Home / ಕವನ / ಕವಿತೆ / ಸಮುದ್ರ

ಸಮುದ್ರ

ಸಮುದ್ರವಿಲ್ಲದ ಹೈದರಾಬಾದಿಗೆ ನಾನೇ ಸಮುದ್ರ-
ವೆಂದು ಹರಡಿದೆ ಆ ಮಹಾನಗರದ ಉದ್ದಗಲ
ತುಂಬಿ ಬೀದಿಗಳ ತುಂಬಿ ಕೇರಿಗಳ
ಒಳಗೊಳುವೆನೆಂದು ನನ್ನ ತಳಮಳದಲ್ಲಿ
ಅದರ ಕಳವಳ

ತಲ್ಲಣಗೊಳ್ಳುತ್ತ
ಕರೆದು ಕೈ ಚಾಚಿ
ತೆರೆದು ತೆರೆಬಿಚ್ಚಿ
ತೆರೆದರೂ ತೆರೆಯದ ಪ್ರಕ್ಷುಬ್ಧ ಚಿತ್ತ
ಗುಡಿ ಗೋಪುರ ಮಿನಾರಗಳ ಸುತ್ತ

ಸುತ್ತಿದೆನು ಮುತ್ತಿದೆನು
ಎಟುಕದ ಎತ್ತರದಲ್ಲಿ
ಮೋಡಗಳ ಬಿತ್ತಿದೆನು
ಅಂಗಡಿ ಜಗಲಿಗಳಲ್ಲಿ
ಮಸೀದಿ ಮೆಟ್ಟಿಲುಗಳಲ್ಲಿ
ಯಾರ ಮನೆಯಂಗಳದಲ್ಲಿ
ಎಲ್ಲೆಂದರಲ್ಲಿ
ನನ್ನ ಕನಸುಗಳ ಕೆತ್ತಿದೆನು
ಒಳಗೇ ಬತ್ತಿದೆನು

ಮುಸ್ಸಂಜೆಯ ಕತ್ತಲಲ್ಲಿ
ಹೆಕ್ಕಿದವರು ಯಾರು ಒಡೆದ ಚಿಪ್ಪಿಗಳ?
ಯಾರಿಗೂ ಕೇಳಿಸಬಾರದೆಂದು
ಬಿಕ್ಕಿದವರು ಯಾರು ಏಕಾಂತದಲ್ಲಿ ದುಃಖಗಳ?
ಅಳಿಸಿ ಹಾಕುತ್ತ ಹೋದವರು ಯಾರು
ತಮ್ಮ ಎಲ್ಲ ಗುರುತುಗಳ?

ಗಾಳಿಯಾದರೋ ಈಗ ತಣ್ಣಗಾಗಿದೆ
ಬೇರೆ ಸಮುದ್ರಗಳ ಬೇರೆ
ಆಘಾತಗಳ ನೆನಪು ತರುತ್ತಿದೆ
ಯುಗಗಳಾಗಿವೆ ನಿದ್ರಿಸಿದೆ-
ನಿದ್ರಿಸುವುದಿದೆ
ನನ್ನ ಮೇರೆಗಳ ತಬ್ಬವುದಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...