Home / ಕವನ / ಹಾಯ್ಕು / ಹತ್ತು ಹಾಯ್ಕುಗಳು

ಹತ್ತು ಹಾಯ್ಕುಗಳು


ಈ ಕದಡಿದ ಕೊಳ ತಿಳಿಯಾಗುವುದಿಲ್ಲ.
ಯಾಕೆಂದರೆ ಅದು ಸ್ಫಟಿಕಜಲದಾಗರವಲ್ಲ
ಕೆಂಪು ಕೆಂಪು ಓಕುಳಿಯ ಸುರಿಸುವ ಸಂತೆ


ಬಿಳಿತೊಗಲಿನ ಗೋಡೆಯ ಮೇಲೆ
ಬೆಳೆಯುತ್ತಿದೆ ಊರು ನಗರ
ಕೆತ್ತಸಿಕೊಂಡ ಮುಖಗಳಲ್ಲಿ ಮಾರ್ದವತೆಯಿಲ್ಲ.


ತರು ಲತೆಗಳು ಅಲ್ಲಿಲ್ಲಿ ಬೋಳಿಸಿಕೊಂಡ
ಸುಂದರಾಂಗಿಯರು, ಕಾರ್ಬನ್ನಿನ ಕ್ರೀಮಿಗೆ
ಕಪ್ಪುಂಡು ಅಮವಾಸ್ಯೆಯ ಬಣ್ಣ.


ಶಾಂತಿಗಾಗಿ ಕ್ರಾಂತಿ ಎನ್ನುವ ಭ್ರಾಂತಿ.
ಜಾತಿಯಂತಕನ ನಾಲಿಗೆಗೆ
ಭಕ್ಷ ಭೋಜನ ರಕ್ತಸಿಂಚನ
ಆಂಧ್ರ ತೆಲಂಗಾಣ.
ಮರ್ಯಾದಾ ಹತ್ಯೆ ಬಾಣದ ಇನ್ನೊಂದು ತುದಿ.


ನೆರಳಿನಲ್ಲಿ ನೇಗಿಲು ಕಟ್ಟುವ ಜನ
ಮಹಡಿಯ ಮನೆಗಳಲ್ಲಿ ಮಿಂಚುವ ಮೋಹನಾಂಗಿಯರು
ಪವಿತ್ರತೆಗೆ ಹಲಬುತ್ತ ಒಳಗೊಳಗೆ ಪುಡಿಪುಡಿ


ಸಹನೆಗೆ ಉಪಸರ್ಗ ಬೆರೆಸಿ
ಬೆಳೆಸಿದ್ದೆ ತಪ್ಪಾಯ್ತೇ ಅಸಹನೆ ಈಗ
ವಿಷಯವ್ಯಾಪಿ. ವಿಶ್ವ ವ್ಯಾಪಿ.

೭.
ಅಲ್ಲಿ ಸಿಯಾಚಿನ್ನಲ್ಲಿ ಹೆತ್ತೊಡಲ ಮರೆತು
ಹೊತ್ತೊಡಲ ಋಣಹರಿಸಿ ಹುತಾತ್ಮರು
ಮಣ್ಣಬಯಕೆಗೆ ಹೊನ್ನಹೊದಿಕೆಗೆ
ಇಲ್ಲಿ ತಾಯ್ಗರ್ಭ ಸೀಳಿದರು.


ಕಗ್ಗತ್ತಲ ಕ್ಷಣಗಳಲ್ಲೆ ರಕ್ತ ಬೀಜಾಸುರರ
ಚಿತ್ರಗಳು ರೂಪಗೊಳ್ಳುತ್ತವೆ.
ಮದಿರೆ, ಮಾನಿನಿ, ಮಣ್ಣು ಮೋಕ್ಷಗೊಳ್ಳದ
ಮಂತ್ರಗಳು ಪ್ರಳಯಕಾಲದವರೆಗೂ


ಸರಕಾರಿಗಂಗಳದಿ ಉಣ್ಣುತ್ತಲೇ
ರಹಸ್ಯ ವರದಿ ಸರಕು ವ್ಯಾಪಾರ
ನೆರೆಮನೆಯ ದೊರೆಯಣ್ಣಗಳ ಮಾರುಕಟ್ಟೆಯಲ್ಲಿ ಬಿಸಿಬಿಸಿ
ಆದರೆ ಬಡಪಾಯಿ ವೇಮುಲಗೆ
ಕಟ್ಟಿದ್ದು ಬಹು ದೊಡ್ಡ ಪಟ್ಟ

೧೦
ಶತ ಶತಮಾನಗಳ ಚರಿತ್ರೆಯ ಚೀಲ
ತುಂಬಿಕೊಂಡಿದ್ದು ಬದಲಿಲ್ಲ.
ರಾಜಕಾರಣಕ್ಕೇನು? ಗೊತ್ತಿರುವುದಿಷ್ಟೇ
ತಮ್ಮವಾದದ ಶವಪೆಟ್ಟಿಗೆಗೆ ಹೆಣ ಯಾರದ್ದಾದರೇನು?
ಮೊಳೆ ಹೊಡೆದು ಸಿದ್ಧಮಾಡುವುದೇ ಪರಮಗುರಿ
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...