Home / ಲೇಖನ / ವಿಜ್ಞಾನ / ಸಮುದ್ರದಲ್ಲಿ ಏನಡಗಿದೆ!

ಸಮುದ್ರದಲ್ಲಿ ಏನಡಗಿದೆ!

೧೯೮೦ ರಲ್ಲಿ ನಡೆಯಿಸಿದ ಸಾಗರ ಅಧ್ಯಯನದಿಂದ ಸಮುದ್ರ ತಳವನ್ನು ಸ್ಪರ್ಶಿಸಿ ಅಲ್ಲಿಯ ನಿಗೂಢತೆಯನ್ನು ಬೇಧಿಸಲಾಗಿದೆ. ಸಮುದ್ರದೊಳಗೊಂದು ಪಾತಾಳಲೋಕವಿದೆ. ನಾಗಲೋಕವಿದೆ, ಎಂದು ಹೇಳುವ ಪೌರಾಣಿಕ ಮಿಥ್ಯಗಳಿಗೆ ಈಗ ಉತ್ತರ ಸಿಕ್ಕಿದೆ.

ಅಮೇರಿಕೆಯ ನ್ಯುಜರ್ಸಿ ಕರಾವಳಿ ಪ್ರದೇಶದ ಸಾಗರ ತಳದಲ್ಲಿ ಆಳವಾದ ಕಮರಿಗಳಿದ್ದರೆ, ಫ್ಲೂರಿಡಾದ ಕರಾವಳಿ ಸಾಗರದಲ್ಲಿ ಮೈಲುಗಟ್ಟಲೇ ಎತ್ತರವಾದ ಶಿಖರಗಳಿವೆ, ಬರೆಗಾನ್ ಬಳಿ ಏರಿಳಿತಕ್ಕೊಳಗಾಗುವ ಮರಳು ದಿಣ್ಣೆಗಳಿವೆ. ಅಮೇರಿಕಾದ ಕರಾವಳಿ ಪ್ರದೇಶದ ತಳವನ್ನು ಶ್ರವಣಾತೀತ ಧ್ವನಿ ತರಂಗಗಳಿಂದ ಅಧ್ಯಯನ ಮಾಡಲಾಯಿತು.
ಅದರಿಂದ ಸಂಗ್ರಹಿಸಿದ ಮಾಹಿತಿಗಳನ್ನು ಆದರಿಸಿ ಸಾಗರದ ತಳದ ನಕ್ಷೆಯನ್ನು ಚಿತ್ರಿಸಿದಾಗ ಮೇಲೆ ಹೇಳಿದ ರೋಚಕ ವಿಷಯಗಳು ಬೆಳಕಿಗೆ ಬಂದವು. ಅದೇ ರೀತಿ ಮೆಕ್ಸಿಕೋ ಆಖ್ಯಾತದಲ್ಲಿ ಅಧ್ಯಯನ ನಡೆಯಿಸಿದಾಗ ಸಾಗರದ ಆಳವು ಚಂದ್ರನ ಮೈಯಂತೆ ಇರುವುದು ಕಂಡು ಬಂದಿದೆ. ಅಂದರೆ ಒಂದೆಡೆ ಆಳವಾಗಿ ಕಮರಿಗಳಿದ್ದರೆ, ಇನ್ನೊಂದೆಡೆ ಎತ್ತರವಾದ
ಶಿಖರಗಳಿವೆ. ಅವುಗಳಲ್ಲಿ ಕೆಲವೊಂದು ಕಮರಿಗಳು ಎಷ್ಟು ಆಳವಾಗಿದೆ ಎಂದರೆ ಅವು ಒಂದೊಂದು ದ್ವೀಪವನ್ನೆ ಒಡಲೊಳಗೆ ಅಡಗಿಸಿಟ್ಟುಕೊಳ್ಳಬಹುದು. ಇದಕ್ಕೆ ಕಾರಣ ಸಮುದ್ರ ತಳದಲ್ಲಿರುವ ಉಪ್ಪಿನ ದಿಣ್ಣೆಗಳ ಚಲನೆ ಇರಬೇಕೆಂದು ವಿಜ್ಞಾನಿಗಳು ನಂಬಿದ್ದಾರೆ.

ಈಗ ವಿಜ್ಞಾನಿಗಳು ಸಂಪರ್ಕಕ್ಕೋಸ್ಕರ ಸಾಗರದಾಳದಲ್ಲಿ ದ್ಯೂತಿತಂತು ಕೇಬಲ್‌ಗಳನು ಹಾಕಲು ಸಾಗರದ ತಳದ ಸಮೀಕ್ಷೆ ನಡೆಸಿದ್ದಾರೆ. ಈ ಸಮೀಕ್ಷೆಯಿಂದ ಅವರಿಗೆ ಇನ್ನೂ ಹೆಚ್ಚಿನ ಮಾಹಿತಿ ದೊರೆಯಬಹುದಾಗಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...