Home / ಕವನ / ಕವಿತೆ / ಮಸ್ಸೂರಿ

ಮಸ್ಸೂರಿ

ಗುರಿ ಮಸ್ಸೂರಿ ಮಹತ್ವಾಕಾಂಕ್ಷೆ ಗರಿ ಕೆದರಿ
ಎತ್ತರಕೆ ನಿಂತಿತ್ತು ನೋಡಿದರೆ ಕತ್ತು ನೋಯುತ್ತಿತ್ತು
ಕೆಳಗೆ ಸುಣ್ಣದಕಲ್ಲು ಮೇಲೆ ಹುಲ್ಲಿನ ಮಖಮಲ್ಲು
ಎರಡು ಜಗತ್ತುಗಳ ನಡುವೆ ಇಷ್ಟು ವ್ಯತ್ಯಾಸವೆ!

ರಸ್ತೆಯೋ ಬಹಳ ಕಡಿದು ಜೀವ ಕೈಯಲ್ಲಿ ಹಿಡಿದು
ಕುಳಿತಿದ್ದೆವು ಕಾರಿನಲ್ಲಿ ಅಪಘಾತಗಳ ನೋಟ ಅಲ್ಲಲ್ಲಿ
ನಮ್ಮ ಚಾಲಕನೂ ತೋರಿಸುತ್ತಿದ್ದ ತನ್ನ ಕೈಚಳಕ
“ಇಂಥ ಹಾದಿಗಳೇ ಹೀಗೆ!” ಎಂದುಕೊಂಡೆವು ನಮ್ಮೊಳಗೆ

ಸುತ್ತಿ ಬಳಸಿ ಹತ್ತಿ ಕುಳಿತಲ್ಲೆ ತಲೆ ಸುತ್ತಿ
ಮುಗಿಯುವುದೆಂದು ಈ ಆರೋಹಣವೆಂದು
ನೊಡಿದರೆ ಎಲಾ! ಎದುರು ಮಸ್ಸೂರಿಯ ಬಜಾರು
ಇನ್ನು ನಮ್ಮನ್ನು ಹಿಡಿದು ನಿಲ್ಲಿಸುವವರಾರು?

ಬಿಟ್ಟು ನಮ್ಮೂರ ಬಂದಿದ್ದೆವು ಬಹಳ ದೂರ
ಈಗೇಕೆ ಆ ಗೊಡವೆ ಇಂಥ ಬೀದಿಗಳ ನಡುವೆ
ಬೇಕಾದವರು ಹೊರಡಿ ಹೇಸರಗತ್ತೆಗಳ ಗಾಡಿ
ಪಾದಚಾರಿಗಳಾಗಿಯೆ ನಾವು ಇಲ್ಲಿ ಸಂಚರಿಸುವೆವು

ಕೊಡು ಎವೆಗೆ ಎವೆಯ ನೆಲೆ ಬೆಟ್ಟದ ಚೆಲುವೆ
ಇಲ್ಲಿಯ ತನಕವು ಬಂದೆ ನಿನ್ನ ನೋಡಲೆಂದೆ
ಏನ ಮಾರುವೆ ನನಗೆ ಬೇಕಾದ್ದು ನಿನ್ನ ನಗೆ
ಮಾರುವೆಯ ನನಗೊಂದು ಮಂಜಿನರಮನೆಯ ?

ಕಟಾಂಜಣದ ಬಳಿ ಸಿಗರೇಟಿನ ಹೊಗೆಯುಗುಳಿ
ನೋಡಿದೆನು ಡೆಹರಾಡೂನು ಆಚೆಗಿನ್ನೊಂದು ಸಾನು
ನಿಂತಿದ್ದೆನಲ್ಲಿ ಮರೆತು ಹೀಗೆಷ್ಟು ಹೊತ್ತು
ಬಂದ ದಾರಿಯ ಪಯಣ ಉಳಿದಿತ್ತು ಅವರೋಹಣ

ಆವರಿಸಿದಾಗ ಕತ್ತಲು ತಲಪಿದ್ದೆವು ಕೆಳಗಿನ ತಪ್ಪಲು
ಎಲ್ಲಿ ಮುಂಜಾನೆ ಎಲ್ಲಿ ನನ್ನ ಮಂಜಿನರಮನೆ ?
ಎದ್ದೆ ಹಾಸಿಗೆಯಿಂದ ಧಾವಿಸಿದೆ ಅಂಗಳದ ಬದಿಗೆ
ತೇಲಿ ಹೋಗುತ್ತಿತ್ತು ಅದು ಮಸ್ಸೂರಿಯ ಕಡೆಗೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...