Home / ಕವನ / ಕವಿತೆ / ಆಳವೆಂಬ ಅರಿವು

ಆಳವೆಂಬ ಅರಿವು

ಆಳದ ನೆಲೆಯಲ್ಲಿ ಕವಲುಗಳ
ಕುಸುರಿ ಕುಂದುವುದಿಲ್ಲ
ಅಧಿತ್ವದ ಸೊಗಸು ಜಡತ್ವ ಮೂಡದ
ಜಗಮಗಿಸುವ ಬೆಳಕು.
ಸ್ವಯಂಸ್ಪೂತರ್‍ತಿ ಸೆಲೆಯ
ಅರಗಿಸಿ ದಕ್ಕಿಸಿಕೊಳ್ಳಬೇಕು.

ಹರಳೆಣ್ಣೆ ಗಾಢವಾಗುರಿದರೆ
ಕಡುಕಪ್ಪು ಕಾಡಿಗೆ
ಚಿತ್ರ ಬರೆಯುತ್ತದೆ ಮುಚ್ಚಳದ ಅಂಚಿಗೆ.

ಹೊಸ ಸಂಕೇತಗಳಿಗೆ
ಹಳೆಯ ಸನ್ನೆಗಳೇ ಆಳಬಿಂಬಗಳು
ಕೂಡಿಕಳೆವ, ಭಾಗಿಸಿ ಗುಣಿಸುವ
ಲೆಕ್ಕಮಾಪನಗಳು
ಆಳದ ತೀವ್ರತೆಯ ಚುಕ್ಕಿಗಳು.

ಆಳದ ಹೊರಮೈ, ಒಳಮೈ
ಮೇಲೆ ಕೆಳಗೆ ಎಲ್ಲ ಕಡೆಯ
ಸಿಕ್ಕು ಬಸಿದು ನೆಕ್ಕಿ ಉಕ್ಕಬೇಕು, ಒಳಗಿನ
ವೀಣೆಯ ತಂತಿ ಮೀಟುವ ರಾಗಕ್ಕೆ
ನಿತಾಂತ ಹೊಸ ಚಿಗುರು
ಬಣ್ಣಗೂಡುತ್ತಿರಬೇಕು.

ಎದೆಗಿಳಿದ ಅಕ್ಷರಗಳು
ಶೋಕೇಸಿನ ಕಪಾಟಿನಲ್ಲಿ
ಗಾಜಿನಕೋಣೆಯಲ್ಲಿ ತಳತಳಿಸುವ
ಪದಕವಾಗಲ್ಲ..
ನೆಲಕ್ಕಿಳಿಯಬೇಕು,
ಕೆಸರ ಕೊಳದ ನೈದಿಲೆಯಾಗಬೇಕು.
ಬೆಳಕಿನ ಹಾಡ ಹೊಮ್ಮಿಸಬೇಕು.

ಆಳಕ್ಕಿಳಿದಷ್ಟು ಬಿಸಿಲ ತಣ್ಣಗೆ ಸವಿವ
ಸರಳತೆಯ ಇನಿತಿನಿತು
ಕರಗಿಸಿಕೊಳ್ಳಬೇಕು, ಅದಕ್ಕೆ ಆಳದ ಅರಿವ
ನಾನರಿತುಕೊಳ್ಳಬೇಕು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...