Home / ಕವನ / ಅನುವಾದ / ನಾಲ್ಕು ಪುಟ್ಟ ಪದ್ಯಗಳು

ನಾಲ್ಕು ಪುಟ್ಟ ಪದ್ಯಗಳು

ನಡು ಹಗಲಲ್ಲಿ ಹಚ್ಚಿಟ್ಟ ದೀಪ-
ಬೆಳಕಿನಲ್ಲಿ ಕಳೆದುಹೋದ ಬೆಳಕು.
ಬೆಳಕಿನ ಸಿದ್ಧಾಂತ ಮುರಿದು ಬಿತ್ತು :
ದೊಡ್ಡ ಬೆಳಕು ಹಿಮ್ಮೆಟ್ಟಿದೆ
ಹಣ್ಣಿನಿಂದ ಮರ ಬಿದ್ದ ಹಾಗೆ.

ಗಂಟೆಯ ತುಂಬ ಗಾಳಿ,
ಬಾರಿಸದಿದ್ದರೂ.
ಹಕ್ಕಿಯ ಮೈಯ ತುಂಬ ಹಾರಾಟ,
ನಿಶ್ಚಲವಾಗಿದ್ದರೂ.
ಆಕಾಶದ ತುಂಬ ಮೋಡ,
ಒಂಟಿಯಾಗಿದ್ದರೂ,
ಶಬ್ದದ ತುಂಬ ಧ್ವನಿ,
ಯಾರೂ ಮಾತಾಡದಿದ್ದರೂ.
ಎಲ್ಲರ ಎಲ್ಲದರ ತುಂಬ ಓಟ,
ರಸ್ತೆಗಳಿಲ್ಲದಿದ್ದರೂ.
ಎಲ್ಲ ಧಾವಿಸುತ್ತಿವೆ
ಆಗುವುದಕ್ಕೆ.

ನನ್ನ ನೆರಳು ನನಗೆ ವಿಧೇಯತೆ ಕಲಿಸಿದೆ.
ರೈಲಿನ ಮುರುಕು ಸೀಟು
ಸ್ಮಶಾನದ ಗೋಡೆ
ನಗರದ ಕಳ್ಳ ಗಲ್ಲಿ ಎಲ್ಲೆಡೆ
ನನ್ನ ಬೆಂಬಿಡದೆ ಬಂದಿದೆ.
ಮೈ ಹೇಗೇ ಇದ್ದರೂ
ನರಳು ಹೆಜ್ಜೆ ಹೆಜ್ಜೆ ಅನುಕರಿಸಿದೆ.
ಮೂಲೆ ಮುಡುಕುಗಳಿಗೆ ನಡೆದಿದೆ.
ಪ್ರಶ್ನೆಗಳಿಗೆ ಉತ್ತರಿಸದೆ ಸುಮ್ಮನಿದೆ.
ನನ್ನ ನೆರಳು ಇತರ ನೆರಳುಗಳನ್ನು
ಅಳವಡಿಸಿಕೊಳ್ಳಲು ಕಲಿಸಿದೆ.
ನನ್ನ ಮಟ್ಟ ನನಗೆ ತೋರಿಸಿದೆ.

ಪ್ರತಿ ಪದವೂ ಒಂದೊಂದು ಅನುಮಾನ
ಪ್ರತಿ ಮೌನವೂ ಒಂದೊಂದು ಸಂಶಯ.
ಆದರೂ ಇವುಗಳ ಹೆಣಿಗೆಯಲ್ಲಿ ಉಸಿರಾಡೋಣ.
ನಿದ್ದೆಯೆಂದರೆ ಮುಳುಗುವುದು.
ಎಚ್ಚರವೆಂದರೆ ಮತ್ತೆ ಮುಳುಗುವುದು.
ಆದರೂ ಇವುಗಳ ಹೆಣಿಗೆಯಲ್ಲಿ ಎಚ್ಚರಾಗೋಣ.
ಬದುಕೆಂದರೆ ಮಾಯವಾಗುವುದು
ಸಾವೆಂದರೆ ರೂಪಾಂತರವಾಗುವುದು
ಆದರೂ ಇವುಗಳ ಹೆಣಿಗೆಯಲ್ಲಿ
ಶೂನ್ಯದಲ್ಲೊಂದು ರುಜು ಹಾಕೋಣ.
*****
ಮೂಲ: ರಾಬರ್ಟೋ ಜು‌ಅರೋಝ್

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...