Home / ಕವನ / ಕವಿತೆ / ಪದಗಳೊಂದಿಗೆ ನಾನು

ಪದಗಳೊಂದಿಗೆ ನಾನು

ಪದಗಳೆಂದರೆ ನನಗೆ ಅಚ್ಚುಮೆಚ್ಚು
ದಿನಂಪ್ರತಿಯ ಅಭ್ಯಾಸವೂ
ಪದಗಳ ಹೊಸೆಯುವುದರಲ್ಲಿ,
ಮಸೆಯುವುದರಲ್ಲಿ:
ಆದರೆ ಆ ಪದಗಳಿಗೆ ಶಬ್ದಕೋಶದಿ
ಅರ್ಥಗಳ ಹುಡುಕಿ ಸೋತಿದ್ದೇನೆ.

ಹೊಸ ಹಾಡಿಗೆ ಕುಣಿದಾಡುವ
ನವಿಲುಗಳ ದಾರಿ ಕಾಯುತ್ತ,
ನಾನೇ ನವಿಲಾಗಬಯಸುತ್ತೇನೆ.
ಮತ್ತೆ ಕುಕಿಲದ ಗಾನಕ್ಕೆ ಪದ ಜೋಡಿಸಿ
ಶ್ರುತಿ ಕೂಡಿಸಿ ಹಾಡಾಗ ಬಯಸುತ್ತೇನೆ.

ಪದಗಳು ಪರಾರಿಯಾಗುತ್ತವೆ
ಆಗೊಮ್ಮೆ ಈಗೊಮ್ಮೆ ಸುಳಿವುಕೊಡದೆ,
ಪಕ್ಕಾ ಪರದೇಶಿಯಂತೆ.
ಹಳಹಳಿಸಿ ನೋಡುತ್ತೇನೆ:
ಪದಗಳ ಜೋಡಿಸಿ ಇಡಲಾಗದ್ದಕ್ಕೆ.

ನಡುರಾತ್ರಿಯಲ್ಲಿ ಕಂದೀಲ ಬೆಳಕಿನಲ್ಲಿ
ನಡಗುವ ಕೈಗಳು
ಆಡಿಯಾಡುತ್ತವೆ ಕೆತ್ತಿದ ಪದಗಳ ಮೇಲೆ,
ಕಂಗಳಿಂದ ಉದುರಿದ ಮುತ್ತೊಂದು
ಕರ ಸೋಕಿದಾಗ ಎಚ್ಚರ ಗೊಳ್ಳುತ್ತವೆ ಪದಗಳು,
ಸಡಿಲವಾಗಿಲ್ಲ ಎಲ್ಲಪದಗಳು
ಅವಕ್ಕೆ ಸಂದೂಕದ ಪೆಟ್ಟಿಗೆಯಲ್ಲಿಟ್ಟು
ಕಾಪಿಡು ಎನ್ನುತ್ತದೆ ಮನಸ್ಸು.

ಪದಗಳೆಂದರೆ ನನಗೆ ಅಲರ್ಜಿ
ನನ್ನೊಳಗಿನ ನನ್ನನ್ನು
ಹೊರಗಟ್ಟಿ ಅಣಕಿಸಿ ನಗುತ್ತವೆ.
ಹಾಡಾಗುವ ಬದಲು ಹಾವಾಗಿ
ಹಗೆಯ ಹೊಗೆ ಹಬ್ಬಿಸುತ್ತವೆ

ಪದಗಳೆಂದರೆ ನನಗೆ ಅಲರ್ಜಿ
ಪಟ್ಟಾಂಗದಲ್ಲಿ ಪದಗಳ ಭರ್ಜರಿ
ಬೇಟೆಯಾಡುವ ನಾನು
ಕಾರ್ಯಹೀನ ಕೆಲಸಗೇಡಿಯಾಗುತ್ತೇನೆ.

ಪದಗಳೆಂದರೆ ಅಚ್ಚುಮೆಚ್ಚು ಅಲರ್ಜಿ ನನಗೆ
ಪರಪರನೆ ಕೆರೆದುಕೊಳ್ಳುವ ಚಟವಿದ್ದ ಹಾಗೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...