Home / ಕವನ / ಕವಿತೆ / ಜಲಾಲುದ್ದೀನ್ ಜಲಾಲಿ

ಜಲಾಲುದ್ದೀನ್ ಜಲಾಲಿ

ಕಾಬಾದ ಕಡೆ ಮುಖಮಾಡಿ ದಿನವೂ ನಮಾಜು
ಮಾಡುವ ಗೆಳೆಯನೆ ಹೇಳು ನೀನು ನನಗೆ
ಸರ್ವಶಕ್ತನಾದ ದೇವರ ರೀತಿ ರಿವಾಜು

ಬೀದಿಯಲ್ಲಿ ಬಿದ್ದವರಿಗೆ ಕೊಡುವನೆ ಮನೆ
ಹಸಿದ ಹೊಟ್ಚೆಗೆ ಕೂಳು ಹಾಗೂ ಬಿಸಿಲಿಗೆ
ಬರಡಾದ ಹೊಲಗಳಲ್ಲಿ ಧಾನ್ಯಗಳ ತೆನೆ

ಎಲ್ಲರನ್ನೂ ಸಮನಾಗಿ ಸೃಷ್ಟಿಸಿದ್ದಾದರೆ ಕರ್ತ
ಅಲ್ಲಿ ಭಾರೀ ಮಹಡಿ ಇಲ್ಲಿ ಬರೇ ಜೋಪಡಿ
ಇಂಥ ವಿಪರ್ಯಾಸಕ್ಕೆ ಏನು ಅರ್ಥ?

ಕೆಲವರೆನ್ನುವರು ದೇವರೆಂದರೆ ಮನುಷ್ಯಕೋಟಿ
ಸಮರ್ಥಿಸಲೆಂದು ತನ್ನೊಳಗಿನ ಸೈತಾನುಗಳ
ಬೇಕುಬೇಕೆಂದೇ ಉಂಟುಮಾಡಿದ ಸೃಷ್ಟಿ

ನಿಜವಿದ್ದೀತು ಅಥವ ಇಲ್ಲಿದಿದ್ದೀತು
ನೀನಂತೂ ಕಟ್ಟಾ ದೈವ ವಿಶ್ವಾಸಿ-ನಿನ್ನಷ್ಟು
ಅಖಂಡ ವಿಶ್ವಾಸ ನನ್ನ ಒಳತೋಟಿಗೆ ಹೊರತು

ಆದರೂ ಅನಿಸುವುದು ಕೆಲವೊಮ್ಮೆ ಆಶ್ಚರ್ಯ
ಪ್ರತಿ ನಸುಕಿನಲ್ಲೂ ಯಾಕೆ ಕೂಗುವುದು ಕೋಳಿ
ಮೂಡುವುದು ಯಾಕೆ ಮೂಡಲೇಬೇಕಾದಂತೆ ಸೂರ್ಯ

ವರುಷ ವರುಷವೂ ಬರುವ ವಲಸೆಯ ಪಕ್ಷಿ
ಮಾಯಕದಲ್ಲಿ ಬಿರಿಯುವ ಹೂವು ಮಾಯುವ ನೋವು
ಸಾಕೆ ನಂಬುವುದಕ್ಕೆ ಇಷ್ಟು ಸಾಕ್ಷಿ?
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...