Home / ಲೇಖನ / ಇತರೆ / ದೀರ್ಘಾಯುಷ್ಯದ ಗುಟ್ಟು

ದೀರ್ಘಾಯುಷ್ಯದ ಗುಟ್ಟು

ನೀವು ನೂರು ವರ್‍ಷ ಬಾಳಬೇಕೆನ್ನುವಿರಾ? ಹಾಘಾದರೆ, ನೂರು ವರ್‍ಷ ಬಾಳಬೇಕೆನುವವರಿಗೆ ನೂರು ವರ್‍ಷ ಬಾಳಿದ ಡಾ || ಎಂ ವಿಶ್ವೇಶ್ವರಯ್ಯ (೧೫-೦೯-೧೮೬೦-೧೯೬೦) ರವರ ಕೆಲ ಸಲಹೆಗಳಿವೆ. ಅವು:

೧) ನಿಮ್ಮ ಮನಸಾಕ್ಷಿಯನ್ನು ಪೀಡಿಸಿ ಕ್ಷಯಿಸುವಂಥ ಕೆಲಸಗಳನ್ನು ಮಾಡಬೇಡಿರಿ. ಕೊರೆಯುವ ಮನಸಾಕ್ಷಿಯ ಮೂಲಕವೇ ಬಹಳ ಜನರ ಆರೋಗ್ಯ ಕೆಟ್ಟು ಅವರು ವೃದ್ಧರಾಗುತ್ತಾರೆ.

೨) ಉಲ್ಲಾಸಚಿತ್ತರಾಗಿರುವ ಅಭ್ಯಾಸವನ್ನು ರೂಢಿಸಿಕೊಳ್ಳಿರಿ. ಉಲ್ಲಾಸವು ಮುದುಕನಲ್ಲಿರುವ ತಾರುಣ್ಯಕ್ಕೆ ಸಾಕ್ಷಿಯಾಗಿರುತ್ತದೆ.

೩) ಅಗತ್ಯವಿರುವಷ್ಟೇ ತಿನ್ನಿರಿ; ಪೌಷ್ಠಿಕ ಅನ್ನವನ್ನಲ್ಲದೆ ವಿಷಯುಕ್ತವಾದ ಮಿಠಾಯಿಗಳನ್ನು ಖಂಡಿತಾ ತಿನ್ನಬೇಡಿರಿ.

೪) ಪ್ರತಿ ೨೪ ತಾಸುಗಳಲ್ಲಿಯೂ ನಿಯಮಿತವಾಗಿ ಒಂದಿಷ್ಟು ತಾಸು ಎಂದು ನಿಶ್ಚಯಿಸಿಕೊಂಡು ನಿದ್ದೆ ಮಾಡಿರಿ. ನಾಳೆ ಮಾಡಿದರಾಯಿತು ಎಂದು ಇಂದಿನ ನಿದ್ದೆಯನ್ನು ಕೆಡಿಸಿಕೊಳ್ಳುವ ಚಟಕ್ಕೆ ತುತಾಗಬೇಡಿರಿ.

೪) ವಿನೋದದಲ್ಲಿ ಕಾಲ ಕಳೆಯಿರಿ. ವಿನೋದ ಎಂದರೆ ಕ್ರಿಕೆಟ್ ಅಥವಾ ಗೋಲ್ಫ್ (ಒಂದು ತರದ ಆಟ)ಗಳಲ್ಲ! ಏಕೆಂದರೆ ಈ ಆಟಗಳೂ ಕೂಡ ಒಂದು ಬಗೆಯ ಕೆಲಸವೇ ಅಗಿವೆ. ಇದಕ್ಕಿಂತಲೂ ಸರಳವಾದ ಮಕ್ಕಳೊಂದಿಗೆ ಚಿನ್ನಾಟವಾಡುವಂಥ ವಿನೋದಗಳಲ್ಲಿ ಕಾಲಕಳೆಯಿರಿ.

೬) ನಿಮ್ಮ ಉತ್ಪನ್ನದ ಮಿತಿಯಲ್ಲಿ ಜೀವನ ಸಾಗಿಸಿರಿ. ನಿಮ್ಮ ಸಂತೋಷ ಪ್ರಾಪ್ತಿಗೆ ಒಂದು ಧ್ಯೇಯ ಇತರರಿಗೆ ಲಾಭದಾಯಕವಾಗುವಂತಿರಲಿ.

೭) ದಿನಂಪ್ರತಿ ಇಂತಿಷ್ಟು ಸಮಯ ಎಂದು ನಿರ್‍ಧರಿಸಿ ತಪ್ಪದೇ ವ್ಯಾಯಾಮ ಮಾಡಿರಿ.

೮) ಬೀಡಿ, ಸಿಗರೇಟು, ಗಾಂಜಾ ಮಧ್ಯ ಇಂಥ ಯಾವ ಆರೋಗ್ಯ ವಿಘಾತಕ ಕೆಟ್ಟ ವ್ಯಸನಗಳನ್ನು ರೂಢಿಸಿಕೊಳ್ಳಬೇಡಿರಿ. ಇವುಗಳಿಂದ ಸಂಪೂರ್‍ಣವಾಘಿ ದೂರವಿರಿ.

ವಿಶ್ವೇಶ್ವರಯ್ಯನವರು ಮೇಲೆ ಹೇಳಿದ ೮ ಸುಸೂತ್ರಗಳನ್ನು ಚೆನ್ನಾಗಿ ನೆನಪಿಟ್ಟು ತಪ್ಪದೇ ಪಾಲಿಸಿರಿ. ಆಗ ನೀವು ದೀರ್ಘಾಯುಷಿಯಾಗಲು ಸಂದೇಹವೇ ಇಲ್ಲ.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...