Home / ಕವನ / ಕವಿತೆ / ಹಕ್ಕಿ ಮರ

ಹಕ್ಕಿ ಮರ

ಒಡಲ ಕುಂಡದಲ್ಲಿ ಹೀಗೆ ನರಳಿ ಹೊರಳಿ
ಅರಳುವ ಒಂಟಿತನಕ್ಕೆ ಪಕ್ಕದಲ್ಲಿ
ಮರದಲ್ಲಿ ಕುಳಿತು ಹಕ್ಕಿ ಹಾಡಿತು,
ರೆಕ್ಕೆ ಬಿಚ್ಚಿ ಹಾರಲು ನೀಲಬಾನುವಿನ
ಆಳ ನಿರಾಳ ಲೋಕಕ್ಕೆ ಕಣ್ಣುಗಳು ಹೊರಳಿದವು,
ವಿವಶವಾಗಿ ಚಂಗನೆ ಚಿಗುರಿದ ವಿಸ್ಮಯಗಳು ಕಂಡು.

ರಾಗವಿಲ್ಲದ ಪದಗಳಿಗೆ ಹಕ್ಕಿ
ಮೆಲ್ಲಗೆ ನೇವರಿಸಿ ಪ್ರೀತಿ ಕೊರಳು ತುಂಬಿ
ಹಾಡು ಹಾಡಿತು, ಅಂಟುನಂಟಿಲ್ಲದ ಹಂಗಿನಲ್ಲಿ,
ಮೊಳಕೆ ಹರಡಿ ಚಿಗುರು ಚಿಮ್ಮಿ
ಹಸಿರೆಲ್ಲಾ ಮರದ ತುಂಬಾ ಹರಡಿ ಹಾಯಾಗಿ,
ನಕ್ಷತ್ರಗಳು ಹಿರಿಡಿದವು ಬಾನಿನಿಂದ ಇಳಿದು ಬಂತು
ಬೆಳಕು ನೆರಳುಗಳಾಟಕೆ ಕುಪ್ಪಳಿಸಿದ
ಹಕ್ಕಿ ಜೋಕಾಲಿ ಜೀಕಿ ಹಾರಿ ಏರಿ ಮತ್ತೆ
ಅವಿತು ಕೊಳ್ಳುವ ತಾಣವನ್ನು ತನಗೇ ತಾನೆ
ಬಾಹುಗಳ ಚೆಲ್ಲಿ ಅಂಗೈಯಲ್ಲಿ ಹೊಸೆದು

ಬಿಗಿದು ಬಯಲ ಅನಂತ ಬಾಳಲೆಂದು
ಟೊಂಗೆಯ ಸಂಧಿಯಲಿ ಗೂಡು ಕಟ್ಟಿತು ಪ್ರೀತಿಯಗುಂಗಿನಲಿ.
ಹಿಡಿ ಯಲಾಗದ ಬೆಳದಿಂಗಳು ಹರಡಿ
ಮರದ ಕೊಂಬೆ ರೆಂಬೆಯಲಿ ಇಬ್ಬನಿ
ಹಾಸಿ ಮರ್ಮರಕೆ ಚಿಗಿತು ಚೆಲ್ಲುವ
ಕನಸುಗಳ ಹೂಗಳು ಗೂಡಿನಲಿ
ಶೃಂಗಾರ ಕಾವ್ಯದ ಲಹರಿ ಹರಿದು ಬಂತು
ಹಕ್ಕಿ ಕೊರಳ ಗಾನದಲಿ ಮರದ ನಾದದಲಿ
ಮುಟ್ಟಲಾಗದ ಪ್ರೀತಿ ಕೂಟದಲಿ.
*****

Tagged:

Leave a Reply

Your email address will not be published. Required fields are marked *

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...