Home / ಕವನ / ಕವಿತೆ / ಸೂರ್‍ಯ

ಸೂರ್‍ಯ

ಈ ಸಂಜೆ ಕಂತುವ ಸೂರ್‍ಯ
ಯಾಕೋ ಮಂಕಾಗಿ
ಅವನ ಬಣ್ಣವೆ ಜಿಗುಟಾಗಿ…
ಎಲ್ಲವೂ ಸ್ತಬ್ಧವಾಗಿತ್ತು; ಗಾಳಿ
ಚಲಿಸುತ್ತಿರಲಿಲ್ಲ; ಹಕ್ಕಿಗಳು ಮಾತ್ರ
ಗೂಡಿಗೆ ಮರಳುತ್ತಿದ್ದವು.

ಎಲ್ಲ ಧ್ವನಿಗಳು ಪ್ರತಿಧ್ವನಿಗಳಾಗಿ
ಒರಲಿ ಉರುಳಾಡಿ ಶಬ್ಧಗಳೇ
ಸರಿದು ಹೋಗಿ ಎಲ್ಲೆಲ್ಲೂ ಮೌನ
ಓಣಿ ಎರೆದು ಮಲಗಿಸಿ ಕಂದನಂತೆ
ತೆಪ್ಪಗೆ ಮಲಗಿತ್ತು ಮಂಕಾದ ಸೂರ್ಯ
ಬೇರೆ ನಾಡಿಗೆ ಬೆಳಕು ಮಾರಾಟ ಮಾಡಲು.
ಹೋದ.

ಮರದಲ್ಲಿ ಅರಳದ ಹೂವಿನ
ಮೊಗ್ಗುಗಳಿಗೆ ಮೌನದ ಕತ್ತಲು
ಕಚುಗುಳಿ ಇಟ್ಟು ಅನುರಣಿಸಿದಾಗ
ಕೈ ಕಾಲು ಮಡಚಿ ಮಲಗಿದ ಕತ್ತಲೆ
ಕೋಣೆ ತುಂಬಾ ಕಂತಿದ ಸೂರ್ಯ
ಹಳದಿ ಬಣ್ಣ, ಕಣ್ಣು ಮುಚ್ಚಾಲೆಯಾಟದಲಿ
ಗೆದ್ದವರು ಯಾರೋ ಸೋತವರ ಯಾರೋ
ಸಣ್ಣ ಬೀಜಗಳ ಮರ ಮಾಡುವ ಸೂರ್ಯ
ಮತ್ತೆ ರಾಜಾರೋಷವಾಗಿ ಉದಯಿಸಿದ.

ಹೊಸ ಪಲ್ಲಕ್ಕಿ ಸಾಗಿದ ಮಾರ್ಗ ಗುಂಟ
ಮತ್ತೆ ಗೌಜುಗದ್ದಲ, ಒಬ್ಬರ ಮೇಲೊಂದು
ಮಗದೊಂದು ಪಾದದ ಗುರುತುಗಳು
ಸಾಗಿ ತೇಲಿ ಹೋದ. ಇರುವೆಗಳ ಸಾಲು.
ದಾರಿ ಬದಿಯ ಗಿಡ ಟೊಂಗೆಗಳಿಂದ ಇಣುಕಿದ
ಸೂರ್ಯ ಸೂಸಿ ರಾಗ ಧ್ವನಿಗಳು ಚೈತನ್ಯಗಳು

ಕಂತುವ ಸೂರ್ಯ ಹುಟ್ಟುವ ಸೂರ್ಯ
ನಮ್ಮ ನಿಮ್ಮಲ್ಲಿ ಏನು ಮಜಾ ಹುಟ್ಟಿಸಿದ್ದಾನೆ.
ವಿಸ್ಮಯ ರಂಗುಗಳಿಗೆ ಬೆಪ್ಪಾದ ಜನಪದ
ಬದುಕು ಕವಿತೆಗಳಲ್ಲಿ ಅವನನ್ನು ಹಣಿದಿದ್ದೇ
ಹಣೆದಿದ್ದು ಮತ್ತೆ ಎಲ್ಲಾ ಜೀವದ
ಉಸಿರಾದುದಕ್ಕೆ ಚಿಗುರಿ ಚಿಮ್ಮಿದಕ್ಕೆ
ಪೂರ್ಣ ಅರಳಿದ ಹೂ, ಕಳಿತ ಹಣ್ಣು
ಮಾಗಿದ ಎಲೆ ಸೋಗೆಯ ಮನೆ, ಆಳದ
ಬೇರು ಎಲ್ಲವೂ ಅವನಾಗಿದ್ದು ವಿಸ್ಮಯ ತಾಯ್ಗಂಡ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...