Home / ಕವನ / ಕವಿತೆ / ಕಂದ ಕೃಷ್ಣ

ಕಂದ ಕೃಷ್ಣ

ತೇಲಿದ ಮೋಡಗಳ ನೀಲಿ
ಶಬ್ಧಗಳ ಗುಂಗುಗಳ ಹಿಡಿದು
ಹರಡಿ ಹಾಸಿದ ನೀಲಿ ಕಡಲ ಬಣ್ಣ
ಕಂಪು ಸೂಸಿ ಎಲ್ಲಾ ಹೂಗಳ ತುಂಟ
ಕಣ್ಣುಗಳ ನೋಟದಲಿ ಅರಳಿ ತೇಲಿ
ಕಂದನವನು ಅಲ್ಲಿ ಇಲ್ಲಿ ಸುಳಿದಾಡಿ
ತುಂಬು ಕಂಪನಿಲಿ ಇಂಪಿನಲಿ ಲಾಲಿರಾಗ
ಬೆನ್ನು ಬಿಡದೆ ಬೆಂಬತ್ತಿ ಬಂದಾಗ
ಎದೆಯ ತುಂಬೆಲ್ಲಾ ಅರಬೀ ಸಮುದ್ರ ಉಕ್ಕಿ ಉಕ್ಕಿ
ನಾನೀಗ ಯಶೋಧೆ.
“ವಜ್ರ ವೈಢೂರ್ಯ ಬೇಡ ನನಗೆ
ತುಪ್ಪದ ಅಪ್ಪ ಸೇರದೆ ನಗೆ
ಎತ್ತಿ ದಾರತಿ ತುಂಬಾ ಬೆಳಕು ಕಳವಳದ
ಸಂಜೆ ರಾತ್ರಿಗಳು ನಿಟ್ಟಿಸಿದ ಕಣ್ಣುಗಳ ಸಾವಿರಾರು
ಹೈರಾಣ ಮಾಡಿದೆ ಕುದಿದ ಸೆಖೆ
ಬಯಲ ತಪ್ಪಲಲ್ಲಿ ನನ್ನ ಕೊಳಲಿನ ಕರೆಗೆ
ನರ್ತಿಸಲಿ ನವಿಲು ಅಲ್ಲಿ ಆಡಲಿ, ಕುಚೇಲ
ಚನ್ನಿದಾಂಡು, ಮತ್ತೆ ಗಿಲಿ ಗಿಲಿ ಗೆಜ್ಜೆಯನಾದ
ಗೋಪಿಕೆಯರು ಜೊತೆಗೂಡಲು ಋಷಿಯಲಿ,
ಅಮ್ಮ ಎತ್ತಿಕೊಳ್ಳು ಈಗಲೇ ಈಗಿಂದೀಗಲೇ.”
ಅವನೀಗ ಯಶೋಧೆ ಕಂದ.

ಎಲ್ಲ ರಾಗಗಳು ನದಿಯಾಗಿ ಹರಿದು
ಬಯಲು ತುಂಬ ಹಸಿರು ತಂಬೆಲರು
ಬೆಳ್ಳಗೆ ಬೆಳ್ಳಿಗೆರೆಯಲಿ. ತೇಲಿದ ಬೆಳ್ಳಕ್ಕಿ ಹಿಂಡು
ನೀಲ ಬಾನ ತುಂಬ ತುಂಟರು ಹಾಸಿದ ಬಣ್ಣದ
ಗಾಳಿ ಪಟಗಳು ಅರಳಿದ ಕಣ್ಣುಗಳಲಿ
ಜಗದ ವಿಸ್ಮಯ ಬಯಲು ಸೀಮೆಯ
ಹೊಲಗಳ ಬದುಕಿನ ತುಂಬ ಇವನ
ರಾಗ ಪಲ್ಲಕ್ಕಿ ಹಕ್ಕಿ ಸಾಲು ತೇಲಿ ಜಂಗಮದಲಿ
ಮುರಳಿ ಲೋಲನ ಕಂಪನಗಳ ರಾಗಗಳು
ದೇವಕಿ ನಂದನೀಗ ಯಶೋಧೆ ಕಂದ.

ಫರ್ಮಾನುಗಳ ಹೊರಡಿಸಿವೆ ಅಷ್ಟ ಮಠಗಳು
ಅಷ್ಟದಿಕ್ಕುಗಳಿಗೆ ಎಲ್ಲ ಇಹ ಪರದ ಗೌಜು
ಗದ್ದಲಗಳ ಮಧ್ಯೆ ಬಯಲಲ್ಲಿ ಅವನೀಗ
ಸುಮ್ಮನೆ ಮಣ್ಣಿನಲಿ ಆಡಿ ಮೈಕೈಯಲ್ಲಾ
ಧೂಳು ಕೆಸರು ಬೆತ್ತಲೆ ಬಯಲಲ್ಲಿ
ನಿಲ್ಲಿಸಿ ತಣ್ಣನೆಯ ಗಾಳಿ ಹೊತ್ತ ಪಂಚನದಿಗಳ
ನೀರು ಹೊಯ್ಯುತ್ತಿರುವ ಯಶೋಧೆ.
ಅವನೀಗ ಮರೆತು ಬಿಟ್ಟಿದ್ದಾನೆ. ಉಕ್ಕುವ ಸಮುದ್ರ
ಬಣ್ಣದ ಬೋರಂಗಿ ಹಿಡಿದು ಹಾರಿಸುತ್ತಿದ್ದಾನೆ. ಸುಮ್ಮನೆ. ಝಮ್ಮನೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...