Home / ಕವನ / ಕವಿತೆ / ಪುಟ್ಟ ಕೆಂಚವ್ವ

ಪುಟ್ಟ ಕೆಂಚವ್ವ

ಹೊತ್ತಾರೆ ಸೂರ್‍ಯನ ಕಿರಣಗಳು ಮುತ್ತಿಡಲು
ಹಾಳು ಹಕ್ಕಿಯ ಹಾಡು ಕಿವಿ ತುಂಬಲು
ಕಿಸುರುಗಣ್ಣನು ತೆರೆದು ಸೆಟೆದ ಹೂ-ಮೈಯ ಮುರಿದು
ಆಕಳಿಸುವಳು ನಮ್ಮ ಪುಟ್ಟ ಕೆಂಚವ್ವ…..

ಚೂರು ಅಂಗಳವನೆ ಪರಪರ ಕೆರೆದು
ಒಡೆದ ಗಡಿಗೆಯ ಸೊಂಟಕ್ಕೆ ಕರೆದು
ಊರ ಗಟ್ಟಿಗಿತ್ತಿಯರೊಡನೆ ಗುದ್ದಾಡಿ
ನೀರು ತರುವಳು ನಮ್ಮ ಪುಟ್ಟ ಕೆಂಚವ್ವ…..

ಕರವೀರದ ಕೊಂಬೆಗಳ ಕಡಿದು
ಒಣಗಿದ ರೆಂಬೆಗಳನು ಬಡಿದು
ಕಡ್ಡಿ-ಪುರಳೆಯ ಒಟ್ಟಿಗೆ ಒಗೆದು
ಬೆಂಕಿ ಉರಿಸುವಳು ನಮ್ಮ ಪುಟ್ಟ ಕೆಂಚವ್ವ…..

ಚಟಾಕು ಹಾಲಿಗೆ ಚಿಟಿಕೆ ಪುಡಿಯನು ಬೆರೆಸಿ
ಪಾವು ನೀರನೆ ಸುರಿದು
ಘಮ್ಮೆನ್ನುವ ಹಾಗೆ ಟೀ ಕುದಿಸುವಳು
ಮಾಯಾವಿ ಹುಡುಗಿ ನಮ್ಮ ಪುಟ್ಟ ಕೆಂಚವ್ವ…..

ಹೊಲದಲ್ಲಿ ಸಂಜೆಯ ತನಕ ದುಡಿದು
ಅಕ್ಕಿ-ಮೆಣಸಿನಕಾಯಿ ಪಡೆದು
ತಮ್ಮನ ಬಾಯ ಚಪಲಕ್ಕೆ ಉದ್ದು-ಕಡಲೆಯ
ಕದ್ದು ತರುವಳು ನಮ್ಮ ಪುಟ್ಟ ಕೆಂಚವ್ವ…..

ದಾರಿಯಲಿ ಅಂತರಗಟ್ಟಮ್ಮನಿಗೆ ಕೈ ಮುಗಿವಳು
ಹೊಟ್ಟೆ ಬಟ್ಟೆಗಿಟ್ಟು ಮಡುಗು ಎಂದು ಬೇಡುವಳು
ಹಕ್ಕಿ ಗೂಡಿಗೆ ಮರಳುವಂತೆ
ಗುಡಲಿಗೆ ಮರಳುವಳು ನಮ್ಮ ಪುಟ್ಟ ಕೆಂಚವ್ವ…..

ಸೋರುವ ಬುಡ್ಡಿಯನೂ ಒಲಿಸಿ ಉರಿಸುವಳು
ಪಾವಕ್ಕಿಯಲಿ ತಂಗಿ ತಮ್ಮನ ಹೊಟ್ಟೆ ತೂಗಿಸುವಳು
ಹರಿದ ಹಚ್ಚಡವನೆ ಸಮನಾಗಿ ಎಲ್ಲರಿಗೆ ಹೊದಿಸಿ
ಕೈ ಚಳಕ ಮೆರೆವಳು ನಮ್ಮ ಪುಟ್ಟ ಕೆಂಚವ್ವ…..

ಅಪ್ಪನ ಕುಡಿತ-ಜೂಜಿಗೆ ಬೆದರುವಳು
ಅವ್ವನ ದಮ್ಮು-ಗೂರಲಿಗೆ ನೋಯುವಳು
ಸಿಟ್ಟಿನಲಿ ಕಟ್ಟಿರುವೆ, ಚಿಟ್ಟೆ ನಗೆಯವಳು
ದಿಟ್ಟ ನಡೆಯವಳು ನಮ್ಮ ಪುಟ್ಟ ಕೆಂಚವ್ವ…..

ಹೂವಿನ ವಾಸನೆ ಹಿಡಿದು ಹೆಸರು ಹೇಳುವಳು
ಹಕ್ಕಿಯ ಕೂಗನಳೆದು ಅಣಕಿಸುವಳು
ಎರೆಮಣ್ಣನು ಕಲಸಿ ಬೊಂಬೆಯ ಮಾಡುವಳು
ಬೊಂಬೆಗೂ ಜೀವ ಕೊಡುವಳು ನಮ್ಮ ಪುಟ್ಟ ಕೆಂಚವ್ವ…..

ಹುಲಿಯನಿಗೆ ಹಳ್ಳದಲಿ ಮಜ್ಜನ ಮಾಡಿಸುವಳು
ಭೂತಾಯಿ ಮೀನ ಕಿರುಬೆರಳಲಿ ಕುಣಿಸುವಳು
ಗಟ್ಟಿ ಗುಂಡಿಗೆಯವಳು ಕಾಳವ್ವನ
‘ಕಿಡಿ’ ಇವಳು ನಮ್ಮ ಪುಟ್ಟ ಕೆಂಚವ್ವ…..
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...