Home / ಕಥೆ / ಕಿರು ಕಥೆ / ರಾಜಕೀಯ ಬಿಸಿನೆಸ್ಸು

ರಾಜಕೀಯ ಬಿಸಿನೆಸ್ಸು

ಅವರು ಕೋಟ್ಯಾಧೀಶ ಮನುಷ್ಯ. ಹತ್ತಾರು ಬಿಸಿನೆಸ್ಸುಗಳಿಂದ ಭಾರಿ ವರ್ಚಸ್ಸು ಗಳಿಸಿದ್ದರು. ದುಡ್ಡು ಅವರಲ್ಲಿ ಕೊಳೆಯಾಗಿ ಬಿದ್ದಿದೆಯೆಂದು ಜನ ಮಾತಾಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯದು ತುಂಬು ಸಂಸಾರ. ನಾಲ್ಕು ಜನ ಗಂಡು ಮಕ್ಕಳು. ನಾಲ್ಕು ಜನ ಹೆಣ್ಣನು ಮಕ್ಕಳು. ಗಂಡು ಮಕ್ಕಳಿಗೆ ಮತ್ತು ನಾಲ್ಕು ಜನ ಅಳಿಯಂದಿರೂ ಒಂದೊಂದು ಬಿಸಿನೆಸ್ಸಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯನ್ನು ಮೊದಲ್ಗೊಂಡು ಪ್ರತಿಯೊಬ್ಬರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿದ್ದರು. ಚುನಾವಣಾ ಸಮಯದಲ್ಲಿ ತಮ್ಮ ತಮ್ಮ ಪಕ್ಷಗಳಿಗೆ ಅಭ್ಯರ್ಥಿಗಳಿಗೆ ಅವರು ಸಹಾಯ ಮಾಡುತ್ತಿದ್ದರು. ಆದರೆ ಅವರೆಂದೂ ರಾಜಕೀಯ ಅಧಿಕಾರಕ್ಕಾಗಿ ಹಾತೊರೆಯಲಿಲ್ಲ. ಇದನ್ನು ಗಮನಿಸುತ್ತ ಬಂದಿದ್ದ ಪತ್ರಕರ್ತನೊಬ್ಬ ಕೋಟ್ಯಾಧೀಶರನ್ನು ಸಂದರ್ಶಿಸಿದ.

“ನೀವು ಬಹಳ ದಿನಗಳಿಂದಲೂ ಈ ರಾಜಕೀಯ ಪಕ್ಷದಲ್ಲಿದ್ದೀರಿ. ಯಾಕೆ ಎಂ.ಎಲ್.ಎ ಅಥವಾ ಎಂ.ಪಿ. ಆಗುವ ಮನಸ್ಸು ಮಾಡಿಲ್ಲ?” ಕುತೂಹಲದಿಂದ ಕೇಳಿದ ಪತ್ರಕರ್ತ.

“ರಾಜಕೀಯ ಅಧಿಕಾರದಲ್ಲಿ ನನಗೆ ಚೂರು ಆಸಕ್ತಿಯಿಲ್ಲ” ಕೋಟ್ಯಾಧೀಶರು ಸ್ಪಷ್ಟವಾಗಿಯೇ ಹೇಳಿದರು.

“ಆದರೆ ನೀವು, ನಿಮ್ಮ ಮಕ್ಕಳು, ಅಳಿಯಂದಿರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿ ಇದ್ದೀರಲ್ಲ.”

“ಪಕ್ಷದಲ್ಲಿದ್ದರೆ ಅಧಿಕಾರದಲ್ಲಿರಬೇಕಂತ ಎಲ್ಲಿದೆ?”

“ಬೇರೆ ಬೇರೆ ಪಕ್ಷಗಳಲ್ಲಿರುವುದರಿಂದ ನಿಮ್ಮ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟುವುದಿಲ್ಲವೆ?”

“ಖಂಡಿತವಾಗಿಯೂ ಇಲ್ಲ”

“ಒಂದೇ ಪಕ್ಷದಲ್ಲಿರುವವರ ನಡುವೆ ಸಹಮತ ಇರುವುದಿಲ್ಲ ಇದು ನಿಮಗೆ ಹೇಗೆ ಸಾಧ್ಯ?”

“ಸಾಧ್ಯವಿದೆ. ನಮಗೆ ಬಿಸಿನೆಸ್ಸು ಮುಖ್ಯ. ರಾಜಕೀಯ ಮುಖ್ಯವಲ್ಲ. ನಮ್ಮ ವ್ಯವಹಾರಕ್ಕೆ ಆಡಳಿತ ಪಕ್ಷ, ವಿರೋಧ ಪಕ್ಷ, ಎರಡೂ ಬೇಕು, ಅವುಗಳ ತತ್ವ ಸಿದ್ಧಾಂತಗಳಲ್ಲ. ರಾಜಕೀಯ ಅಧಿಕಾರ ತಾತ್ಕಾಲಿಕ. ಬಿಸಿನೆಸ್ಸು ನಿರಂತರ, ನಾವು ಎಲ್ಲ ಪಕ್ಷಗಳಲ್ಲಿರುವುದರಿಂದ ನಮಗೆ ಆತಂಕವಿಲ್ಲ” ಒಳಸತ್ಯವನ್ನು ಬಹಿರಂಗಗೊಳಿಸಿದರು ಕೋಟ್ಯಾಧೀಶರು.

ಪತ್ರಕರ್ತ ಅವರನ್ನು ಅದ್ಭುತ ಎಂಬಂತೆ ದೃಷ್ಟಿಸುತ್ತ ಕುಳಿತ.

*****

 

 

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...