Home / ಲೇಖನ / ಇತರೆ / ಮತಾಂತರ – ಒಂದು ಪ್ರತಿಕ್ರಿಯೆ

ಮತಾಂತರ – ಒಂದು ಪ್ರತಿಕ್ರಿಯೆ

ನೋಡಿ, ಮತಾಂತರ ಅನ್ನೋದು- ಆದು ವೈಯಕ್ತಿಕವೋ, ಸಾಮೂಹಿಕವೋ- ಆರೋಗಯಕರ ಅಲ್ಲ. ಮತಾನೇ ತೊಲಗಬೇಕು ಅನ್ನೋ ಈ ವೈಜ್ಞಾನಿಕ ಯುಗದಲ್ಲಿ ನನಗೆ ಇದೊಂದು ಹಾಸ್ಯ.

ಹರಿಜನರು ಮುಸ್ಲಿಮರಾದರೆ ಆರ್. ಎಸ್. ಎಸ್, ಪೇಜಾವರ ಸ್ವಾಮಿಗೆ, ವಿಶ್ವ ಹಿಂದೂ ಪರಿಷತ್ತಿನವರಿಗೆ ತಮ್ಮ ಅಸ್ತಿತ್ವಾನೆ ಹೋದಂಗಾಗ್ತದೆ. ಏಕೆ? ನಿತ್ಯ ಜೀವನದಲ್ಲಿ ಹರಿಜನರ ಸ್ಥಾನಮಾನದ ಬಗ್ಗೆ ತಿರಸ್ಕಾರ ಹೊಂದಿರೊ ಇವರಿಗೆ ಮತಾಂತರದಿಂದ ತಮ್ಮ ಕುಳಿತು ತಿನ್ನುವ ಸ್ಥಿತಿಗೆ ಎಲ್ಲಿ ಧಕ್ಕೆ ಬರುತ್ತೋ ಎನ್ನುವ ಭಯ. ಆದ್ದರಿಂದ ಮೊಗವಾಡ ಹಾಕಿಕೊಂಡು ಭಾರತೀಯ ಸಂಸೃತಿ, ಭಾರತರಾಷ್ಟ್ರ, ಹಿಂದೂರಾಷ್ಟ್ರ ಅಂತ ಏನೋ ಕಂಡು ಬೊಳ್ಳು ಹಾಕೋ ನಾಯಿ ಹಂಗೆ ಬೊಳ್ಳು ಹಾಕ್ತಾರೆ.

ಮತಾಂತರ ಆದಾಗ ಹರಿಜನರು ತಮ್ಮ ಸ್ವಜನ ಬಂಧುಗಳೆ ಎನ್ನುವ ಹುನ್ನಾರದ ನಾಟಕ ಹೂಡೋ ಈ ಜನ ಇಡೀ ಸಮಾಜಕ್ಕಷ್ಟೆ ಅಲ್ಲ, ತಮಗೂ ಮೋಸಮಾಡಿಕೊಂಡು ದಿವಾಳಿಯಾಗ್ತಾರೆ. ದೇಶನ ಹರಾಜು ಹಾಕ್ತಾರೆ. ಕಾಲಕ್ಕೆ ತಕ್ಕ ಹಾಗೆ ಬಣ್ಣ ಬದಲಾಯಿಸೋ ಈ ಗೋಸುಂಬೆತನ ಇದೆಯಲ್ಲ ಅದು ಹೇಸಿಗೆ. ಅದಕ್ಕೂ ಹೆಚ್ಚಿನ ಹೇಸಿಗೆ ಅಂದ್ರೆ ಮತಾಂತರವ ಬಗ್ಗೆ ಮೌನವಾಗಿರೋ ಮುಸ್ಲಿಮರು, ಹಾಗೇ ಕ್ರಮೇಣ ಕೊಲ್ಲುವ ಕ್ರಿಶ್ಚಿಯನ್ನರು.

ಮತಾಂತರದ ಪರಿಣಾಮ ಏನು ಗೊತ್ತೆ? ಶೂದ್ರ ಜನಾಂಗ ಬಹು ಸಂಖ್ಯಾತರಾದ್ರು ಶಕ್ತರಾಗ್ದೆ ಬರಿಗೈಯಾಗೇ ಇರ್ತಾರೆ. ಅಲ್ಪಸಂಖ್ಯಾತರಾಗಿರೋ ಮುಸ್ಲಿಮರು ಆಳೋ ಅವಕಾಶ ಬಂದ್ರೆ ಆಗ ಈ ದೇಶದ ಸಂಸ್ಕೃತಿಯ ನೇತಾರರು ಎಂದು ಬೊಗಳೆ ಹೊಡಿಯೊ ಈ ಹಾರುವರು ಅವ್ರನ್ನೆ ಆಲಂಗಿಸಿಕೊಂಡು ಬಸಿರಾಗ್ತಾರೆ. ಇತಿಹಾಸ ಸರಿಯಾಗಿ ಓದ್ಕೊಂಡೋರಿಗೆ ಗೊತ್ತಾಗುತ್ತೆ, ಶೂದ್ರಮುಂಡೇವು ಆಗಲೂ ಅವರ ಕಾಲಡಿಗೆ ಬಿದ್ದು ಮತ್ತೆ ತುಳಿಸ್ಕೋತಾರೆ.

ಈ ಪುರೋಹಿತಶಾಹಿ – ಅದು ಯಾವ ಮತದ್ದೇ ಆಗಿರಲಿ – ಹಾಗೂ ಬ್ರಾಹ್ಮಣ್ಯಕ್ಕೆ ಮೂಗುದಾರ ಹಾಕಬೇಕಾದರೆ ಮತಾಂತರ ಮಾಡಿದ್ರೆ ಆಗೊಲ್ಲ. ಮೆದುಳಿನಲ್ಡಿ ಬುದ್ಧಿ ಬೆಳೆಸ್ಕೋಬೇಕು; ಎದೆಗಟ್ಟಿ ಮಾಡ್ಕೋಬೇಕು. ರಟ್ಟೆಗಟ್ಟಿ ಜೊತೆ ಬುದ್ಧಿ ಬಲಗೊಂಡರೆ ಮಾತ್ರ ಇಲ್ಲಿ ಮನುಷ್ಯರು ಮನುಷ್ಯರಾಗಿ ಬದುಕೋ ಹಾಗೆ ಮಾಡೋಕೆ ಸಾಧ್ಯ ಆಗ್ತದೆ.

ಮನುಷ್ಯ ಮನುಷ್ಯರಲ್ಲಿ ಜೀವ ಜೀವದ ಭೇದ ಹುಟ್ಟಿ ಹಾಕೋ ಈ ಮತಾನ ಒಮ್ಮೆಲೇ ಓಡಿಸಬೇಕು. ನೋಡಿ ಈ ಜಗತ್ತಿಗೆ ಬಂದ ಜೀವ ತನಗೆ ತಾನೆ ಬೆಳೆದು ಗಟ್ಟಿಯಾಗ್ದೆ ಹೋದ್ರೆ ಅದನ್ನ ಮತ ಮೌಢ್ಯ ಮೆಟ್ಟಿನಿಲ್ತಾವೆ. ಶಕ್ತಿ ಇಲ್ದಿದ್ರೆ ಕಾನೂನು ಕಾಪಾಡೊಲ್ಲ. ಸಾಮಾಜಿಕವಾಗಿ ಮನುಷ್ಯ ಎದುರಿಸುತ್ತಿರುವ ಸಮಸ್ಯೆಗೆ ಮತಾಂತರ ಎಂದೂ ಮದ್ದಾಗಲ್ಲ. ಅದು ತತ್ಕಾಲದ ಬೆದರಿಕೆ ಆಗಬಹುದು. ಮತಾಂತರ ಅನ್ನೋದು, ಹೇಸಿಗೆ ಅಂತ ಒಂದರಿಂದ ಬಿಡಿಸಿಕೊಂಡು ಮತ್ತೊಂದು ಹೇಸಿಗೆಯನ್ನ ಆಲಂಗಿಸಿಕೊಳ್ಳುವುದಷ್ಟೆ. ಅಲ್ಲಿ ಬುದ್ಧಿ ಬೆಳವಣಿಗೆಯ, ವ್ಯಕ್ತಿಯ ಗಟ್ಟಿತನ ವ್ಯಕ್ತವಾಗಲ್ಲ. ಆದ್ದರಿಂದ ಇರುವ ಸ್ಥಿತಿಗೆ ಮೂಲ ಕಂಡುಕೊಂಡು ಅದನ್ನು ತೊಡೆದು ಹಾಕುವ ಮನಸ್ಸಿನ ಬೆಳವಣಿಗೆಯಲ್ಲಿ ನಿಜವಾದ ಪರಿಹಾರ ಕಾಣಬಹುದು. ಸ್ವಶಕ್ತಿ, ಸ್ವಸಾಮರ್ಥ್ಯ ಇರದ ಜನರನ್ನ ಎಲ್ಲಿ ಹೋದರೂ ಗುಲಾಮರನ್ನಾಗಿಯೆ ಉಳಿಸಿಕೊಳ್ಳುವುದು ದುಷ್ಟ ವ್ಯವಸ್ಥೆಯ ಅಂತರಂಗ. ಆದ್ದರಿಂದ ಮತಾಂತರ ಸಮಸ್ಯೆಯ ಪರಿಹಾರವಾಗುವುದಿಲ್ಲ.

*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...