Home / ಕವನ / ಕವಿತೆ / ಆಶಮಾಡಿ ಪಾಶಕ ಬಿದ್ದಿತೋ ಚಿಗರಿ

ಆಶಮಾಡಿ ಪಾಶಕ ಬಿದ್ದಿತೋ ಚಿಗರಿ

ಆಶಮಾಡಿ ಪಾಶಕ ಬಿದ್ದಿತೋ ಚಿಗರಿ
ದೇಶಕ ತುಂಬ ಜಾಲ ಹಾಕಿದ ಕ್ಷತ್ರಿ  ||ಪ||

ಮೇಯಲಿಕ್ಕೆ ಬಿಟ್ಟುಬಂದಿತು ತನ್ನ ಮರಿ
ಮೋಸದಿ ಸಿಲುಕಿತು ಅರಸನ ಕೈಸೇರಿ  ||ಅ.ಪ.||

ಬಿಡರಿ ಸ್ವಲ್ಪ ಕುಡಿಸಿ ಬರುನೆನು ಹಾಲ
ಅಗಲಿದಿಯಾ ಅಯ್ಯೋ ಬಾಲಗೋಪಾಲ
ಅರಸನಿಗೆ ಕರುಣ ಬರಲಿಲ್ಲರಿ
ಮುಖಭಂಗವಾಗಿತ್ತು ದುಃಖದೊಳು ಚಿಗರಿ  ||೧||

ಮನಿಗೆ ಹೋಗಿ ಮಕ್ಕಳ ನೋಡಿ ಬರುವೆನ್ರಿ
ಬೇಕಾರದವ್ರ ಬೇಡ್ರಿ ಕೊಡುನೆನು ಜಾಮೀನ್ರಿ
ಮೃಗಜಾತಿ ನಿನ್ನ ನಂಬಿಗೆಯೇನು
ಅಡವಿಯಲ್ಲಿ ಮೇಯುತ್ತಿದ್ದಿ ಬೆದರಿ  ||೨||

ಶರಣರ ಚರಣಕ್ಕೆ ಎರಗಿತು ಚಿಗರಿ
ಅರಸನ ಕೈಯೊಳಗಿಂದ ಬಿಡಿಸಿರಿ
ಅರವುಳ್ಳ ಶರಣರು ಕಕಲಾತಿ ಮಾಡಿದರು
ಸಕಲಸಂಪನ್ನರಾಗಿ ಬಿಡಿಸಿದರು ಚಿಗುರಿ  ||೩||

ಕರಮುಗದು ಚಿಗರಿ ವಂದನಮಾಡಿ
ಸೆರಮನಿ ಬಿಡಿಸಿರಿ ಕರುಣೆಮಾಡಿ
ಎರಡು ಮಕ್ಕಳ ತಂದು ಶರಣರ ಮುಂದೆ
ಅಡಿದಾವರೆಗೆ ಒಪ್ಪಿಸೇನಿ ಬೇಕಾದ್ದಮಾಡ್ರಿ  ||೪||

ಮಕ್ಕಳು ಅಂದಾವು ಮುಂಚೆ ನಮ್ಮನ್ನು ಕೊಯ್ಯಿರಿ
ನಮ್ಮ ತಾಯಿ ಸಲಹಿ ನೀವು ಹಿತವಂತರಾಗಿರಿ
ಅರಸನ ಮನಸಿಗೆ ಆದೀತೋ ಫನಶಾಂತಿ
ಅನುಮಾನ ಯಾತಕ್ಕೆ ಹೋಗು ಚಿಗರಿ  ||೫||

ಶರಣರ ಅನುಗ್ರಹದಿ ಉಳಿದಾವು ಮೂರು ಜನ್ಮ
ಸರ್ವಜನರು ಅನ್ನುವರು ಶರೀಫಸಾಹೇಬನ ಕಲ್ಮಾ
ಅಲ್ಲಮನ ಧ್ಯಾನ ಕಲ್ಮಾನ ಸೂತ್ರ
ಬಹದ್ದೂರ ಗೋವಿಂದನ ಧ್ಯಾನ  ||೬||

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...