Home / ಕವನ / ಕವಿತೆ / ಮಹಾಭಾರತ

ಮಹಾಭಾರತ

ತಂತಿಯಲಿ ತೇಲಿ ಬಂದ ಅವರ
ಧ್ವನಿ ಕಂಪನಗಳು ನೇರವಾಗಿ
ನನ್ನೆದೆಯೊಳಗೆ ಇಳಿದಾಗ ಆಗಸದಲ್ಲಿ
ಸೂರ್ಯ ಕ್ರಮಿಸಲು ಶುರುವಿಟ್ಟುಕೊಂಡಿದ್ದಾನೆ.
ದಿನದ ಉಲ್ಲಾಸಗಳೆಲ್ಲಾ ಸಾಂದ್ರವಾಗಿ
ಕೆನೆಗಟ್ಟದ ಹಾಲು, ನಡೆದಾಡುವ, ಇತಿಹಾಸಕ್ಕೆ ಸಾಕ್ಷಿ.
ಸೆರಗ ತುಂಬಾ ಕೆಂಡ ಕಟ್ಟಿಕೊಂಡ ದ್ರೌಪದಿ.

ಬಯಲಾಟ ವೇಷಗಳಿಗೆ ಕಾಮನ ಬಿಲ್ಲಿನ
ರಂಗಗಳು ತುಂಬ ವೇಷಕಟ್ಟು ವರ ನಿಜದಲಿ
ನಿನ್ನ ನೆನಪಿನ ಹಣತೆಗಳ ಹಚ್ಚಿ ದೀಪಾವಳಿ
ಬೆಂಕಿಯಂತೆ ಸುಡುವ ರಾತ್ರಿ ಜೂಜಾಟದಲಿ
ಪಗಡೆಯಾಡಿ ಸೋತ ವೀರ್ಯವಂತರ ಸೇನೆ
ದಾಳಗಳ ದಾಳಿಗೆ ದೃಷ್ಟಿ ಕಳೆದುಕೊಂಡ ಗಾಂಧಾರಿ.

ಎಲ್ಲಿಯೂ ಕೊಡಲಿಲ್ಲ ಸೂತಕದ ನೆರಳು
ಪುನಕರಗಿ ದ್ರವವಾದ ಸುಯೋಧನ
ಕಣ್ಣ ತುಂಬ ಹೆಪ್ಪುಗಟ್ಟದ ವೈಶಾಂಪಾಯನ
ಬಿಕ್ಷಾಪಾತ್ರೆಯಲಿ ತುಂಬಿ ತೇಲಿದ ಅಪರಾಧ
ತಿಳಿದ ದಾರಿಯ ತುಳಿಯ ಹೊರಟ ಪಾಂಚಾಲಿ.

ಭಾರತದಲಿ ಮಹಾಭಾರತ ಯಾವುದು
ಎತಕ್ಕೆ ಎಂಬುದು ತಿಳಿಯದೇ ಹರಿಹಾಯ್ದ
ಮಂಡೆ ಕಾಯಿಸಿಕೊಂಡ ಎಣ್ಣೆ ದೀಪ ಉರಿಸಿದ
ವ್ಯಾಸ ಹೀಗೆ ದಣಿಯುತ್ತ ನಡೆಯುವ ದೇಹ
ಕೈಗೆ ಸಿಕ್ಕಿ ಬೀಜಗಳ ಉದುರಿಸಿ ಗಿಡ, ಮರ
ಬಳ್ಳಿಗಳ ಹಬ್ಬಿಸಿ ಕಳೆದ ಜನ್ಮಾಂತರ
ಲೋಕದ ಏಕಾಂತವೆಲ್ಲಾ ಬಣ್ಣದಲ್ಲಿ ಅದ್ದಿದ್ದ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...