Home / ಕವನ / ಕವಿತೆ / ಮಸ್ಸೂರಿ

ಮಸ್ಸೂರಿ

ಗುರಿ ಮಸ್ಸೂರಿ ಮಹತ್ವಾಕಾಂಕ್ಷೆ ಗರಿ ಕೆದರಿ
ಎತ್ತರಕೆ ನಿಂತಿತ್ತು ನೋಡಿದರೆ ಕತ್ತು ನೋಯುತ್ತಿತ್ತು
ಕೆಳಗೆ ಸುಣ್ಣದಕಲ್ಲು ಮೇಲೆ ಹುಲ್ಲಿನ ಮಖಮಲ್ಲು
ಎರಡು ಜಗತ್ತುಗಳ ನಡುವೆ ಇಷ್ಟು ವ್ಯತ್ಯಾಸವೆ!

ರಸ್ತೆಯೋ ಬಹಳ ಕಡಿದು ಜೀವ ಕೈಯಲ್ಲಿ ಹಿಡಿದು
ಕುಳಿತಿದ್ದೆವು ಕಾರಿನಲ್ಲಿ ಅಪಘಾತಗಳ ನೋಟ ಅಲ್ಲಲ್ಲಿ
ನಮ್ಮ ಚಾಲಕನೂ ತೋರಿಸುತ್ತಿದ್ದ ತನ್ನ ಕೈಚಳಕ
“ಇಂಥ ಹಾದಿಗಳೇ ಹೀಗೆ!” ಎಂದುಕೊಂಡೆವು ನಮ್ಮೊಳಗೆ

ಸುತ್ತಿ ಬಳಸಿ ಹತ್ತಿ ಕುಳಿತಲ್ಲೆ ತಲೆ ಸುತ್ತಿ
ಮುಗಿಯುವುದೆಂದು ಈ ಆರೋಹಣವೆಂದು
ನೊಡಿದರೆ ಎಲಾ! ಎದುರು ಮಸ್ಸೂರಿಯ ಬಜಾರು
ಇನ್ನು ನಮ್ಮನ್ನು ಹಿಡಿದು ನಿಲ್ಲಿಸುವವರಾರು?

ಬಿಟ್ಟು ನಮ್ಮೂರ ಬಂದಿದ್ದೆವು ಬಹಳ ದೂರ
ಈಗೇಕೆ ಆ ಗೊಡವೆ ಇಂಥ ಬೀದಿಗಳ ನಡುವೆ
ಬೇಕಾದವರು ಹೊರಡಿ ಹೇಸರಗತ್ತೆಗಳ ಗಾಡಿ
ಪಾದಚಾರಿಗಳಾಗಿಯೆ ನಾವು ಇಲ್ಲಿ ಸಂಚರಿಸುವೆವು

ಕೊಡು ಎವೆಗೆ ಎವೆಯ ನೆಲೆ ಬೆಟ್ಟದ ಚೆಲುವೆ
ಇಲ್ಲಿಯ ತನಕವು ಬಂದೆ ನಿನ್ನ ನೋಡಲೆಂದೆ
ಏನ ಮಾರುವೆ ನನಗೆ ಬೇಕಾದ್ದು ನಿನ್ನ ನಗೆ
ಮಾರುವೆಯ ನನಗೊಂದು ಮಂಜಿನರಮನೆಯ ?

ಕಟಾಂಜಣದ ಬಳಿ ಸಿಗರೇಟಿನ ಹೊಗೆಯುಗುಳಿ
ನೋಡಿದೆನು ಡೆಹರಾಡೂನು ಆಚೆಗಿನ್ನೊಂದು ಸಾನು
ನಿಂತಿದ್ದೆನಲ್ಲಿ ಮರೆತು ಹೀಗೆಷ್ಟು ಹೊತ್ತು
ಬಂದ ದಾರಿಯ ಪಯಣ ಉಳಿದಿತ್ತು ಅವರೋಹಣ

ಆವರಿಸಿದಾಗ ಕತ್ತಲು ತಲಪಿದ್ದೆವು ಕೆಳಗಿನ ತಪ್ಪಲು
ಎಲ್ಲಿ ಮುಂಜಾನೆ ಎಲ್ಲಿ ನನ್ನ ಮಂಜಿನರಮನೆ ?
ಎದ್ದೆ ಹಾಸಿಗೆಯಿಂದ ಧಾವಿಸಿದೆ ಅಂಗಳದ ಬದಿಗೆ
ತೇಲಿ ಹೋಗುತ್ತಿತ್ತು ಅದು ಮಸ್ಸೂರಿಯ ಕಡೆಗೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...