Home / ಕವನ / ಅನುವಾದ / ಪರಿವರ್ತನೆ

ಪರಿವರ್ತನೆ

ಸಂಗೀತ ಮತ್ತೆ ಬದುಕಿ ಬಂದಂತೆ…
ಲೋಕದಾಚೆಯಿಂದ ಇಲ್ಲಿಗೆ ತಂದವರು,
ಮನಸ್ಸಿನ ಒಳಕಿವಿಯ ಸುರುಳಿ ಮೆಟ್ಟಿಲಲ್ಲಿ
ಕೈ ಹಿಡಿದು ನಡೆಸಿದವರು ಯಾರು?
ವರ್ತಮಾನ ತನ್ನನ್ನಳಿಸಿಕೊಂಡು ತಾನೆ ಅದಾದಂತೆ
ಮಾಯವಾದ ಒಂದು ಕ್ಷಣವೊಂದು
ಮತ್ತೆ ಹಿಂದಿರುಗಿದಂತೆ,
ನೆಲದೊಳಗಿನ ಸ್ವರಗಳ ಮೇಲೆತ್ತಿದಂತೆ
ಶಬ್ದವಿಲ್ಲದ ಶಬ್ದ ಹುಟ್ಟುವುದು
ಸಾವಿನ ಗಳಿಗೆಯಲ್ಲಿ-ತಥಾಸ್ತು.
ಶಾಲೆಯೊಳಗಿನ ಚರ್ಚಿನಲ್ಲಿ
ಎಷ್ಟೋ ಬಾರಿ ಮಾತಾಡಿದ್ದೇನೆ
ವಿಶ್ವಾಸವಿಲ್ಲದೆ. ಈಗ ಅವೇ ಮಾತನ್ನು
ಇಲ್ಲದ ತುಟಿಗಳು ನುಡಿಯುವುದು ಕೇಳುತ್ತೇನೆ.
ಗಳಿಗೆ ಪಾತ್ರೆಯಲ್ಲಿ ಮರಳು ಸುರಿಯುವ ಶಬ್ದ.
ಇರುಳಿನಲ್ಲಿ ನಾನು ಹೊರಳಿದಂತೆ ಹೊರಳುವ ಹೊತ್ತು,
ತಲೆಯೊಳಗೆ ಬಾರಿಸುವ ಗಂಟೆ ಸದ್ದು,
‘ಈ ಜಗತಿನಲ್ಲಿ ಸಾಯಲಿರುವ ಮೊದಲ ಮನುಷ್ಯ ನಾನಲ್ಲ’
ಎಪಿಕ್ಟೆಟಸ್‍ನಂತೆ ಹೇಳಿಕೊಳ್ಳುತ್ತೇನೆ.
ಆ ಕ್ಲಣದಲ್ಲೇ ನನ್ನ ರಕ್ತದೊಳಗೆ
ಜಗತ್ತುಮುರಿದು ಬೀಳುತ್ತಿರುವ ಸದ್ದು.
ಮುಂಬೆಳಕಿಲ್ಲದ ನಾಡಿನಿಂದ ಹಿಂದಿರುಗಿದಾಗ
ಗಿಲ್ಗಮಿಶ್ ನಿಗಾದ ದುಃಖವೆ ನನ್ನ ದುಃಖ.
ಮಬ್ಬುಗತಲ ಈ ಭೂಮಿಯ ಮೇಲೆ
ಪ್ರತಿಯೊಬ್ಬ ಮನುಷ್ಯನೂ ಒಬ್ಬ ಆಡಂ
ಅವನೊಂದಿಗೇ ಜಗತ್ತುತೊಡಗಿ
ಅವನೊಂದಿಗೇ ಮುಗಿಯುವುದು.
‘ಮೊದಲು’ ಮತ್ತು ‘ಆಮೇಲೆ’ ಅನ್ನುವ
ಕಲ್ಲಿನ ಚೌಕಂಸಗಳ ನಡುವೆ
ಮತ್ತೆಂದೂ ಮರಳದ ಈ ಕ್ಷಣದಲ್ಲಿ
ನಾನೇ ಪ್ರಥಮ ಮನುಷ್ಯ, ನಾನೇ ಕೊನೆಯವನು ಕೂಡಾ.
ಹೀಗನ್ನುತ್ತಿರುವಾಗ ಕ್ಷಣ…
ಶುದ್ಧಕಾಲ.
*****
ಮೂಲ: ಆಕ್ಟೇವಿಯೊ ಪಾಝ್

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...