Home / ಕವನ / ಅನುವಾದ / ಕಾವ್ಯ

ಕಾವ್ಯ

ಅನಾದಿಯ ವಯಸ್ಸಲ್ಲಿ ಒಮ್ಮೆ
ಕಾವ್ಯ ಬಂದಿತ್ತು ನನ್ನನ್ನು ಹುಡುಕಿಕೊಂಡು.
ಗೊತಿಲ್ಲ, ನನಗೆ ಗೊತಿಲ್ಲ
ಎಲ್ಲಿಂದ ಬಂತೋ, ನದಿಯಿಂದಲೋ, ಚಳಿಯಿಂದಲೋ,
ಹೇಗೆ ಬಂತೋ ಯಾವಾಗ ಬಂತೋ ಗೊತಿಲ್ಲ.
ದಿನಗಳಿರಲಿಲ್ಲ, ಶಬ್ಬಗಳಿರಲಿಲ್ಲ, ನಿಶ್ಯಬ್ದವಿರಲಿಲ್ಲ.
ಬೀದಿಯಲ್ಲಿದ್ದ ನನ್ನನ್ನು ಕರೆಯಿತು.
ಕತ್ತಲ ಕೊಂಬೆಗೆ ಜೋತುಬಿದ್ದವನನ್ನು,
ಬೆಂಕಿಯುರಿಯಲ್ಲಿದ್ದವನನ್ನು,
ಒಬ್ಬನೇ ವಾಪಸ್ಸು ಹೋಗುತ್ತಿದ್ದವನನ್ನು,
ಸಾವಿರ ಜನರಲ್ಲಿ ಒಬ್ಬನಾಗಿ ಮುಖವಿಲ್ಲದಿದ್ದವನನ್ನು,
ಕರೆದು ಮೈದಡವಿತು.

ಏನು ಹೇಳಲಿ? ತಿಳಿಯಲಿಲ್ಲ,
ನಾಲಗೆಯಲ್ಲಿಶಬ್ದವಿರಲಿಲ್ಲ, ಕಣ್ಣಲ್ಲಿ ಬೆಳಕಿರಲಿಲ್ಲ.
ಜ್ವರವೋ, ಹಾರಲು ಮರೆತ ರೆಕ್ಕೆಗಳೋ
ನನ್ನ ಮನಸ್ಸಿನೊಳಗೇನೋ ಚಲನೆ.

ಒಳಗಿನ ಕಿಡಿಯ ಬೆಳಕಿನಲ್ಲಿ
ಒಂದಿಷ್ಟು ದಾರಿಮಾಡಿಕೊಂಡೆ.
ಮೊದಲ ಸಾಲು ಬರೆದೆ.
ಅಸ್ಪಷ್ಟ, ಅರ್ಥಹೀನ, ಅಶಕ್ತಸಾಲು,
ಏನೇನೂ ಗೊತ್ತಿಲ್ಲದವನ
ಶುದ್ಧ ವ್ಯರ್‍ಥಾಲಾಪ, ಶುದ್ಧ ಜ್ಞಾನ.

ತಟ್ಟನೆ ಆಕಾಶದ ಚಿಲಕ ತೆಗೆದು
ಗ್ರಹ ತಾರೆಗಳು ಮೈದೆರೆದು
ಸುತ್ತಿಕೊಂಡ ಕತ್ತಲಲ್ಲಿ
ಜಗದ ಮೇಲೆ
ಬಾಣ, ಬೆಂಕಿ, ಹೂಗಳ ಒಗಟು ತೂರುವ
ನೆರಳ ರಂಧ್ರಗಳು.
ನಾನು, ಅಣುವಿನಣುವಿನಣುವಾದ ನಾನು
ನಕ್ಷತ್ರ ಖಚಿತ ಮಹಾ ಶೂನ್ಯವನ್ನು
ಅಗಾಧ ರಹಸ್ಯದ ಬಿಂಬವನ್ನು ಹೀರಿ
ಪರಿಶುದ್ಧ ಬಯಲ ಅಂಶವಾಗಿ
ನಕ್ಷತ್ರಗಳೊಡನೆ ಹೊರಳಿದೆ.
ನನ್ನೆದೆ ಭಾವ ಗಾಳಿಯೊಡನೆ ತೇಲಿತು.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...