Home / ಕವನ / ಕವಿತೆ / ಸೂರ್‍ಯನಿಗೆ

ಸೂರ್‍ಯನಿಗೆ

ಉದಯಾಸ್ತಮಾನದ ಮಧ್ಯೆ ವರ್ಧನೆ ಕ್ಷಯ ಮರ್ತ್ಯರಿಗೆ
ಚಕ್ಷುಗಳಿಂದ ನೋಡುವುದರಿಂದ ನಮ್ಮ ದೃಷ್ಟಿ,
ಮನಸ್ಸಿನಿಂದ ಚಿಂತಿಸುವುದರಿಂದ ನಮ್ಮ ಜ್ಞಾನ,
ಭೂಮಿಯಲ್ಲಿ ಬದುಕುವುದರಿಂದ ನಮ್ಮ ಆಯಸ್ಸು-

ಸೀಮಿತ. ಸೀಮಾಬದ್ಧರು ನಾವು. ಶಕ್ತಿಗ್ರಹ ನೀನು
ಬೆಳಗು ಸಂಜೆಗಳ ನಿರಂತರ ಪರ್ಯಾಯದಲ್ಲಿ
ಹುಟ್ಟಿ ಸತ್ತರೆ ಅಕ್ಷಯ ಪುನರ್ಜನ್ಮ ನಿನಗೆ. ನಿನ್ನ
ಅಹರ್ನಿಶೆಯ ಬಂಧ ನಮ್ಮ ಮೋಕ್ಷದ ಕಬಂಧ

ಜ್ವಲಿಸುವಗ್ನಿಗೆ ಆಜ್ಯ ಮೇದಸ್ಸು ಹೋಮಹವನ
ಯಾವ ಪೂರ್ವಜರ ರೇತಸ್ಸು ಸಂಯಮನ
ನಿನಗದೆಲ್ಲವು ಆಪೋಶನ-ಮನೆಯೊಳಗೆ ಹೊರಗೆ
ಬೀದಿಯಲಿ ಮಣ್ಣಿನಲಿ ಕಡಲ ತೀರದಲಿ

ಸೆರೆಹಿಡಿದು ಹಿಡಿದ ಬೆಂಕಿ ಪ್ರಕೃತಿಪೌರುಷ
ಕಾಮದಲಿ ಹರಿದು ಸೇರಿದ ಅಂಥ ತೇಜಸ್ಸು
ಇಲ್ಲಿ ಮೊದಲು ಏನೂ ಇರದಲ್ಲಿ ನೀನುಂಟಾದೆ
ನಿನ್ನ ಪ್ರಭಾವಲಯದಲ್ಲಿ ಅದೆಷ್ಟೋ ಜೀವಿಗಳು

ದೀಪದಿಂದ ದೀಪಗಳು-ಬೆಳಕಿನ ಹಿಂದು ಮುಂದು
ಕಂಡವರು ನಾವಲ್ಲ. ಸಾಲು ದೀಪಗಳಲ್ಲಿ ಒಂದು
ಎಂದು ಅರಿತೊ ಏನೊ. ಬೆಳಕಿನಿಂದ ಬೆಳಕಿನೆಡೆಗೆ
ಸಾಗುವುದು ದೀಪಾವಳಿ ಮರಳಿ ಮರಳಿ

ಕಣ್ಣುಗಳು ಕಣ್ಣುಗಳ ನೋಡುವಾಗ ಮಾತು
ಬೆರಳುಗಳು ಬೆರಳುಗಳ ಮಿಳಿಸಿದಾಗ ಶಾಖ
ಮಾತು ಮಂತ್ರವಾದಾಗ ಪ್ರಾರ್ಥನೆ ಅಂತೆಯೇ
ಶಾಖ ದೀಪವಾದಾಗ ಪೂಜೆ. ಮೌನದಲಿ ಧ್ಯಾನ

ನಮ್ಮ ಕರ್ಮಗಳ ಹೊರ ಪರಿಧಿ ಹರಿದು
ನಿನ್ನ ವಿಸ್ತಾರಕ್ಕೆ ಎಳೆದುಕೊಂಡರೆ
ನಮ್ಮ ಭಾಷೆಗಳ ಒಳ ಅರ್ಥ ಅರಳಿ
ನಿನ್ನ ಚೈತನ್ಯಕ್ಕೆ ಸೆಳದುಕೊಂಡರೆ

ಹಗಲಿರುಳ ವರ್ಣಮಯ ಬೆಳಕು ಪಸರಿಸಿ
ಮಣ್ಣುಮರಗಿಡ ಜೀವರಾಶಿಗಳೊಂದಿಗೆ ನಾವು
ಗುರುತು ಪಡೆದಾಗ ನಿನ್ನ ಅಖಂಡ ಕಾಲದಲಿ
ಸದಾ ವರ್ತಮಾನವಾಗುವಂತೆ ಭೂತ ಭವಿಷ್ಯ

ನಿನ್ನ ಮುಖದಿಂದ ಶಕ್ತಿ ಹರಿಯಲಿ ನಮ್ಮ ಕಡೆಗೆ
ನಿನ್ನ ಮುಖದಿಂದ ಜ್ಞಾನ ಹರಿಯಲಿ ನಮ್ಮ ಕಡೆಗೆ
ನಿನ್ನ ಓಜಸ್ಸು ಬರಲಿ ನಮಗೆ
ನಿನ್ನ ಆಯಸ್ಸು ಬರಲಿ ನಮಗೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...