Home / ಲೇಖನ / ಇತರೆ / ಕೃತಕತೆಯಂದ ನೈಜತೆಗೆ

ಕೃತಕತೆಯಂದ ನೈಜತೆಗೆ

ಪ್ರಿಯ ಸಖಿ

ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಜೀವನ ವಿಧಾನದಿಂದ ನಿಧಾನಕ್ಕೆ ನಾವು ನೈಜತೆಯಿಂದ ಕೃತಕತೆಯೆಡೆಗೆ ಮುಖ ಮಾಡಿ ನಡೆಯುತ್ತಿದ್ದೇವೆ. ನಮ್ಮ ಒಂದು ದಿನದ ದಿನಚರಿಯನ್ನು ನಮ್ಮ ನಡವಳಿಕೆ, ಮಾತು ಕೃತಿಗಳನ್ನು ಗಮನಿಸಿದರೆ ನಾವೆಷ್ಟು ಕೃತಕವಾಗುತ್ತಿದ್ದೇವೆ ಎಂದು ತನ್ನಷ್ಟಕ್ಕೇ ಗೋಚರವಾಗುತ್ತಾ ಸಾಗುತ್ತದೆ. ಇಂದು ಆಧುನಿಕ ಮಾನವನ ನಡೆನುಡಿಗಳೆಲ್ಲಾ ವ್ಯವಹಾರಿಕವಾಗಿವೆ. ತನಗೆ ಇಷ್ಟವಿರಲಿ ಬಿಡಲಿ ಕಾರ್ಯಸಾಧನೆಗೆ ಅನಿವಾರ್ಯವೆಂಬಂತೆ ಹಲವಾರು ಮುಖವಾಡಗಳನ್ನು ತೊಟ್ಟುಕೊಂಡು ಬಿಟ್ಟಿದ್ದಾನೆ. ಕೆಲವೊಮ್ಮೆ ತನ್ನ ನಿಜ ಮುಖ ಯಾವುದು? ಮುಖವಾಡ ಯಾವುದು? ಎಂಬುದೇ ಅವನಿಗೆ ಗೊಂದಲವಾಗುವಷ್ಟು ಮುಖವಾಡಗಳು ಇಂದು ಪ್ರಮುಖ ಪಾತ್ರ ವಹಿಸುತ್ತಿವೆ.

ಆದರೆ ಸೂಕ್ಷ್ಮ ವ್ಯಕ್ತಿಯೊಬ್ಬನಿಗೆ ತನ್ನ ನೈಜ ಮುಖ ಸದಾ ಕಾಡುತ್ತಿರುತ್ತದೆ. ನೈಜ, ಸೂಕ್ಷ್ಮ ಭಾವನೆಗಳು ಕೃತಕತೆಯ ದಾಳಿಯಿಂದ ಮನದಾಳದಲ್ಲಿ ಸದಾ ನಲುಗುತ್ತಿರುತ್ತದೆ. ವ್ಯಕ್ತಿ ಹೆಚ್ಚು ಹೆಚ್ಚು ಮಹತ್ವಾಕಾಂಕ್ಷಿ, ಅಹಂಕಾರಿ, ಆಶೆಬುರುಕನಾದಷ್ಟೂ ಅವನ ಈ ಎಲ್ಲಾ ಗುಣಗಳ ಪೂರೈಕೆಗಾಗಿ ತನ್ನ ಸುತ್ತಲೂ ಕೋಟೆಗಳನ್ನು ಕಟ್ಟಿಕೊಳ್ಳುತ್ತಾ ಹೋಗುತ್ತಾನೆ. ಜೊತೆಗೆ ಹೆಚ್ಚು ಮುಖವಾಡಗಳನ್ನು
ತೊಟ್ಟುಕೊಳ್ಳುತ್ತಾ ಸಾಗುತ್ತಾನೆ. ಹಾಗೇ ತಾನು ಹಿರಿಯ, ದೊಡ್ಡವ್ಯಕ್ತಿ, ಪ್ರತಿಭಾವಂತ, ಶ್ರೇಷ್ಟ, ಗೌರವಾನ್ವಿತ ಎಂಬೆಲ್ಲಾ ಭ್ರಮೆಗಳು ತಲೆಯನ್ನು ಹೊಕ್ಕರೆ ಅದನ್ನು ಪೂರೈಸುವ ಸಲುವಾಗಿಯೂ ತಾನಾಗಿಲ್ಲದ್ದರ, ಆದರೆ ತಾನು ಭ್ರಮಿಸಿದ್ದರಂತೆ ಕಾಣಲು ಬಲವಂತಕ್ಕೆ ಮುಖವಾಡಗಳನ್ನು ಹಾಕಿಕೊಂಡು ಪೋಸುಗಳನ್ನು ಕೊಡಲು ಪ್ರಾರಂಭಿಸಿ ಬಿಡುತ್ತಾನೆ.

ಸಖಿ, ಆದರೆ ಇವೆಲ್ಲಾ ಕೃತಕತೆಗಳು, ಮುಖವಾಡಗಳು, ನಾಟಕೀಯತೆಗಳು ಒಂದಿಲೊಮ್ಮೆ ವ್ಯಕ್ತಿಗೋ ಇಡೀ ಮಾನವ ಜನಾಂಗಕ್ಕೋ ಅಸಹ್ಯ ತರಿಸುವುದೇ ಇಲ್ಲವೇ? ಅಂತಹ ಕಾಲ ಬಹಳ ಬೇಗ ಬರಲಿ. ನಾವು ಮತ್ತೆ ನಮ್ಮ ನೈಜತೆಗೆ ಬೆಲೆ ಕೊಡುವಂತಾಗಲಿ, ನೈಸರ್ಗಿಕ ಭಾವನೆಗಳನ್ನು ಅರ್ಧೈಸಿಕೊಳ್ಳುವಂತಾಗಲಿ. ಈ ಎಲ್ಲಾ ಮುಖವಾಡಗಳನ್ನು ವ್ಯವಹಾರಿಕತೆಯನ್ನು ಮೀರಿ ನಮಗೆ ನಾವು ಸತ್ಯವಾಗುತ್ತಾ, ಪಾರದರ್ಶಕವಾಗುತ್ತಾ, ಹೋಗುವುದು ಸಾಧ್ಯವೇ ಇಲ್ಲವೇ? ಆ ದಿಕ್ಕಿನೆಡೆಗೆ ನಡೆದಾದರೂ ನೋಡಬೇಕೆಂಬ ಆಸೆ ಈ ಮನುಕುಲಕ್ಕೆ ಬರಬೇಕಲ್ಲವೇ?

ಹೀಗಾದಾಗ ನಮಗೆ ಯಾವ ಧರ್ಮ, ನೀತಿ, ಕಾನೂನು, ಶಾಸ್ತ್ರಗಳೂ ಬೇಕಿಲ್ಲ. ಏಕೆಂದರೆ ಸೂಕ್ಷ್ಮ ಸಂವೇದನೆಗಳಿಗೆ ಮಿಡಿಯುವ ನಮ್ಮ ಪ್ರಾಮಾಣಿಕ ನೈಜತೆ ಆಗ ನಮ್ಮೊಂದಿಗಿರುತ್ತದೆ. ಮನಸ್ಸೆಂಬ ಮಾನದಂಡ ಜೊತೆಗಿರುವ ವ್ಯಕ್ತಿಗೆ ತಪ್ಪು ಸರಿಗಳನ್ನು ತಾನೇ ನಿರ್ಧರಿಸಬಲ್ಲ ಸ್ಥೈರ್ಯವೂ ಇರುತ್ತದೆ. ಹೀಗಾದಾಗ ಬೇರೆ ಚೌಕಟ್ಟುಗಳೆಲ್ಲಾ ಏಕೆ?

ಸಖಿ, ಈ ವ್ಯವಹಾರದ ಬದುಕಿನಲ್ಲಿ ನಿತ್ಯವೂ ನಲುಗುತ್ತಿರುವ ನಮ್ಮ ನೈಜ ಸೂಕ್ಷ್ಮತೆಗಳನ್ನು ಇನ್ನಾದರೂ ಉಳಿಸಿಕೊಳ್ಳಲು ಪ್ರಯತ್ನಿಸೋಣ, ಬೇರೆ ಬೇರೆ ಸಂಸ್ಕೃತಿಯ ಧಾಳಿಗೆ ಈಡಾಗುವ ಮೊದಲು ನಮ್ಮ ನಮ್ಮ ಮನದ ಸ್ವಧರ್ಮಕ್ಕೆ ಹಿಂತಿರುಗೋಣ. ಅಲ್ಲಿಯೇ ನಮ್ಮ ನಿಜವಾದ ನೆಲೆಗಳಿರುವುದು. ಈ ಬದುಕಿಗೊಂದು ಬೆಲೆಯಿರುವುದು, ಅಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...