Home / ಕವನ / ಕವಿತೆ / ಎಲ್ಲೀ ಕಾಣೆ ಎಲ್ಲೀ ಕಾಣೆ

ಎಲ್ಲೀ ಕಾಣೆ ಎಲ್ಲೀ ಕಾಣೆ

ಎಲ್ಲೀ ಕಾಣೆ ಎಲ್ಲೀ ಕಾಣೆ
ಎಲ್ಲಮ್ಮನಂಥಾಕಿನ ಎಲ್ಲೀ ಕಾಣೆ        ||ಪ||

ಎಲ್ಲೀ ಕಾಣೆನು ಶಿವನೊಲ್ಲಭಿ ಎನಿಸಿದಿ
ಕಲ್ಲಿನೊಳಗೆ ಪುಟ್ಟಿ ಉಗುರುಗೊಳ್ಳಕೆ ಇಳದಿ    ||ಅ.ಪ.||

ಬಾಳಮಂದಿ ಬತ್ತಲ ಮಾಡಿದಿ ನೀ ಎಂಥಾಕೆವ್ವಾ
ಬೇವನುಡಿಸಿ ಮೋಜ ನೋಡಿದಿ
ತಾಳ ಜಾಗುಟೆ ಗೆಜ್ಜೆ ನುಡಿಸಿ
ಕಾಲೊಳು ಕಂಚಿನ ಕೊಳಾ ಹಾಕಿ ಕುಣಿಸ್ಯಾಡಿದಿ
ಮ್ಯಾಳಗೊಂಡು ಭಿಕ್ಷೆ ಬೇಡಿಸಿದಿ
ಜೋಲಿಗೆ ಹಾಕಿ ಜೋಗವ್ವೆಂದು ಜನಕ ಕಾಡಿದಿ
ಕಳ್ಳ ಸುಳ್ಳರಿಗೊಲಿದಿ ಕಾಲ ಕರ್ಮವ ಗೆಲಿದಿ
ಭಲೆರೆ ಭಲೆರೆ ಏಳುಕೊಳ್ಳನಾಳುವ ಶರಣೆ        ||೧||

ಬಲ್ಲಿದವರನೆಲ್ಲ ಹಿಡಿದು ಬೆನ್ನಿಲೆ ಸೀಲಿ
ಬಾಯಿಗೆ ಬೀಗ ಜಡಿದು
ಸಲ್ಲು ಸಲ್ಲಿಗೊಮ್ಮೆ ನುಡಿದು
ಉಧೋ ಎಂಬುದೊಳ್ಳೆದವ್ವ ನಿನ್ನ ಬಿರುದು
ಚಲ್ವ ಹೆಂಗಸರ ಶೀರಿ ಸೆಳೆದು
ಚಲ್ಲಣ ತೊಡಿಸಿ ಬುಲ್ಲಿ ತುಂಬಾ ಅರ್ಲ ಜಡಿದು
ಕೋಲುದೀವಟಿಗಿ ಬತ್ತಿ ಮೇಲೆ ಜಗವ ಹೊತ್ತಿ
ಭೂಲೋಕದೊಳು ನಿನ್ನ ಜಾಲಕಿನ್ನೆಣೆಯುಂಟೆ?    ||೨||

ಮಂಡಲದೊಳು ಮಾಯಕಾರ್ತಿ ಜಮದಗ್ನಿಮುನಿಯ
ಚಂಡಕೊರಸಿದ ಮಾಯಕಾರ್ತಿ
ದಂಡು ತಂದು ಗಿರಿಗೆ ಮುತ್ತಿದಿ ಮುನಿಗಳ ಗವಿಗೆ
ಗುಂಡ ಬಡಿದು ಗುಮರಿ ಹಾಕಿದಿ
ಮಿಂಡೇರಂತೆ ನೀರ ತರತಿ ಮಳಲಿನ ಕೊಡಕೆ
ದುಂಡ ಹಾವಿನ ಸಿಂಬಿ ಸುತ್ತಿದಿ
ಗಂಡ-ಹೆಂಡಿರ ಬಿಡಿಸಿ ಭಂಡಾರ ಚೀಲವ ಹೊರಿಸಿ
ರಂಡೀಹುಣ್ಣಿವೆಗಳಿದು ರಾಜಮುತ್ತೈದಿಯಾದೆವ್ವ    ||೩||

ಚಿಕ್ಕ ಮಲಕಿನ ದುರದುಂಡಿ ನೀ ಎಂಥಾಕೆವ್ವಾ
ಚಿಕ್ಕ ಮಗನೊಳು ಕಲಹಗೊಂಡಿ
ಎಕ್ಕಯ್ಯನ ಪ್ರಾಣಗೊಂಡಿ
ಕಕ್ಕಯ್ಯ ಶರಣರಿಗೊಪ್ಪುವಂಥ ರಾಜಮಿಂಡಿ
ಸೊಕ್ಕಿದ ಜನರ ಮನಸ ಕಂಡಿ
ಕಾರಿಕ ಕಾಯಿಕ್ಕಿ ಕರ್ಪುರ ಕಾಣಿಕಗೊಂಡಿ
ದಿಕ್ಕಿನೋಳ್ ಶಿಶುನಾಳ ಮುಕ್ಕಣ್ನನೊಳುಕೂಡಿ
ಅಕ್ಕರದಲಿ ಗುರುನಾಥ ಗೋವಿಂದಗೊಲಿದಿ        ||೪||

*    *    *    *

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...