Home / ಕವನ / ಅನುವಾದ / ಕಾವ್ಯ

ಕಾವ್ಯ

ಅನಾದಿಯ ವಯಸ್ಸಲ್ಲಿ ಒಮ್ಮೆ
ಕಾವ್ಯ ಬಂದಿತ್ತು ನನ್ನನ್ನು ಹುಡುಕಿಕೊಂಡು.
ಗೊತಿಲ್ಲ, ನನಗೆ ಗೊತಿಲ್ಲ
ಎಲ್ಲಿಂದ ಬಂತೋ, ನದಿಯಿಂದಲೋ, ಚಳಿಯಿಂದಲೋ,
ಹೇಗೆ ಬಂತೋ ಯಾವಾಗ ಬಂತೋ ಗೊತಿಲ್ಲ.
ದಿನಗಳಿರಲಿಲ್ಲ, ಶಬ್ಬಗಳಿರಲಿಲ್ಲ, ನಿಶ್ಯಬ್ದವಿರಲಿಲ್ಲ.
ಬೀದಿಯಲ್ಲಿದ್ದ ನನ್ನನ್ನು ಕರೆಯಿತು.
ಕತ್ತಲ ಕೊಂಬೆಗೆ ಜೋತುಬಿದ್ದವನನ್ನು,
ಬೆಂಕಿಯುರಿಯಲ್ಲಿದ್ದವನನ್ನು,
ಒಬ್ಬನೇ ವಾಪಸ್ಸು ಹೋಗುತ್ತಿದ್ದವನನ್ನು,
ಸಾವಿರ ಜನರಲ್ಲಿ ಒಬ್ಬನಾಗಿ ಮುಖವಿಲ್ಲದಿದ್ದವನನ್ನು,
ಕರೆದು ಮೈದಡವಿತು.

ಏನು ಹೇಳಲಿ? ತಿಳಿಯಲಿಲ್ಲ,
ನಾಲಗೆಯಲ್ಲಿಶಬ್ದವಿರಲಿಲ್ಲ, ಕಣ್ಣಲ್ಲಿ ಬೆಳಕಿರಲಿಲ್ಲ.
ಜ್ವರವೋ, ಹಾರಲು ಮರೆತ ರೆಕ್ಕೆಗಳೋ
ನನ್ನ ಮನಸ್ಸಿನೊಳಗೇನೋ ಚಲನೆ.

ಒಳಗಿನ ಕಿಡಿಯ ಬೆಳಕಿನಲ್ಲಿ
ಒಂದಿಷ್ಟು ದಾರಿಮಾಡಿಕೊಂಡೆ.
ಮೊದಲ ಸಾಲು ಬರೆದೆ.
ಅಸ್ಪಷ್ಟ, ಅರ್ಥಹೀನ, ಅಶಕ್ತಸಾಲು,
ಏನೇನೂ ಗೊತ್ತಿಲ್ಲದವನ
ಶುದ್ಧ ವ್ಯರ್‍ಥಾಲಾಪ, ಶುದ್ಧ ಜ್ಞಾನ.

ತಟ್ಟನೆ ಆಕಾಶದ ಚಿಲಕ ತೆಗೆದು
ಗ್ರಹ ತಾರೆಗಳು ಮೈದೆರೆದು
ಸುತ್ತಿಕೊಂಡ ಕತ್ತಲಲ್ಲಿ
ಜಗದ ಮೇಲೆ
ಬಾಣ, ಬೆಂಕಿ, ಹೂಗಳ ಒಗಟು ತೂರುವ
ನೆರಳ ರಂಧ್ರಗಳು.
ನಾನು, ಅಣುವಿನಣುವಿನಣುವಾದ ನಾನು
ನಕ್ಷತ್ರ ಖಚಿತ ಮಹಾ ಶೂನ್ಯವನ್ನು
ಅಗಾಧ ರಹಸ್ಯದ ಬಿಂಬವನ್ನು ಹೀರಿ
ಪರಿಶುದ್ಧ ಬಯಲ ಅಂಶವಾಗಿ
ನಕ್ಷತ್ರಗಳೊಡನೆ ಹೊರಳಿದೆ.
ನನ್ನೆದೆ ಭಾವ ಗಾಳಿಯೊಡನೆ ತೇಲಿತು.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...