Home / ಕವನ / ಕವಿತೆ / ಮುನ್ನುಡಿಕಾರ

ಮುನ್ನುಡಿಕಾರ

ಮೊದಲ ಪುಟಗಳನು (ತನಗೆ ಬೇಕಷ್ಟು)
ನುಂಗಿಹಾಕುವ ಹಕ್ಕು
ಹಿರಿತನದ ಸಹಜ ಅಧಿಕಾರ ಬಲ
ತೋರಿದ್ದೆ ದಿಕ್ಕು

ತಿಳಿದವರು ತಿಳಯದವರು ಎಂಥ ಮಹಾತ್ಮರೂ
ಓದುವರು ಮುನ್ನುಡಿ
ಬಾಗಿಲು ದಾಟಲೇಬೇಕಷ್ಟೆ ಮನೆಯ
ಒಳಗಿರಿಸುವುದಕ್ಕೆ ಅಡಿ

ಮನಸ್ಸು ಮಾಡಿದರೆ ಎಂಥ ಲೇಖಕನನ್ನೂ
ಏರಿಸಬಲ್ಲ ಅಟ್ಟಕ್ಕೆ
ಎತ್ತಿ ಹಾಗೆಯೇ ನೆಲಕ್ಕೆ ಅಪ್ಪಳಿಸಿ
ಮುರಿಯ ಬಲ್ಲ ಪಕ್ಕೆ

ಆದರೂ ಮೀರುವುದು ಹೇಗೆ ಪರಂಪರೆಯ
ಶಿಷ್ಟಾಚಾರದ ಕಟ್ಟು
ಹಾವು ಸಾಯದಂತೆ ಕೋಲು ಮುರಿಯದಂತೆ
ಹಾಕಬೇಕು ಪೆಟ್ಟು

ಇದು ಸುಲಭವಲ್ಲ; ಅಡ್ಡ ಗೋಡೆಯ ಮೇಲೆ
ಇರಿಸಿದಂತೆ ಬೆಳಕು
ಕಣ್ಣಿಗೆ ಶಬ್ದಗಳನೆರಚುವಂಥ ಕಲೆ
ಸಿದ್ಧಿಸಿರಬೇಕು

ಇಷ್ಟೆಲ್ಲ ಆದರೂ ಮುಗಿಯುವುದಿಲ್ಲ ಅಲ್ಲಿಗೆ
ಮುನ್ನುಡಿಕಾರನ ಕಷ್ಟ
ದುಷ್ಟ ವಿಮರ್ಶಕರ ಕೈಗೆ ಸಿಗದಿರುವನೆ ಕೊನೆಗೂ
ಈ ನತದೃಷ್ಟ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...