Home / ಕವನ / ಕವಿತೆ / ಅಹಲ್ಯೆ

ಅಹಲ್ಯೆ

ಕನಸುಗಳು ಕತ್ತಲಲ್ಲಿ ಕರಗಿ ಹೋಗಿ
ಕಣ್ಣು ಮುಚ್ಚಿ ಕುಳಿತಾಗ ಉತ್ತರವಾಗಿ
ಮೆಲ್ಲಗೆ ನಿನ್ನ ಹೆಜ್ಜೆಯ ಸಪ್ಪಳಗಳು
ಇರುವೆಗಳಂತೆ ಸದ್ದು ಮಾಡದೇ
ಮುಚ್ಚಿದ ಬಾಗಿಲುಗಳ ಸಂದಿಯಿಂದ
ಹರಿದು ಬಂದಾಗ ಕಣ್ಣುಗಳ ತುದಿಯಿಂದ
ಹನಿಗಳು ಜಾರಿ ಬಿದ್ದವು ಮಂಕಾದಳು ಅಹಲ್ಯೆ

ಕಾಲುದಾರಿ ರಸ್ತೆರಹದಾರಿ ಏನೊಂದೂ ಆಗದ
ನನ್ನ ಪ್ರೇಮದ ನಡುಗೆ ಬರೀ
ಅವರಿವರ ಕಣ್ಣುಗಳ ನೋಟಗಳ ಅರೆಸುವಿಕೆ
ನೆನೆಪುಗಳು ತೂತು ತೂತಾದ ಜಾಲರಿಯ
ಭಂಗಿಗಳು ಸೋರಿಹೋದ ಕಣಗಳ ನೆನಪು
ಗೋಡೆ ಮೇಲಿನ ಗಡಿಯಾರ ಸುಮ್ಮನೆ
ಬಾರಿಸುತ್ತದೆ. ಗಂಟೆಗಳ ಕಾಯುತ್ತಾ ಕುಳಿತ ಅಹಲ್ಯೆ.

ಸ್ಪರ್ಶದಲಿ ಚಿಗುರಿನಲಿ ಮೌನದಲಿ
ಬೆರಗು ವಿಸ್ಮಯಗಳ ಹಾದಿ ಪಯಣದಲಿ
ಒಂಟಿ ಕಂದೀಲು ಹಿಡಿದು ಕಲ್ಲಾದ ಉಸಿರು
ಓಣಿಯ ತುಂಬೆಲ್ಲಾ ಬರೀ ಕೆಸರು ಯಾವ
ಸೂಚನೆಗಳು ಯೋಚನೆಗಳು ಗಾಳಿಯಲಿ
ನೀಲಿಯಲಿ ನದಿಯಲಿ ಹರಿದು ಬರೆಯಲು
ಕನಸುಗಳ ಬಣ್ಣದ ಎಳೆಗಳ ನೇಯ್ಗೆ, ಎದೆಯ ಮಗ್ಗದಲಿ
ಸ್ಪರ್ಶ ಸುಖದ ಕಾವು ಹರಡುವ ಸೂರ್ಯನಿಗಾಗಿ,
ಕಾಯುತ್ತಾ ಕುಳಿತ ಅಹಲ್ಯೆ ಇವಳು.

ಮೂಡಿಸಿದ ಮೂಡಲಲಿ ಕೆಂಪುಹಿತ
ಬಣ್ಣದೋಕುಳಿ ಆಡಿದ ಸಂಜೆಯ
ಬಾನಿನ ತುಂಬಾ ರೆಕ್ಕೆಗಳ ಬಿಚ್ಚಿ ಹಾರಾಡಿ
ಸಾಗಿದ ಬೆಳ್ಳಕ್ಕಿ ಹಿಂಡು, ಚಂದ್ರನಿಲ್ಲದ
ಇರುಳಲ್ಲಿ ನಕ್ಷತ್ರಗಳ ಲೋಕಗಳ ಚುಕ್ಕಿಗಳು
ಮಿನುಗಿ ಊರೆಲ್ಲಾ ನಿಶ್ಯಬ್ದ ಬಂದೇ ಬರುವ
ಅವನ ಹೆಜ್ಜೆ ಸಪ್ಪಳದಲ್ಲಿ ಕಲ್ಲಾಗಿ ಪವಡಿಸಿದ
ನಾಳೆಯ ಆಗಮಕೆ ಕಾದ ಅಹಲ್ಯೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...