Home / ಕವನ / ಕವಿತೆ / ನಕ್ಕರೆ ನೋವಾಗುವುದು

ನಕ್ಕರೆ ನೋವಾಗುವುದು

ಎದೆಯೊಳಗೆ ಬೆಂಕಿ ಬಿದ್ದರೂ
ಜಪ್ಪಯ್ಯ ಎನ್ನದೇ ನಗುವ ಮುಖಗಳ ಕಂಡಾಗಲೆಲ್ಲಾ
ನನ್ನಲ್ಲಿ ಕನಿಕರದೊಂದಿಗೆ ಉಕ್ಕುವ ತಳಮಳ
ನಾನೊಬ್ಬಳೆ ಅಲ್ಲ ನನ್ನ ಸುತ್ತಲೂ
ಹತ್ತಾರು ಪಾತ್ರಗಳು
ನವಿಲುಗರಿ ಪೋಣಿಸಿಕೊಂಡು
ಡಂಭ ಬಡಿಯುವ ಕೆಂಬೂತಗಳು
ಹಾದು ಹೋಗುತ್ತಿವೆ.
ಒಂದರ ನಂತರ ಮತ್ತೊಂದು.

ಕೇಳಬೇಕೆಂದುಕೊಳ್ಳುತ್ತೇನೆ-
ರಕ್ತ ಉಕ್ಕುವ ಕಣ್ಣಿನ ಆಳದಲ್ಲಿ
ಮಡುಗಟ್ಟಿದ ನೋವಿಗೆ ಎಲ್ಲಿ
ಸಿಗಬಹುದು ಮದ್ದು ಮತ್ತು ಮುದ್ದು ಎಂದು.
ತಟ್ಟನೆ ಉತ್ತರಿಸುತ್ತದೆ ನೀಲಿಗಟ್ಟಿದ ದಪ್ಪ ತುಟಿಯೊಂದು
“ಒಡೆದ ತುಟಿಗಳಿಗೆ ಲೇಪಿಸಿಕೊಳ್ಳುವ
ವ್ಯಾಸಲೀನ ಕೂಡಾ ವಶೀಲಿ ಕೇಳುತ್ತದೆ.”

ಚರ್ಮದ ವಾಸನೆಯನ್ನು ಮೂಗಿಗೆ ಹತ್ತಿಸಿಕೊಂಡ
ಶ್ವಾನ ನಾಸಿಕಗಳಂತೆ ಕೆಂಪಿರುವೆ ಸಾಲು
ದಂಡುದಂಡಾಗಿ ಸುತ್ತಮುತ್ತಲಿನ ಮೂಲೆಗಳಿಂದ
ತಟ್ಟನೆ ಎದ್ದು ಬಿಡುತ್ತವೆ. ಹಸಕು ವಾಸನೆ ಹುಚ್ಚು ಹಿಡಿಸಿದಂತೆ.
ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಬೇಕೆಂದರೆ
ತೀರಿದ ಎಣ್ಣೆ ಡಬ್ಬ ಅಣಕಿಸಿ ನಗುತ್ತದೆ.

ಕೋಮಲ ಕನಸುಗಳ ಹೊತ್ತ ಹೊಲಕ್ಕೆ
ಚಿತ್ತಾರದ ಬೀಜಗಳ ಬಿತ್ತಿ, ಕೊನೆಯಲ್ಲಿ
ಕೊಳಚೆ ನೀರನ್ನು ಹಾಯಿಸಿ, ಕಳೆಗಿಡಗಳ ಬೆಳೆಸಿ
ಗೋರಿವಾಕ್ಯ ಹಾಡುವ
ಭಂಡರ ಗೊಂಡೆ ಬೆಳೆಯುತ್ತಲೇ ಇದೆ.
ಬಳ್ಳಿಯಾಗಿ ಸುತ್ತಿ ಉಸಿರುಗಟ್ಟಿಸಬೇಕೆನಿಸುತ್ತದೆ.
ನೀರು ಜಿನುಗಿದಡೆಯಲ್ಲೆಲ್ಲಾ ಆರ್ದ್ರವಾದ
ಮಣ್ಣಿನ ಗರ್ಭದಲ್ಲಿ ಬಿತ್ತದೆಯೇ
ಚಿಗುರೊಡೆದ ಹಸಿರು ಬೆರಗುಗೊಳಿಸುತ್ತದೆ. ನೋಡುತ್ತ
ಒಡಲಲ್ಲಿರುವ ಹಸಿರಿಗೆ ಹೆರಿಗೆ ನೋವು ಬಂದಂತಾಯ್ತು.
ಮುಖದಲ್ಲಿ ಮಲ್ಲಿಗೆಯ ನಗು ಮೂಡಿದರೂ
ಬಿರುಕಾದ ತುಟಿಗಳಿಗೆ ನಗಲಾಗಲಿಲ್ಲ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...