Home / ಲೇಖನ / ವಿಜ್ಞಾನ / ಜೇನು: ಆಹಾರ-ಔಷಧಿ

ಜೇನು: ಆಹಾರ-ಔಷಧಿ

“ಜೇನು” ಎನ್ನುವ ಪದವೇ ಸರ್‍ವರ ಬಾಯಲ್ಲೂ ನೀರು ತರಿಸುವಂತಹದು. ಜೇನು ನಿಸರ್‍ಗದ ಸಿಹಿಯಾದ ಕೊಡುಗೆ. ಮಕರಂದದ ಸಂಗ್ರಹಿಸಿದ ಹೂವಿನ ಜಾತಿಯನ್ನು ಹೊಂದಿಕೊಂಡು ಜೇನಿಗೆ ಬಗೆಬಗೆಯ ರುಚಿ, ಸುವಾಸನೆ ಮತ್ತು ಬಣ್ಣ ಇರುತ್ತದೆ. ಬಿಳಿ ಬಣ್ಣದಿಂದ ಹಳದಿ ಮತ್ತು ಕಡು ಹಳದಿ ಬಣ್ಣಗಳವರೆಗೆ ಜೇನಿನಲ್ಲಿ ವರ್‍ಣವೈವಿಧ್ಯವುಂಟು. ಜೇನು ಆಹಾರವೂ ಹೌದು, ಔಷಧವೂ ಹೌದು.

ಜೇನು ವೈದ್ಯಕೀಯ ಶಾಸ್ತ್ರದಲ್ಲಿ ಮತ್ತು ಆಯುರ್‍ವೇದ ಪದ್ಧತಿಯಲ್ಲಿ ಮಹತ್ವದ ಸ್ಥಾನ ಪಡೆದಿದೆ. ಜೇನು ಹಾಲಿಗಿಂತಲೂ ಆರು ಪಟ್ಟು ಪೌಷ್ಟಿಕತೆ ಹೊಂದಿದೆ. ಬಿಳಿ ಬಣ್ಣದ ಜೇನು ತುಪ್ಪಕ್ಕಿಂದ ಕಂದು ಬಣ್ಣದ ಜೇನಿನಲ್ಲಿ ಪೌಷ್ಟಿಕ ಪ್ರಮಾಣ ಹೆಚ್ಚಾಗಿರುತ್ತದೆ. ಶಕ್ತಿಯನ್ನು ಒದಗಿಸುವಲ್ಲಿ ಜೇನಿಗೇ ಮೊದಲನೆ ಸ್ಥಾನ. ೧೦ ಟೇಬಲ್ ಚಮಚ (೨೦೦ ಗ್ರಾಂ)ದಷ್ಟು ಜೇನು, ೩೩೦ ಗ್ರಾಂ ಮಾಂಸ ಅಥವಾ ೧೦ ಕೋಳಿಮೊಟ್ಟೆ ಅಥವಾ ೮ ಕಿತ್ತಳೆಹಣ್ಣು ಅಥವಾ ೧ ಲೀಟರ್‍ ಹಾಲು ಒದಗಿಸುವುದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಪೌಷ್ಟಿಕಾಂಶವನ್ನು ಒದಗಿಸುತ್ತದೆಯೆಂದಾಗ ಅದರ ಶಕ್ತಿಯ ಅರಿವಾಗದಿರದು. ಸುಮಾರು ೨೧ ಗ್ರಾಂ ಜೇನುತುಪ್ಪ ಸುಮಾರು ೬೭ ಕ್ಯಾಲೋರಿಗಳಷ್ಟು ಶಕ್ತಿಯನ್ನು ಒದಗಿಸಬಲ್ಲದು.

ಮುಖ್ಯವಾಗಿ ಜೇನಿನಲ್ಲಿ ಲೆವ್ಯೂಲೋಸ್ ಮತ್ತು ಡೆಕ್ಸ್‌ಟ್ರೋಸ್ ಎಂಬ ಸಕ್ಕರೆಗಳು ಇರುತ್ತವಾದರೂ, ಅದರಲ್ಲಿ ದೇಹಾರೋಗ್ಯಕ್ಕೆ ಅಗತ್ಯವಿರುವ ಹೆಚ್ಚು ಕಡಿಮೆ ಎಲ್ಲಾ ಖನಿಜ-ಲವಣಾಂಶಗಳು ಮತ್ತು ವಿಟಾಮಿನ್‌ಗಳು ಸಾಕಷ್ಟಿವೆ. ಜೇನುತುಪ್ಪದಲ್ಲಿರುವ ಕಬ್ಬಿಣ ಮತ್ತು ತಾಮ್ರದ ಅಂಶಗಳು ನೇರವಾಗಿ ಸಂಪೂರ್‍ಣವಾಗಿ ದೇಹದಲ್ಲಿ ಅರಗಿಕೊಂಡು ಬರುತ್ತವೆ. ಇದರ ಜೊತೆಗೆ ಇತರ ಪದಾರ್‍ಥಗಳು ಕೂಡ ಇದರ ಸಾನಿಧ್ಯದಲ್ಲಿ ಹೆಚ್ಚು ಪ್ರಮಾಣದಲ್ಲಿ ಕರಗಿ ಹೆಚ್ಚು ಗುಣಗಳನ್ನು ಶೀಘ್ರವಾಗಿ ಕೊಡುತ್ತವೆ.

ಜೇನಿನಲ್ಲಿ ಬಹು ಸರಳ ರೂಪದ ಸಕ್ಕರೆಯಿರುವುದೇ ಅದರ ಹಿರಿಮೆಗೆ ಕಾರಣ. ಸುಲಭವಾಗಿ ಜೀರ್‍ಣವಾಗುವ ಶಕ್ತಿದಾಯಕವಾದ ಸರಳ ಸಕ್ಕರೆಯಿಂದಾಗಿ ಅಸ್ವಸ್ಥತೆಯಲ್ಲಾಗಲೀ, ಆರೋಗ್ಯದಲ್ಲಾಗಲೀ ಜೇನನ್ನು ನಿರಾತಂಕವಾಗಿ ಎಲ್ಲರೂ ಸೇವಿಸಬಹುದು.

ರೋಗ ನಿವಾರಕ

ಜೇನುತುಪ್ಪ ಪ್ರಬಲ ರೋಗ ನಿರೋಧಕ. ಕೆಂಪು ರಕ್ತಕಣಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. ಇದು ಕೆಮ್ಮು, ಶೀತ ಮತ್ತು ಜ್ವರದ ವಿರುದ್ಧ ತಡೆಯಾಗಿಯೂ ಕೆಲಸ ಮಾಡುತ್ತದೆ. ಇದು ರಕ್ತ ಶುದ್ಧಿಕಾರಿಯಾಗಿಯೂ, ಕಣ್ಣಿನ ವ್ರಣ, ನಾಲಿಗೆ ವ್ರಣ, ಗಂಟಲು ಹುಣ್ಣು ಮತ್ತು ಸುಟ್ಟ ಗಾಯಗಳಿಗೆ ಬಹಳಷ್ಟು ಗುಣಕಾರಿಯಾಗಿದೆ.

ಮುಖದ ಮೇಲೆ ಮೊಡವೆಗಳುಳ್ಳವರು ಸ್ವಲ್ಪ ನಿಂಬೆರಸದೊಡನೆ ಜೇನನ್ನು ಬೆರಸಿ ಹಚ್ಚಿಕೊಳ್ಳುವುದರಿಂದ ಮೊಡವೆಗಳು ಮಾಯವಾಗುವುದಲ್ಲದೆ ಚರ್‍ಮವೂ ಶುದ್ಧಿಯಾಗುತ್ತದೆ.

ದುಡಿತದಿಂದ ತುಂಬಾ ಬಳಲಿದವರು ಒಂದುವರೆ ಟೇಬಲ್ ಚಮಚ ಜೇನನ್ನು, ಚಳಿಗಾಲದಲ್ಲಾದರೆ ೧ ಗ್ಲಾಸ್ ಬಿಸಿ ನೀರಿನಲ್ಲಿ, ಬೇಸಿಗೆಯಲ್ಲಾದರೆ ತಣ್ಣಿರಿನಲ್ಲಿ ಸೇವಿಸಿದರೆ ತನ್ನ ಕಳೆದುಹೋದ ಶಕ್ತಿಯನ್ನು ಪುನಃ ಪಡೆಯುತ್ತಾರೆ.

ಕಂದುಬಣ್ಣದ ಜೇನುತುಪ್ಪದಲ್ಲಿ ಕಬ್ಬಿಣ, ಮ್ಯಾಂಗನೀಸ್ ಮತ್ತು ತಾಮ್ರದ ಪ್ರಮಾಣ ಹೆಚ್ಚಾಗಿರುವುದರಿಂದ ಇದರ ಸೇವನೆಯಿಂದ ಅನಿಮಿಯಾ ರೋಗವು ಕ್ರಮೇಣ ಗುಣ ಹೊಂದುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...