Home / ಕವನ / ಕವಿತೆ / ಸಾಹಿತ್ಯದಿಂದ ಯಾರೇನು ಬಯಸುತ್ತಾರೆ?

ಸಾಹಿತ್ಯದಿಂದ ಯಾರೇನು ಬಯಸುತ್ತಾರೆ?

ಸರಕಾರ ಬಯಸುತ್ತದೆ ಭಾವೈಕ್ಯ ಹಾಗೂ ರಾಷ್ಟ್ರಭಕ್ತಿ
ಆಸ್ತಿಕ ಮಹಾಶಯರು ಬಯಸುತ್ತಾರೆ ಭವಬಂಧದಿಂದ ಮುಕ್ತಿ
ಅಮೇರಿಕ ಮತ್ತು ರಷ್ಯ ಪರಸ್ಪರ ಧ್ವಂಸಗೊಳಿಸುವ ಅಸ್ತ್ರ
ಬಡ ದೇಶಗಳು ಬಯಸುತ್ತವೆ ಅನ್ನ ಮತ್ತು ವಸ್ತ್ರ
ವಿಮರ್ಶಕರು ಬಯಸುತ್ತಾರೆ ಸಾಮಾಜಿಕ ಹೊಣೆ
ಓದುಗರು ಬಯಸುತ್ತಾರೆ ಕಲ್ಪನೆಯ ಕವಣೆ
ಆಹ! ಬಯಸುತ್ತಾರೆ ಕೆಲವು ಲೇಖಕರು ಬರಿ ಕೀರ್ತಿ
ಇನ್ನು ಕೆಲವರು ಮುಗ್ಧ ಹೆಣ್ಣುಗಳಿಂದ ಸ್ಫೂರ್ತಿ
ಅಡಿಗರು ಬಯಸುತ್ತಾರೆ ಇಂದಿರಾ ಗಾಂಧಿಯ ವಿನಾಶ
ಹಾಗೂ ಶ್ರೀರಾಮಚಂದ್ರನಾಳಿದ ಸನಾತನ ದೇಶ
ಓದಲು ಬಾರದ ಹಳ್ಳಿಗರು ಬಯಸುತ್ತಾರೆ ಕಾಲಕಾಲಕ್ಕೆ ಮಳೆ
ಬಿತ್ತಿದ ಗದ್ದೆಗಳಲ್ಲಿ ತಿಂದು ಮುಗಿಯದಷ್ಟು ಬೆಳೆ

ಬಯಸುತ್ತಾರೆ! ಬಯಸುತ್ತಾರೆ! ಬಯಸದೆ ಇರುತ್ತಾರೆಯೆ?
ವೈಣಿಕರು ಬಯಸುತ್ತಾರೆ ಅಪರೂಪದ ರಾಗಗಳನ್ನು ವೈದ್ಯರು
ಬಯಸುತ್ತಾರೆ ಸಾಂಕ್ರಾಮಿಕ ರೋಗಗಳನ್ನು ದಾಮರು ಹಾಕುವವರು
ಬಯಸುತ್ತಾರೆ ದಟ್ಟ ನೆರಳಿನ ಮರಗಳನ್ನು ತಪಸ್ಸಿಗೆ ಕೂತ
ಭಕ್ತರು ಬಯಸುತ್ತಾರೆ ಕೋರಿದ ವರಗಳನ್ನು ಕೃಷಿಕರು
ಬಯಸುತ್ತಾರೆ ಫಲವತ್ತಾದ ಮಣ್ಣುಗಳನ್ನು ಅರೇಬಿಯದ ಶೇಖರು
ಬಯಸುತ್ತಾರೆ ಪ್ರತಿದಿನವೂ ಹೊಸ ಹೆಣ್ಣುಗಳನ್ನು ಕಾಸರಗೋಡಿನ
ಕನ್ನಡಿಗರು ಬಯಸುತ್ತಾರೆ ಕರ್ನಾಟಕದೊಂದಿಗೆ ಸೇರಿಕೆಯನ್ನು
ವ್ಯಾಪಾರಿಗಳು ಬಯಸುತ್ತಾರೆ ಸಕಲವಸ್ತುಗಳಿಗೂ ಬೆಲೆಯೇರಿಕೆಯನ್ನು
ಆಜನ್ಮ ಬ್ರಹ್ಮಚಾರಿಗಳು ಬಯಸುತ್ತಾರೆ ವೀರ್ಯನಿಗ್ರಹವನ್ನು
ಚೋರರು ಬಯಸುತ್ತಾರೆ ಕಂಚಿಕಾಮಾಕ್ಷಿಯ ವಿಗ್ರಹವನ್ನು
ಬಯಸುತ್ತಾರೆ! ಬಯಸುತ್ತಾರೆ! ಬಯಸದೆ ಇರುತ್ತಾರೆಯೆ ?

ಸರಕಾರ ಬಯಸುತ್ತದೆ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...