Home / ಕಥೆ / ಕಿರು ಕಥೆ / ರಾಜಕೀಯ ಬಿಸಿನೆಸ್ಸು

ರಾಜಕೀಯ ಬಿಸಿನೆಸ್ಸು

ಅವರು ಕೋಟ್ಯಾಧೀಶ ಮನುಷ್ಯ. ಹತ್ತಾರು ಬಿಸಿನೆಸ್ಸುಗಳಿಂದ ಭಾರಿ ವರ್ಚಸ್ಸು ಗಳಿಸಿದ್ದರು. ದುಡ್ಡು ಅವರಲ್ಲಿ ಕೊಳೆಯಾಗಿ ಬಿದ್ದಿದೆಯೆಂದು ಜನ ಮಾತಾಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯದು ತುಂಬು ಸಂಸಾರ. ನಾಲ್ಕು ಜನ ಗಂಡು ಮಕ್ಕಳು. ನಾಲ್ಕು ಜನ ಹೆಣ್ಣನು ಮಕ್ಕಳು. ಗಂಡು ಮಕ್ಕಳಿಗೆ ಮತ್ತು ನಾಲ್ಕು ಜನ ಅಳಿಯಂದಿರೂ ಒಂದೊಂದು ಬಿಸಿನೆಸ್ಸಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯನ್ನು ಮೊದಲ್ಗೊಂಡು ಪ್ರತಿಯೊಬ್ಬರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿದ್ದರು. ಚುನಾವಣಾ ಸಮಯದಲ್ಲಿ ತಮ್ಮ ತಮ್ಮ ಪಕ್ಷಗಳಿಗೆ ಅಭ್ಯರ್ಥಿಗಳಿಗೆ ಅವರು ಸಹಾಯ ಮಾಡುತ್ತಿದ್ದರು. ಆದರೆ ಅವರೆಂದೂ ರಾಜಕೀಯ ಅಧಿಕಾರಕ್ಕಾಗಿ ಹಾತೊರೆಯಲಿಲ್ಲ. ಇದನ್ನು ಗಮನಿಸುತ್ತ ಬಂದಿದ್ದ ಪತ್ರಕರ್ತನೊಬ್ಬ ಕೋಟ್ಯಾಧೀಶರನ್ನು ಸಂದರ್ಶಿಸಿದ.

“ನೀವು ಬಹಳ ದಿನಗಳಿಂದಲೂ ಈ ರಾಜಕೀಯ ಪಕ್ಷದಲ್ಲಿದ್ದೀರಿ. ಯಾಕೆ ಎಂ.ಎಲ್.ಎ ಅಥವಾ ಎಂ.ಪಿ. ಆಗುವ ಮನಸ್ಸು ಮಾಡಿಲ್ಲ?” ಕುತೂಹಲದಿಂದ ಕೇಳಿದ ಪತ್ರಕರ್ತ.

“ರಾಜಕೀಯ ಅಧಿಕಾರದಲ್ಲಿ ನನಗೆ ಚೂರು ಆಸಕ್ತಿಯಿಲ್ಲ” ಕೋಟ್ಯಾಧೀಶರು ಸ್ಪಷ್ಟವಾಗಿಯೇ ಹೇಳಿದರು.

“ಆದರೆ ನೀವು, ನಿಮ್ಮ ಮಕ್ಕಳು, ಅಳಿಯಂದಿರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿ ಇದ್ದೀರಲ್ಲ.”

“ಪಕ್ಷದಲ್ಲಿದ್ದರೆ ಅಧಿಕಾರದಲ್ಲಿರಬೇಕಂತ ಎಲ್ಲಿದೆ?”

“ಬೇರೆ ಬೇರೆ ಪಕ್ಷಗಳಲ್ಲಿರುವುದರಿಂದ ನಿಮ್ಮ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟುವುದಿಲ್ಲವೆ?”

“ಖಂಡಿತವಾಗಿಯೂ ಇಲ್ಲ”

“ಒಂದೇ ಪಕ್ಷದಲ್ಲಿರುವವರ ನಡುವೆ ಸಹಮತ ಇರುವುದಿಲ್ಲ ಇದು ನಿಮಗೆ ಹೇಗೆ ಸಾಧ್ಯ?”

“ಸಾಧ್ಯವಿದೆ. ನಮಗೆ ಬಿಸಿನೆಸ್ಸು ಮುಖ್ಯ. ರಾಜಕೀಯ ಮುಖ್ಯವಲ್ಲ. ನಮ್ಮ ವ್ಯವಹಾರಕ್ಕೆ ಆಡಳಿತ ಪಕ್ಷ, ವಿರೋಧ ಪಕ್ಷ, ಎರಡೂ ಬೇಕು, ಅವುಗಳ ತತ್ವ ಸಿದ್ಧಾಂತಗಳಲ್ಲ. ರಾಜಕೀಯ ಅಧಿಕಾರ ತಾತ್ಕಾಲಿಕ. ಬಿಸಿನೆಸ್ಸು ನಿರಂತರ, ನಾವು ಎಲ್ಲ ಪಕ್ಷಗಳಲ್ಲಿರುವುದರಿಂದ ನಮಗೆ ಆತಂಕವಿಲ್ಲ” ಒಳಸತ್ಯವನ್ನು ಬಹಿರಂಗಗೊಳಿಸಿದರು ಕೋಟ್ಯಾಧೀಶರು.

ಪತ್ರಕರ್ತ ಅವರನ್ನು ಅದ್ಭುತ ಎಂಬಂತೆ ದೃಷ್ಟಿಸುತ್ತ ಕುಳಿತ.

*****

 

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...