Home / ಕವನ / ಕವಿತೆ / ಇರಬಹುದು ಬದುಕು

ಇರಬಹುದು ಬದುಕು

ನಮ್ಮೆಲ್ಲರ ಪಯಣದ ದಾರಿ
ತುಂಬ ಗಿಡಮರ ಹಕ್ಕಿ ಚಕ್ಕಿ
ವಿಸ್ಮಯಗಳ ನೋಟ ಕೂಟದಲ್ಲಿ
ನಾನೀನಾಗಿ ನೀನಾನಾಗಿ ಬಿಟ್ಟು
ಬಂದ ನಡೆದ ದಾರಿ ಹಸಿಬಿಸಿ
ಎಲ್ಲವೂ ಇದ್ದು ಒಮ್ಮೆ ತಿರುಗಿ
ನೋಡಿ ನರಳೋಣ ಇದು ಇರಬಹುದು ಬದುಕು

ಏನೇನೋ ಹುಡುಕಾಟ ತಲ್ಲಣ
ಶೃತಿ ಅಪಶೃತಿಗಳ ನಡುವೆ ಎಲ್ಲರೂ
ಎಲ್ಲವೂ ಸಹಜ ಮತ್ತೆ ಬೇರೆ ಏನೋ
ಹರಿದು ಹರಡಿ ವಿಸ್ತರಿಸಿದ ಹಮ್ಮುಬಿಮ್ಮು
ಯಾವುದೋ ಬೇಟೆ, ಎಲ್ಲಿಯದೋ ನೋಟ
ಓಣಿದಾಟಿ ಬಂದವರೆಲ್ಲಾ ಕುಣಿದು ಹಾಡಿದರು
ಇದು ಇರಬಹುದು ಅಸ್ತಿತ್ವದ ಬದುಕು.

ಎಲ್ಲ ಪಯಣವೂ ಆರಂಭವಾಗಿ
ನನ್ನನ್ನಿನ್ನಲಿ ಅಂತ್ಯಗೊಳ್ಳುವುದು ಅದೇ
ದಾರಿಯಲಿ ಕೌನೆರಳು ಬಸಿಲುಗಳಾಟದಲಿ
ಮುಟ್ಟಿತಟ್ಟಿ ವಟಗುಟ್ಟಿದ ರಾಮಾಯಣ
ಮಹಾಭರತದ ಪಾತ್ರಗಳು ಸಂತೈಸಿ
ಸಮಾಧಾನಿಸಿ ಮತ್ತೆ ಕೆರಳಿಸಿದ ಕನವರಿಕೆ
ಇದು ಇರಬಹುದು ಅಹಮಿಕೆಯ ಬದುಕು.

ನಡೆವದಾರಿಗುಂಟ ಬಂಡಾಯ ಸಾವಿರ
ನೋವುಗಳ ನರಳಾಟ ಸುಮ್ಮನೆ ರಾತ್ರಿಗಳು
ಮಲಗಿದೆ ಮೌನದ ಕತ್ತಲೆಯಲ್ಲಿ ಎಲ್ಲೋ
ಹೊಳೆದ ತಾರೆಗಳು ತಿಂಗಳ ಬೆಳಕಿನ
ನೆರಳಲಿ ಅವನ ಅವಳ ಹುಡುಕಾಟ
ಉರಿವಗ್ನಿಕುಂಡಸುತ್ತ ಕರುಳ ಹಾಡು
ಹುಡಿಮಣ್ಣಿನ ವಾಸನೆಯ ತಾಕಲಾಟ
ಇದು ಇರಬಹುದು ನಿಜದ ಬದುಕು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...