Home / ಕವನ / ಅನುವಾದ / ಥಿಯೇಟರ್ ಇಂಪ್ರೆಶನ್ಸ್

ಥಿಯೇಟರ್ ಇಂಪ್ರೆಶನ್ಸ್

ಟ್ರ್ಯಾಜಿಡಿಯ ಬಹಳ ಮುಖ್ಯವಾದ ಅಂಕವೆಂದರೆ ಆರನೆಯ ಅಂಕ.
ರಂಗಮಂಚದ ಪುನರುಜ್ಜೀವನ.
ವಿಗ್ಗು, ಡ್ರೆಸ್ಸುಗಳನ್ನು ಸರಿಮಾಡಿಕೊಳ್ಳುವುದು,
ಎದೆಗೆ ಚುಚ್ಚಿದ ಚೂರಿಯನ್ನು ಕೀಳುವುದು,
ಕತ್ತಿಗೆ ಬಿಗಿದ ನೇಣು ಹಗ್ಗತೆಗೆಯುವುದು,
ಪ್ರೇಕ್ಷಕರಿಗೆ ಮುಖ ತೋರಿಸಲೆಂದು
ನಾಟಕದಲ್ಲಿ ಬದುಕಿದವರೊಡನೆ ಸತ್ತರೂ ಎದ್ದು ನಿಲ್ಲುವುದು.
ಪ್ರೇಕ್ಷಕರಿಗೆ ನಾಯಕರ ವಂದನೆ
ಸತ್ತನಾಯಕಿ ತನ್ನ ಬಿಳಿಯ ಕೈಯನ್ನು
ಎದೆಯ ಗಾಯಕ್ಕೆ ಮರೆಯಾಗಿ ಇಟ್ಟುಕೊಳ್ಳುತ್ತಾಳೆ.
ನೇಣಿಗೆ ಸಿಕ್ಕ ಕೊರಳು ಬಾಗಿ ನಮಿಸುತ್ತದೆ.
ಪ್ರೇಕ್ಷಕರಿಗೆ ಎಲ್ಲರ ನಮಸ್ಕಾರ…
ದುಷ್ಟತನ ಸಭ್ಯತೆಯ ಕೈ ಹಿಡಿಯುತ್ತದೆ.
ಶೂಲಕ್ಕೇರಿದವನು ಕೊಂದವನ ನೋಡಿ ನಗುತ್ತಾನೆ.
ಕ್ರಾಂತಿಕಾರಿ, ಇಷ್ಟೂ ಕೋಪವಿಲ್ಲದೆ,
ನಿರಂಕುಶನ ಬಳಿ ಸಾರಿ ಬೆನ್ನ ಮೇಲೆ ಕೈ ಇಡುತ್ತಾನೆ.
ಚಿನ್ನದ ಬಣ್ಣದ ಚಪ್ಪಲಿ ಅನಂತತೆಯತ್ತ ಹೆಜ್ಜೆಹಾಕುತ್ತದೆ.
ಬೀಸುತಿರುವ ಕೈಯಲ್ಲಿನ ಹ್ಯಾಟು ನೀತಿಯನ್ನು ಗುಡಿಸಿಹಾಕುತ್ತದೆ.
ನಾಳೆ ಮತ್ತೆಹೊಸದಾಗಲು ಎಲ್ಲ ಸಿದ್ಧ.
ಮೂರು, ನಾಲ್ಕನೆಯ ಅಂಕದಲ್ಲಿ ಮೊದಲು ಸತ್ತವರೆಲ್ಲ
ಒಬ್ಬರ ಹಿಂದೊಬ್ಬರು ಸಾಲಾಗಿ ಬರುತ್ತಾರೆ.
ಇಷ್ಟೂ ಸುಳಿವಿಲ್ಲದಂತೆ ಮಾಯವಾಗಿದ್ದವರು
ಪವಾಡವೆಂಬಂತೆ ಕಾಣಿಸಿಕೊಳ್ಳುತ್ತಾರೆ.
ಈ ಕ್ಷಣಕ್ಕಾಗಿಯೇ ಅವರೆಲ್ಲ
ಕಾಸ್ಟ್ಯೂಮು ತೆಗೆಯದೆ ಮೇಕಪ್ಪು ಅಳಿಸದೆ
ತಾಳ್ಮೆಯಿಂದ ಕಾಯುತ್ತಾ ಮರೆಯಲ್ಲಿ ನಿಂತಿದ್ದರಲ್ಲ
ಅದು ನನ್ನ ಮನಸ್ಸನ್ನು ಕರಗಿಸಿಬಿಡುತ್ತದೆ.
ಪರದೆ ಇಳಿಯುತ್ತಾ
ಇನ್ನೇನು ನೆಲ ಮುಟ್ಟುವ ಮೊದಲು
ಕಣ್ಣಿಗೆ ಒಂದಿಷ್ಟು ಕಾಣುತ್ತದಲ್ಲ
ಅದು ನಿಜವಾದ ರಸಾನುಭವ :
ಉದುರಿದ ಹೂವೆತ್ತಿಕೊಳ್ಳಲು ಆತುರದಿಂದ ಚಾಚುವ ಕೈ,
ಬಿದ್ದ ಕತ್ತಿ ಎತ್ತಿಕೊಳ್ಳಲು ಚಾಚುವ ಇನ್ನೊಂದು ಕೈ.
ಅದೃಶ್ಯವಾದ ಮೂರನೆಯ ಕೈ
ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತದೆ
ನನ್ನ ಕತ್ತು ಹಿಸುಕುತ್ತದೆ.
*****
ಮೂ: ವಿಸ್ಲಾವ ಝ್ಯಿಂಬೋಸ್ಕ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...