Home / ಕವನ / ಕವಿತೆ / ವೇಮುಲನಿಗೊಂದು ಪ್ರಶ್ನೆ

ವೇಮುಲನಿಗೊಂದು ಪ್ರಶ್ನೆ

ಜಗದೊಳಗೆ ಹುಟ್ಟಿಬೆಳೆದರೂ
ಜನರೊಳಗೆ ಬೆಳೆಯುವುದೇ ಸಾಧನೆ ವೇಮುಲ.

ಇಲ್ಲದ ಮೂಲದಲ್ಲೇ ಹುಟ್ಟಿದರೂ
ಇಲಾಖೆಗಳನ್ನೇ ಕಟ್ಟಬಲ್ಲವರು ಇಲ್ಲಿಹರು
ಇದ್ದರಮನೆಯ ಮಾರಿ ತಿಂದವರು ಇಹರು
ಪರಿಪರಿಯ ಪಂಡಿತರು, ಪಾಮರರು,
ಅರೆಬರೆಯ ಶಿಕ್ಷಿತರು ಎಲ್ಲರ ಗೂಡಲ್ಲವೇ ಇದು
ನಮ್ಮತನದ ಮೂಲ ಮಂತ್ರ. ವಿವಿಧತೆಯಲ್ಲಿ ಏಕತೆ
ರಾಷ್ಟ್ರ ಭಾವೈಕ್ಯತೆ
ಅಂಬೇಡ್ಕರ ನನಸಾದ ಕನಸಲ್ಲವೇ ಸಂವಿಧಾನ

ಓದಿಕೊಂಡಿರಲಿಲ್ಲವೇ ವೇಮುಲ
ನೀನು ಬಾಬಾ ಸಾಹೇಬರ?
ಓದಿದಿದ್ದರೆ ಓಡಿಹೋಗುತ್ತಿರಲಿಲ್ಲ
ಹೀಗೆ ಹೇಡಿಯಾಗಿ.
ಹೆತ್ತ ಹೊಟ್ಟೆಗೆ ಉರಿ‌ಅಟ್ಟಿ
ಬೇಯಿಸಿಕೊಳ್ಳುವುದಾದರೂ
ಏನಿತ್ತು ನಿನಗೆ?
ಹೆಸರಿಗಷ್ಟೇ ನೀನು ಹೋರಾಟಗಾರ ಅಂಬೇಡ್ಕರರಂತೆ ಎನಿಸಿಕೊಂಡೆ.
ಅವರ ನೋವಿನ ಹನಿ ರವವಷ್ಟೇ ಇರಬೇಕು
ನಿನಗೆ ತಗುಲಿದ ನೋವು
ಇರಲಿಲ್ಲ ಬಿಡು ನಿನ್ನಲ್ಲಿ ತಾಳಿಕೊಳ್ಳುವ
ತಾಕತ್ತು, ಅಪಮಾನ ಗೆಲ್ಲುವ ಗತ್ತು
ಇದ್ದರೆ ನೀನು ಮತ್ತೊಬ್ಬ ಬಾಬಾಸಾಹೇಬ ಆಗುತ್ತಿದ್ದೆ.
ಕೂಳನ್ನು ಕಸಿದುಕೊಂಡರಲ್ಲವೇ ಅವರು
ಅಸ್ಪೃಶ್ಯನೆಂದು ಕಪ್ಪು ಪಟ್ಟಿಯ ಸಿದ್ಧ ಮಾಡಿದರೆಂದೆ.
ಇತ್ತಿದ್ದರು ನೆಲೆ ನೀನು ಈ ನೆಲದ ಕುಡಿಯೆಂದು
ನಾಡ ಬೀಜವೆಂದು. ಉಗ್ರನಲ್ಲವೆಂದು
ವ್ಯಗ್ರನಾಗನೆಂದು.
ಹೊಟ್ಟೆಗೆ ಹಿಟ್ಟಿಲ್ಲದ ಹಟ್ಟಿಯಲ್ಲಿ ಹುಟ್ಟಿದೆ ನೀನು
ಹೋರಾಟದ ಬಿಂಬವ ಎದೆಯೊಳಗಿಟ್ಟುಕೊಂಡು
ತಣ್ಣೀರ ಬಟ್ಟೆ ಹೊಟ್ಟೆಗಿಟ್ಟು
ನಿನ್ನ ಮೆದುಳ ಪುಷ್ಟಿಗೊಳಿಸಬೇಕೆಂದರು ನಿನ್ನ
ಒಡಲಲ್ಲಿ ಹೊತ್ತವರು
ಅಡ್ಡಕಸುಬಿಗಳಿಗೆ ಅನುಯಾಯಿಯಾದೆ ನೀನು
ದೇಶ ಭಕ್ತಿಯ ಕುಡಿಗಳು ನೀವು
ದುಷ್ಟಸರ್ಪಗಳಿಗೇಕೆ ಹಾಲೆರೆದಿರಿ?
ಬದುಕಿದ್ದರೆ ಉತ್ತರಿಸುತ್ತಿದ್ದೆಯಾ?
ಅಥವಾ ಸರ್ಪಸಂಕುಲಕ್ಕೆ ಹಾಸುಗಂಬಳಿಯಾಗುತ್ತಿದ್ದೆಯಾ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...