Home / ಕವನ / ಕವಿತೆ / ವೇಮುಲನಿಗೊಂದು ಪ್ರಶ್ನೆ

ವೇಮುಲನಿಗೊಂದು ಪ್ರಶ್ನೆ

ಜಗದೊಳಗೆ ಹುಟ್ಟಿಬೆಳೆದರೂ
ಜನರೊಳಗೆ ಬೆಳೆಯುವುದೇ ಸಾಧನೆ ವೇಮುಲ.

ಇಲ್ಲದ ಮೂಲದಲ್ಲೇ ಹುಟ್ಟಿದರೂ
ಇಲಾಖೆಗಳನ್ನೇ ಕಟ್ಟಬಲ್ಲವರು ಇಲ್ಲಿಹರು
ಇದ್ದರಮನೆಯ ಮಾರಿ ತಿಂದವರು ಇಹರು
ಪರಿಪರಿಯ ಪಂಡಿತರು, ಪಾಮರರು,
ಅರೆಬರೆಯ ಶಿಕ್ಷಿತರು ಎಲ್ಲರ ಗೂಡಲ್ಲವೇ ಇದು
ನಮ್ಮತನದ ಮೂಲ ಮಂತ್ರ. ವಿವಿಧತೆಯಲ್ಲಿ ಏಕತೆ
ರಾಷ್ಟ್ರ ಭಾವೈಕ್ಯತೆ
ಅಂಬೇಡ್ಕರ ನನಸಾದ ಕನಸಲ್ಲವೇ ಸಂವಿಧಾನ

ಓದಿಕೊಂಡಿರಲಿಲ್ಲವೇ ವೇಮುಲ
ನೀನು ಬಾಬಾ ಸಾಹೇಬರ?
ಓದಿದಿದ್ದರೆ ಓಡಿಹೋಗುತ್ತಿರಲಿಲ್ಲ
ಹೀಗೆ ಹೇಡಿಯಾಗಿ.
ಹೆತ್ತ ಹೊಟ್ಟೆಗೆ ಉರಿ‌ಅಟ್ಟಿ
ಬೇಯಿಸಿಕೊಳ್ಳುವುದಾದರೂ
ಏನಿತ್ತು ನಿನಗೆ?
ಹೆಸರಿಗಷ್ಟೇ ನೀನು ಹೋರಾಟಗಾರ ಅಂಬೇಡ್ಕರರಂತೆ ಎನಿಸಿಕೊಂಡೆ.
ಅವರ ನೋವಿನ ಹನಿ ರವವಷ್ಟೇ ಇರಬೇಕು
ನಿನಗೆ ತಗುಲಿದ ನೋವು
ಇರಲಿಲ್ಲ ಬಿಡು ನಿನ್ನಲ್ಲಿ ತಾಳಿಕೊಳ್ಳುವ
ತಾಕತ್ತು, ಅಪಮಾನ ಗೆಲ್ಲುವ ಗತ್ತು
ಇದ್ದರೆ ನೀನು ಮತ್ತೊಬ್ಬ ಬಾಬಾಸಾಹೇಬ ಆಗುತ್ತಿದ್ದೆ.
ಕೂಳನ್ನು ಕಸಿದುಕೊಂಡರಲ್ಲವೇ ಅವರು
ಅಸ್ಪೃಶ್ಯನೆಂದು ಕಪ್ಪು ಪಟ್ಟಿಯ ಸಿದ್ಧ ಮಾಡಿದರೆಂದೆ.
ಇತ್ತಿದ್ದರು ನೆಲೆ ನೀನು ಈ ನೆಲದ ಕುಡಿಯೆಂದು
ನಾಡ ಬೀಜವೆಂದು. ಉಗ್ರನಲ್ಲವೆಂದು
ವ್ಯಗ್ರನಾಗನೆಂದು.
ಹೊಟ್ಟೆಗೆ ಹಿಟ್ಟಿಲ್ಲದ ಹಟ್ಟಿಯಲ್ಲಿ ಹುಟ್ಟಿದೆ ನೀನು
ಹೋರಾಟದ ಬಿಂಬವ ಎದೆಯೊಳಗಿಟ್ಟುಕೊಂಡು
ತಣ್ಣೀರ ಬಟ್ಟೆ ಹೊಟ್ಟೆಗಿಟ್ಟು
ನಿನ್ನ ಮೆದುಳ ಪುಷ್ಟಿಗೊಳಿಸಬೇಕೆಂದರು ನಿನ್ನ
ಒಡಲಲ್ಲಿ ಹೊತ್ತವರು
ಅಡ್ಡಕಸುಬಿಗಳಿಗೆ ಅನುಯಾಯಿಯಾದೆ ನೀನು
ದೇಶ ಭಕ್ತಿಯ ಕುಡಿಗಳು ನೀವು
ದುಷ್ಟಸರ್ಪಗಳಿಗೇಕೆ ಹಾಲೆರೆದಿರಿ?
ಬದುಕಿದ್ದರೆ ಉತ್ತರಿಸುತ್ತಿದ್ದೆಯಾ?
ಅಥವಾ ಸರ್ಪಸಂಕುಲಕ್ಕೆ ಹಾಸುಗಂಬಳಿಯಾಗುತ್ತಿದ್ದೆಯಾ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...