Home / ಕವನ / ಕವಿತೆ / ಬ್ರಹ್ಮಾಂಡದ ದನಿಗಳು

ಬ್ರಹ್ಮಾಂಡದ ದನಿಗಳು

ಬೆಳಕಿನ ಹನಿಗಳ ಮಂಡಲಕ್ಕೆ ಸನ್ನೆಕೋಲು
ಹಾಕಿ ಮೀಟಿ ತೆಗೆದಿಟ್ಟುಕೊಳ್ಳಬೇಕು ಅನ್ನಿಸುತ್ತದೆ
ಒಂದಿಷ್ಟು ಹಳತಾಗದ ಅದನ್ನೊಯ್ದು
ನೆತ್ತಿಯ ಗೋಡೆಗೆ
ಅಂಟಿಸಿಕೊಂಡರೆ ಚೆನ್ನ
ಜ್ಞಾನದ ಗುಡಾರದ ಧ್ವನಿಯೊಂದರ ಮರ್ಮರ.

ಮನೆ ಮುಂದಿನ ಚಪ್ಪರ ಬಿರುಗಾಳಿಗೆ ಬಿದ್ದು
ನೆಲಪಾಲಾದ ಕಸಗಳನ್ನೆಲ್ಲಾ ಎತ್ತಿ ಬಿಸಾಡಿದರೂ
ಕಂಬನೆಟ್ಟ ಕುಣಿ ಅರೆತೆರೆದುಕೊಂಡು ಹಾಗೇ ಬಿದ್ದಿದೆ
ಮಣ್ಣು ಕಲ್ಲುಗಳ ತುಂಬಿ ತಗ್ಗು ಮುಚ್ಚುಲೇ?
ಎನ್ನುತ್ತಿದ್ದಾನೆ- ಕೆಲಸದ ಮಂಕಾಳು.

ಸಿದ್ಧಾಂತ ತತ್ವ ಆದರ್ಶಗಳು ಜಪಕ್ಕಾಗಿ
ವಾದ ಪ್ರತಿವಾದ ಆಶಯಗಳು ನೆಪಕ್ಕಾಗಿ
ಹೀಗೆ ಪರಸ್ಪರ ವೈರುಧ್ಯಗಳ ಬಿಸಿನೀರು
ತುಂಬಿಕೊಂಡ ಹಂಡೆ
ಬೋರಲಾಗಿ ಬಿದ್ದರೆ, ಆ ನೆಲ ಹಸಿರುಕ್ಕಿಸಲಾರದು
ಎನ್ನುತ್ತಿದ್ದಾರೆ ಪ್ರೊಫೆಸರ್ರೊಬ್ಬರು.

ಭಾವ ಚಿಗುರುವುದು ಎದೆಯಲ್ಲಿ
ಮೆದುಳು ಮೀಯಬೇಕು ಸತ್ಯಂ ಶಿವಂ ಸುಂದರಂ
ಈ ಚುಕ್ಕಿ ಹೊಳಹನ್ನು
ಭಾಷ್ಯವಾಗಿಸುವುದೇ ಕಾಯಕವಾದ
ಗುರುಗಳ ಕೈಲಿಡಿದ ಬಳಪ ನೋಡುತ್ತ,
ಅದನ್ನೆ ಚೀಪುವ ಆಸೆಯುಕ್ಕಿ
ಬೆನ್ನಿಗೆ ಹೊಟ್ಟೆಯಂಟಿಸಿಕೊಂಡ ಹುಡುಗ
ಎಣ್ಣೆಗಾಣದ ಒಣಗೂದಲ ಕೆರೆದುಕೊಳ್ಳುತ್ತಾನೆ.
ಬಿಸಿಯೂಟದ ಘಮಘಮ ಬರುತ್ತಿಲ್ಲವೇ?
ಪಕ್ಕದ ಹುಡುಗನಿಗೆ ತಿವಿದು ಕೇಳುತ್ತಿದ್ದಾನೆ.

ಶತಶತಮಾನಗಳಿಂದ ಉರಿಬಿದ್ದ
ಬೆಂಕಿಯ ಮನೆಯ
ತಣ್ಣಗಾಗಿಸಲೆಂದು ಇದ್ದಿಲನ್ನು ಸುರಿಯುತ್ತಿದ್ದಾರೆ
ಆಚೀಚೆಯ ಮನೆಯವರು
ಆ ಮನೆಹೊಕ್ಕ ಇದ್ದಿಲು ಕ್ಷಣದಲ್ಲಿ
ನಿಗಿ ನಿಗಿಕೆಂಡವಾಗುತ್ತ
ವ್ಯಾಪಿಸಿಕೊಳ್ಳುತ್ತಿದೆ ಇನ್ನರ್ಧ ಜಾಗೆಯನ್ನು ಬಿಡದೆ
ನೆಲವೂ ಧಗಧಗನೇ ಉರಿಯಲಾರಂಭಿದರೆ ಮುಂದೇನು?
ಕಂಗಾಲಾಗಿ ಕೇಳುತ್ತಿದ್ದಾರೆ ನೆರೆಹೊರೆಯವರು.

ಸಮನ್ವಯತೆ ಫಲಕ ಧರಿಸಿದ ವಿಭಜಕ ಕಂಬಕ್ಕೆ
ಡಿಕ್ಕಿಹೊಡೆದ ಪಾರಿವಾಳವೊಂದು
ಸತ್ತೇ ಹೋಯಿತು
ಪರಿತಪಿಸುತ್ತಿದ್ದಾಳೆ ಹೆಣ್ಣೊಬ್ಬಳು

ಹತ್ತಾರು ರಾಗಗಳು ಗಿರಕಿ ಹೊಡೆಯುತ್ತವೆ
ಒಂದೇ ಮಂಡಲದಲ್ಲಿ ತಾರಕಕ್ಕೇರುತ್ತಿದೆ.
ಬ್ರಹ್ಮಾಂಡ ಜ್ಞಾನದ ಆಲಾಪಗಳಂತೆ
ಮುಖ ಎದೆ ಹೊಟ್ಟೆ ತುಂಬಾ ನೆರಿಗೆಗಳ
ಆಭರಣ ಧರಿಸಿದ ಸಾಧುವೊಬ್ಬ ಮುಗುಳ್ನಗುತ್ತಾನೆ.

ಬೆಂಕಿ ಮುಳ್ಳುಗಳನ್ನೆಲ್ಲಾ ಜಾಡಿಸಿ ಗುಡಿಸಿ
ಸೆಳೆದೊಯ್ಯುವಂತಹ ಮಳೆ ಬರುವ ಸುಣುಕು
ಆ ಹೊಸ ಸೋನೆ ಹನಿಯಲ್ಲಿ ಇವರೆಲ್ಲರೆಲ್ಲರೂ
ಅಪಾದಮಸ್ತಕ ನೆನೆಯಲಿ
ಮುದಗೊಳ್ಳಲಿ ದೇವರೇ..
ಕನಸುತ್ತೇನೆ ನಾನು…
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...