೂವಂತ ಮಾತಿತ್ತು

ಇದೇ ಹೊಲದಲ್ಲಿ ಬೆಳೆದ ನವಣೆ ಜೋಳದ ತೆನೆಯ ಜೊತೆ ಆಟವಾಡಿ, ಹಣ್ಣು ತಿಂದು ನಕ್ಕಿದ್ದೆವು ಹಸಿಗಡಲೆ ಸುಟ್ಟು ಮುಕ್ಕಿದ್ದೆವು

ಹೊಲದ ಪಾದಗಳ ಬಳಿ ಕುಳಿತು ಧ್ಯಾನಿಸುವುದೆಂದರೆ
ಹುಡುಗಾಟವಲ್ಲ
ಕಳೆದು ಹೋದ ತಾಯಿ, ಯೌವ್ವನದ ಪ್ರೇಯಸಿಯ ಜೊತೆ
ನಕ್ಕಂತೆ ಬಿಕ್ಕಿದಂತೆ
ಮತ್ತೆ ನಕ್ಕು ಜಾತ್ರೆ ಮುಗಿಸಿ
ಮರಳಿ ಬದುಕಿಗೆ ನಡೆದಂತೆ…
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...