Home / ಕವನ / ಕವಿತೆ / ಮಸ್ಸೂರಿ

ಮಸ್ಸೂರಿ

ಗುರಿ ಮಸ್ಸೂರಿ ಮಹತ್ವಾಕಾಂಕ್ಷೆ ಗರಿ ಕೆದರಿ
ಎತ್ತರಕೆ ನಿಂತಿತ್ತು ನೋಡಿದರೆ ಕತ್ತು ನೋಯುತ್ತಿತ್ತು
ಕೆಳಗೆ ಸುಣ್ಣದಕಲ್ಲು ಮೇಲೆ ಹುಲ್ಲಿನ ಮಖಮಲ್ಲು
ಎರಡು ಜಗತ್ತುಗಳ ನಡುವೆ ಇಷ್ಟು ವ್ಯತ್ಯಾಸವೆ!

ರಸ್ತೆಯೋ ಬಹಳ ಕಡಿದು ಜೀವ ಕೈಯಲ್ಲಿ ಹಿಡಿದು
ಕುಳಿತಿದ್ದೆವು ಕಾರಿನಲ್ಲಿ ಅಪಘಾತಗಳ ನೋಟ ಅಲ್ಲಲ್ಲಿ
ನಮ್ಮ ಚಾಲಕನೂ ತೋರಿಸುತ್ತಿದ್ದ ತನ್ನ ಕೈಚಳಕ
“ಇಂಥ ಹಾದಿಗಳೇ ಹೀಗೆ!” ಎಂದುಕೊಂಡೆವು ನಮ್ಮೊಳಗೆ

ಸುತ್ತಿ ಬಳಸಿ ಹತ್ತಿ ಕುಳಿತಲ್ಲೆ ತಲೆ ಸುತ್ತಿ
ಮುಗಿಯುವುದೆಂದು ಈ ಆರೋಹಣವೆಂದು
ನೊಡಿದರೆ ಎಲಾ! ಎದುರು ಮಸ್ಸೂರಿಯ ಬಜಾರು
ಇನ್ನು ನಮ್ಮನ್ನು ಹಿಡಿದು ನಿಲ್ಲಿಸುವವರಾರು?

ಬಿಟ್ಟು ನಮ್ಮೂರ ಬಂದಿದ್ದೆವು ಬಹಳ ದೂರ
ಈಗೇಕೆ ಆ ಗೊಡವೆ ಇಂಥ ಬೀದಿಗಳ ನಡುವೆ
ಬೇಕಾದವರು ಹೊರಡಿ ಹೇಸರಗತ್ತೆಗಳ ಗಾಡಿ
ಪಾದಚಾರಿಗಳಾಗಿಯೆ ನಾವು ಇಲ್ಲಿ ಸಂಚರಿಸುವೆವು

ಕೊಡು ಎವೆಗೆ ಎವೆಯ ನೆಲೆ ಬೆಟ್ಟದ ಚೆಲುವೆ
ಇಲ್ಲಿಯ ತನಕವು ಬಂದೆ ನಿನ್ನ ನೋಡಲೆಂದೆ
ಏನ ಮಾರುವೆ ನನಗೆ ಬೇಕಾದ್ದು ನಿನ್ನ ನಗೆ
ಮಾರುವೆಯ ನನಗೊಂದು ಮಂಜಿನರಮನೆಯ ?

ಕಟಾಂಜಣದ ಬಳಿ ಸಿಗರೇಟಿನ ಹೊಗೆಯುಗುಳಿ
ನೋಡಿದೆನು ಡೆಹರಾಡೂನು ಆಚೆಗಿನ್ನೊಂದು ಸಾನು
ನಿಂತಿದ್ದೆನಲ್ಲಿ ಮರೆತು ಹೀಗೆಷ್ಟು ಹೊತ್ತು
ಬಂದ ದಾರಿಯ ಪಯಣ ಉಳಿದಿತ್ತು ಅವರೋಹಣ

ಆವರಿಸಿದಾಗ ಕತ್ತಲು ತಲಪಿದ್ದೆವು ಕೆಳಗಿನ ತಪ್ಪಲು
ಎಲ್ಲಿ ಮುಂಜಾನೆ ಎಲ್ಲಿ ನನ್ನ ಮಂಜಿನರಮನೆ ?
ಎದ್ದೆ ಹಾಸಿಗೆಯಿಂದ ಧಾವಿಸಿದೆ ಅಂಗಳದ ಬದಿಗೆ
ತೇಲಿ ಹೋಗುತ್ತಿತ್ತು ಅದು ಮಸ್ಸೂರಿಯ ಕಡೆಗೆ
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...